AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IB Recruitment 2025: ಗುಪ್ತಚರ ಇಲಾಖೆಯಲ್ಲಿ 4987 ಹುದ್ದೆಗಳಿಗೆ ನೇಮಕಾತಿ, 10th ಪಾಸಾಗಿದ್ರೆ ಅರ್ಜಿ ಸಲ್ಲಿಸಿ

ಗುಪ್ತಚರ ಇಲಾಖೆ (ಐಬಿ) 4987 ಭದ್ರತಾ ಸಹಾಯಕ/ಕಾರ್ಯನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜುಲೈ 26 ರಿಂದ ಆಗಸ್ಟ್ 17 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. mha.gov.in ಅಥವಾ ncs.gov.in ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಹೊರಡಿಸಲಾದ ಕಿರು ಅಧಿಸೂಚನೆಯನ್ನು ಪರಿಶೀಲಿಸಿ.

IB Recruitment 2025: ಗುಪ್ತಚರ ಇಲಾಖೆಯಲ್ಲಿ 4987 ಹುದ್ದೆಗಳಿಗೆ ನೇಮಕಾತಿ, 10th ಪಾಸಾಗಿದ್ರೆ ಅರ್ಜಿ ಸಲ್ಲಿಸಿ
ಗುಪ್ತಚರ ಇಲಾಖೆಯಲ್ಲಿ ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Jul 24, 2025 | 3:01 PM

Share

10ನೇ ತರಗತಿ ಪಾಸಾಗಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್​​ ನ್ಯೂಸ್​. ಗುಪ್ತಚರ ಇಲಾಖೆ (ಐಬಿ) ಭದ್ರತಾ ಸಹಾಯಕ/ ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಕಿರು ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 4987 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 26 ರಿಂದ ಪ್ರಾರಂಭವಾಗಿ ಆಗಸ್ಟ್ 17 ರವರೆಗೆ ಮುಂದುವರಿಯುತ್ತದೆ. ಅಧಿಕೃತ ವೆಬ್‌ಸೈಟ್ mha.gov.in ಅಥವಾ ncs.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೋಡ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಗೃಹ ಸಚಿವಾಲಯವು ಜುಲೈ 22 ರಂದು ಉದ್ಯೋಗ ಪತ್ರಿಕೆಯ ಮೂಲಕ IB ಭದ್ರತಾ ಸಹಾಯಕ ನೇಮಕಾತಿ 2025 ರ ಸಂಕ್ಷಿಪ್ತ ಅಧಿಸೂಚನೆಯನ್ನು ಹೊರಡಿಸಿದೆ. ವಿವರವಾದ ಅಧಿಸೂಚನೆಯನ್ನು ಶೀಘ್ರದಲ್ಲೇ IB ಹೊರಡಿಸಲಿದೆ. ಈ ಹುದ್ದೆಗಳಿಗೆ ಅರ್ಜಿದಾರರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಮತ್ತು ಆಯ್ಕೆಯಾದ ಅಭ್ಯರ್ಥಿಗೆ ಎಷ್ಟು ಸಂಬಳ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಅರ್ಹತಾ ಮಾನದಂಡಗಳು:

ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯಸ್ಸು 27 ವರ್ಷಗಳನ್ನು ಮೀರಬಾರದು. ಎಸ್‌ಸಿ ಮತ್ತು ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ. ದಿವ್ಯಾಂಗ ಅರ್ಜಿದಾರರಿಗೆ ಗರಿಷ್ಠ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು 650 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಸ್‌ಸಿ ಮತ್ತು ಎಸ್‌ಟಿ ವರ್ಗದ ಅಭ್ಯರ್ಥಿಗಳು 550 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್, ಲೋಡರ್ ಹುದ್ದೆಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು

ಐಬಿ ನೇಮಕಾತಿ ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಕೃತ ವೆಬ್‌ಸೈಟ್ ncs.gov.in ಗೆ ಭೇಟಿ ನೀಡಿ.
  • ಭದ್ರತಾ ಸಹಾಯಕ ನೇಮಕಾತಿ 2025 ಲಿಂಕ್ ಅನ್ನು ಇಲ್ಲಿ ಕ್ಲಿಕ್ ಮಾಡಿ.
  • ಈಗಲೇ ನೋಂದಾಯಿಸಿ ಮತ್ತು ಫಾರ್ಮ್ ಅನ್ನು ಭರ್ತಿ ಮಾಡಿ.
  • ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಶುಲ್ಕವನ್ನು ಪಾವತಿಸಿ ಮತ್ತು ಸಲ್ಲಿಸಿ.

ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ಅರ್ಜಿದಾರರನ್ನು ಟೈಯರ್ 1 ಮತ್ತು ಟೈಯರ್ 2 ಪರೀಕ್ಷೆ ಇತ್ಯಾದಿಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 21700-69100 (ಲೆವೆಲ್ 3) ಅಡಿಯಲ್ಲಿ ವೇತನ ಸಿಗುತ್ತದೆ. ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಹೊರಡಿಸಲಾದ ಕಿರು ಅಧಿಸೂಚನೆಯನ್ನು ಪರಿಶೀಲಿಸಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ