AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Employment: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 10 ಲಕ್ಷ ಹುದ್ದೆಗಳ ಭರ್ತಿಗೆ ಕೇಂದ್ರ ಸರ್ಕಾರ ನಿರ್ಧಾರ

‘ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳು ಸಚಿವಾಲಯಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಿದ್ದಾರೆ’ ಎಂದು ಪ್ರಧಾನಿ ಕಾರ್ಯಾಲಯವು ಹೇಳಿದೆ.

Employment: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 10 ಲಕ್ಷ ಹುದ್ದೆಗಳ ಭರ್ತಿಗೆ ಕೇಂದ್ರ ಸರ್ಕಾರ ನಿರ್ಧಾರ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 14, 2022 | 11:07 AM

Share

ದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ಬಾಕಿಯಿರುವ ಸುಮಾರು 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಧಾನ ಮಂತ್ರಿ ಕಚೇರಿಯು (Prime Minister’s Office – PMO) ಮಂಗಳವಾರ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಕಾರ್ಯಾಲಯವು, ‘ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳು ಸಚಿವಾಲಯಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಿದ್ದಾರೆ’ ಎಂದು ಹೇಳಿದೆ.

ವಿವಿಧ ಇಲಾಖೆಗಳ ಉದ್ಯೋಗಿಗಳ ಪರಿಸ್ಥಿತಿ, ಮಾನವ ಸಂಪನ್ಮೂಲದ ಸ್ಥಿತಿಗತಿ ಪರಿಶೀಲಿಸಿದ ಪ್ರಧಾನಿ, ಮುಂದಿನ ಒಂದೂವರೆ ವರ್ಷಗಳ ಅವಧಿಯಲ್ಲಿ 10 ಲಕ್ಷ ಮಂದಿಯನ್ನು ನೇಮಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಟ್ವೀಟ್​ನಲ್ಲಿ ಮಾಹಿತಿ ನೀಡಲಾಗಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದ ಪ್ರಧಾನಿ, ನೇಮಕಾತಿ ಪ್ರಕ್ರಿಯೆಗೆ ವೇಗ ಕೊಡಬೇಕು ಎಂದು ಸೂಚಿಸಿದ್ದರು. ರಾಜ್ಯಸಭೆಗೆ ಕಳೆದ ಫೆಬ್ರುವರಿ ತಿಂಗಳಲ್ಲಿ ಮಾಹಿತಿ ನೀಡಿದ್ದ ಸರ್ಕಾರವು ಮಾರ್ಚ್ 1, 2020ಕ್ಕೆ ದೇಶದಲ್ಲಿ ಪ್ರಸ್ತುತ 87 ಲಕ್ಷ ಖಾಲಿ ಹುದ್ದೆಗಳಿವೆ ಎಂದು ಹೇಳಿತ್ತು.

ನಿರುದ್ಯೋಗ ವಿಚಾರವಾಗಿ ಕೇಂದ್ರ ಸರ್ಕಾರವನ್ನು ವಿರೋಧ ಪಕ್ಷಗಳು ಸಾಕಷ್ಟು ಬಾರಿ ಟೀಕಿಸಿದ್ದವು. ಇದೀಗ ದೊಡ್ಡಮಟ್ಟದಲ್ಲಿ ಉದ್ಯೋಗ ನೇಮಕಾತಿಗೆ ಆದೇಶಿಸಿರುವ ಸರ್ಕಾರವು ಈ ಟೀಕೆಗಳಿಗೆ ಉತ್ತರ ಕೊಡಲು ಮುಂದಾಗಿದೆ. ವಿವಿಧ ಸರ್ಕಾರಿ ಇಲಾಖೆ ಮತ್ತು ಸಚಿವವಾಲಯಗಳಲ್ಲಿ ಬಾಕಿಯಿರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಇನ್ನು ಮುಂದೆ ಚುರುಕಾಗಲಿದೆ.

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇದು ಶುಭ ಸುದ್ದಿ. ಆದರೆ ಯಾವೆಲ್ಲಾ ಇಲಾಖೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ? ಭರ್ತಿಗೆ ಆದೇಶ ಎಂದು ಹೊರಡಿಸಲಾಗುತ್ತದೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಬಿಜೆಪಿ ಸರ್ಕಾರದ ಎರಡನೇ ಅವಧಿಯು ಪೂರ್ಣಗೊಳ್ಳುವುದರ ಒಳಗೆ ನೇಮಕಾತಿಗೆ ಆದೇಶ ಹೊರಡಿಸಬಹುದು ಎಂದು ಹೇಳಲಾಗುತ್ತಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:04 am, Tue, 14 June 22

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್