AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar: ವಿಶ್ವವಿದ್ಯಾಲಯದಲ್ಲಿ 10 ವರ್ಷ ಸೇವೆ ಸಲ್ಲಿಸಿದ 13 ಸಿಬ್ಬಂದಿಯ ಉದ್ಯೋಗ ಕಾಯಂಗೊಳಿಸಲು ಹೈಕೋರ್ಟ್ ಸೂಚನೆ

ಪೀಠವು ತನ್ನ ತೀರ್ಪಿನಲ್ಲಿ, ವಿಶ್ವವಿದ್ಯಾಲಯವು ತನ್ನ ಕೆಲಸ ಕಾರ್ಯಗಳ ಸುಗಮ ನಿರ್ವಹಣೆಗಾಗಿ ಎಸ್.ಜಿ ನಾಗೇಂದ್ರ ಸೇರಿದಂತೆ 13 ಮಂದಿಯನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಿಸಿಕೊಂಡಿದ್ದು, ಈ ಸಿಬ್ಬಂದಿಯನ್ನು 10 ವರ್ಷಕ್ಕೂ ಹೆಚ್ಚು ಕಾಲ ದುಡಿಸಿಕೊಂಡಿದೆ. ಇದೀಗ ಅವರ ಸೇವೆ ಕಾಯಂಗೊಳಿಸಲು ನಿರಾಕರಿಸಿರುವ ಕ್ರಮ ಸಮರ್ಥನೀಯವಲ್ಲ ಎಂದು ಕಿವಿ ಹಿಂಡಿದೆ.

Bidar:  ವಿಶ್ವವಿದ್ಯಾಲಯದಲ್ಲಿ 10 ವರ್ಷ ಸೇವೆ ಸಲ್ಲಿಸಿದ 13 ಸಿಬ್ಬಂದಿಯ ಉದ್ಯೋಗ ಕಾಯಂಗೊಳಿಸಲು ಹೈಕೋರ್ಟ್ ಸೂಚನೆ
Bidar: ವಿಶ್ವವಿದ್ಯಾಲಯದಲ್ಲಿ 10 ವರ್ಷ ಸೇವೆ ಸಲ್ಲಿಸಿದ 13 ಸಿಬ್ಬಂದಿಯ ಉದ್ಯೋಗ ಕಾಯಂಗೊಳಿಸಲು ಹೈಕೋರ್ಟ್ ಸೂಚನೆ
TV9 Web
| Updated By: ಸಾಧು ಶ್ರೀನಾಥ್​|

Updated on: Sep 21, 2022 | 10:08 PM

Share

ಹತ್ತು ವರ್ಷಕ್ಕಿಂತ ಹೆಚ್ಚು ಸಮಯ ಸೇವೆ ಸಲ್ಲಿಸಿದ ಸಿಬ್ಬಂದಿಯ ಸೇವೆ ಕಾಯಂಗೊಳಿಸುವ (regularize staff) ನಿಟ್ಟಿನಲ್ಲಿ ಅಂತಹವರು ಸಲ್ಲಿಸಿರುವ ಮನವಿ ಪರಿಗಣಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠವು ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸೂಚಿಸಿದೆ. ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (Karnataka veterinary animal and fisheries sciences university bidar) ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿರುವ ಹೈಕೋರ್ಟ್ ವಿಭಾಗೀಯ ಪೀಠವು, ಈ ಆದೇಶ ಮಾಡಿದೆ (Karnataka high court).

ಪೀಠವು ತನ್ನ ತೀರ್ಪಿನಲ್ಲಿ, ವಿಶ್ವವಿದ್ಯಾಲಯವು ತನ್ನ ಕೆಲಸ ಕಾರ್ಯಗಳ ಸುಗಮ ನಿರ್ವಹಣೆಗಾಗಿ ಎಸ್.ಜಿ ನಾಗೇಂದ್ರ ಸೇರಿದಂತೆ 13 ಮಂದಿಯನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಿಸಿಕೊಂಡಿದ್ದು, ಈ ಸಿಬ್ಬಂದಿಯನ್ನು 10 ವರ್ಷಕ್ಕೂ ಹೆಚ್ಚು ಕಾಲ ದುಡಿಸಿಕೊಂಡಿದೆ. ಇದೀಗ ಅವರ ಸೇವೆ ಕಾಯಂಗೊಳಿಸಲು ನಿರಾಕರಿಸಿರುವ ಕ್ರಮ ಸಮರ್ಥನೀಯವಲ್ಲ. ಆದ್ದರಿಂದ, ತಾತ್ಕಾಲಿಕ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 13 ಮಂದಿ ಸಿಬ್ಬಂದಿಯನ್ನು ಉಮಾದೇವಿ ಪ್ರಕರಣದಲ್ಲಿ ಹೈಕೋರ್ಟ್ ಸಾಂವಿಧಾನಿಕ ಪೀಠ ನೀಡಿರುವ ತೀರ್ಪಿನ್ವಯ ಪರಿಗಣಿಸಬೇಕು ಎಂದು ನಿರ್ದೇಶಿಸಿದೆ.

ಹಿನ್ನೆಲೆ: 2004-2009ರ ನಡುವೆ ಎಸ್.ಜಿ ನಾಗೇಂದ್ರ, ಎಸ್.ಆರ್ ಧನಂಜಯ ಹಾಗೂ ಕೆ.ಕೆ ವಿಮಲಾ ಸೇರಿದಂತೆ ಒಟ್ಟು 13 ಮಂದಿಯನ್ನು ವಿವಿ ಸಹಾಯಕ, ಪ್ರಯೋಗಾಲಯ ಸಹಾಯಕ ಹಾಗೂ ಇನ್ನಿತರ ಹುದ್ದೆಗಳಿಗೆ ತಾತ್ಕಾಲಿಕ ಆಧಾರದ ಮೇಲೆ ನೇಮಕಗೊಂಡಿತ್ತು. 2015ರ ಜುಲೈ 7ರಂದು ಇವರು ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳ ಕಾಯಂ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿತ್ತು.

ಈ ಅಧಿಸೂಚನೆ ಪ್ರಶ್ನಿಸಿ 13 ಸಿಬ್ಬಂದಿಯೂ ಹೈಕೋರ್ಟ್‌ ಮೆಟ್ಟಿಲೇರಿದ್ದರು. 2019ರಲ್ಲಿ ಇವರ ಅರ್ಜಿ ಇತ್ಯರ್ಥಪಡಿಸಿದ್ದ ಏಕ ಸದಸ್ಯ ಪೀಠ, ಅರ್ಜಿದಾರರು ತಮ್ಮ ಸೇವೆ ಕಾಯಂಗೊಳಿಸಲು ಕೋರಿ ವಿವಿಗೆ ಹೊಸದಾಗಿ ಮನವಿ ಪತ್ರ ಸಲ್ಲಿಸಬಹುದು ಎಂದು ಸೂಚಿಸಿತ್ತು. ಅದರಂತೆ 2019ರ ಜೂನ್ 26ರಂದು ಸಿಬ್ಬಂದಿ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿದ್ದ ವಿವಿ, ಸೇವೆ ಕಾಯಂಗೊಳಿಸಲು ಸಾಧ್ಯವಿಲ್ಲ ಎಂದು ಹಿಂಬರಹ ನೀಡಿತ್ತು.

ವಿಶ್ವವಿದ್ಯಾಲಯದ ನಿರ್ಣಯ ಪ್ರಶ್ನಿಸಿ ಸಿಬ್ಬಂದಿ ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಏಕ ಸದಸ್ಯ ಪೀಠ ಸಿಬ್ಬಂದಿಯ ಕೋರಿಕೆ ಪುರಸ್ಕರಿಸಿ ವಿವಿಯ ಹಿಂಬರಹವನ್ನು ರದ್ದುಪಡಿಸಿತ್ತು. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಶ್ವವಿದ್ಯಾಲಯವು ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಮೇಲ್ಮನವಿ ವಜಾಗೊಳಿಸಿರುವ ವಿಭಾಗೀಯ ಪೀಠ, ವಿವಿಯ ಹಿಂಬರಹವನ್ನು ರದ್ದುಪಡಿಸಿದೆಯಲ್ಲದೇ, ನೌಕರರ ಮನವಿ ಪರಿಗಣಿಸುವಂತೆ ಆದೇಶಿಸಿದೆ. (ಮೂಲ -lawtime)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ