AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IISc Recruitment 2023: ಭಾರತೀಯ ವಿಜ್ಞಾನ ಸಂಸ್ಥೆಯ ಹಿರಿಯ ಸಂಪಾದಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

IISc Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್​ನ ಅಧಿಕೃತ ವೆಬ್​ಸೈಟ್​ iisc.ac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

IISc Recruitment 2023: ಭಾರತೀಯ ವಿಜ್ಞಾನ ಸಂಸ್ಥೆಯ ಹಿರಿಯ ಸಂಪಾದಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ
IISc Recruitment 2023
TV9 Web
| Updated By: ಝಾಹಿರ್ ಯೂಸುಫ್|

Updated on:Jan 08, 2023 | 3:00 PM

Share

IISc Recruitment 2023: ಭಾರತೀಯ ವಿಜ್ಞಾನ ಸಂಸ್ಥೆಯು (IISc)  ಹಿರಿಯ ಸಂಪಾದಕೀಯ ವ್ಯವಸ್ಥಾಪಕ ಮತ್ತು ಹಿರಿಯ ಸಂಪಾದಕೀಯ ಸಹಾಯಕ (OoC) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ  ಒಟ್ಟು 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್​ನ ಅಧಿಕೃತ ವೆಬ್​ಸೈಟ್​ iisc.ac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಹಿರಿಯ ಸಂಪಾದಕೀಯ ವ್ಯವಸ್ಥಾಪಕರು- 2 ಹುದ್ದೆಗಳು ಹಿರಿಯ ಸಂಪಾದಕೀಯ ಸಹಾಯಕ- 2 ಹುದ್ದೆಗಳು ಒಟ್ಟು ಹುದ್ದೆಗಳ ಸಂಖ್ಯೆ- 4

ಉದ್ಯೋಗದ ಸ್ಥಳ:

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)- ಬೆಂಗಳೂರು

ಅರ್ಹತಾ ಮಾನದಂಡಗಳು:

  • ಸಂಪಾದಕೀಯ ವ್ಯವಸ್ಥಾಪಕ ಹುದ್ದೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಸ್ನಾತಕೋತ್ತರ ಪದವಿ ಅಥವಾ ಸಂಬಂಧಿತ ವಿಷಯದಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • ಇದರ ಜೊತೆಗೆ ಪತ್ರಿಕೋದ್ಯಮ, ಬರವಣಿಗೆ/ವಿಜ್ಞಾನ ಬರವಣಿಗೆ, ಎಡಿಟಿಂಗ್ ಮತ್ತು ಕಾಪಿ ಎಡಿಟಿಂಗ್​ನಲ್ಲಿ ಕನಿಷ್ಠ 06 ವರ್ಷಗಳ ಅನುಭವವನ್ನು ಹೊಂದಿರಬೇಕಾಗುತ್ತದೆ. ಹಾಗೆಯೇ ಸಾಮಾನ್ಯ ಜನರಿಗೆ ಸಂಬಂಧ ಪಟ್ಟಂತೆ ಕೆಲಗಳನ್ನು ಲೇಖನಗಳ ಬರೆದಿರಬೇಕು.
  • ಹಾಗೆಯೇ ಅತ್ಯುತ್ತಮ ಯೋಜನಾ ನಿರ್ವಹಣೆ, ಸಂವಹನ ಮತ್ತು ಸಂಘಟನಾ ಕೌಶಲ್ಯಗಳು, ಕಂಪ್ಯೂಟರ್ ಸಾಫ್ಟ್‌ವೇರ್ ಮತ್ತು ಪರಿಕರಗಳಲ್ಲಿ ಪ್ರಾವೀಣ್ಯತೆಯನ್ನು ಹೊಂದಿರಬೇಕಾಗುತ್ತದೆ.
  • ಮಾಸ್ಟರ್ ಆಫ್ ಸೈನ್ಸ್/ಫಿಲಾಸಫಿಯಾ ಡಾಕ್ಟರ್ (MS/Ph.D.) ಪದವಿಯನ್ನು ಮಾಡಿದವರೂ ಕೂಡ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ

  • ಹಿರಿಯ ಸಂಪಾದಕೀಯ ಸಹಾಯಕ ಹುದ್ದೆ: ಈ ಹುದ್ದೆಗಳಿಗೆ ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • ಇದರ ಜೊತೆಗೆ ವೆಬ್ ಮತ್ತು ಪ್ರಿಂಟ್ ಪತ್ರಿಕೋದ್ಯಮದಲ್ಲಿ ವಿಜ್ಞಾನ ಬರವಣಿಗೆ ಅಥವಾ ಜರ್ನಲಿಸಂ, ಎಡಿಟಿಂಗ್ ಮತ್ತು ಕಾಪಿಡಿಟಿಂಗ್ ವಿಷಯಗಳಲ್ಲಿ ಕನಿಷ್ಠ 05 ವರ್ಷಗಳ ಅನುಭವವನ್ನು ಹೊಂದಿರಬೇಕಾಗುತ್ತದೆ.
  • ಅತ್ಯುತ್ತಮ ಲಿಖಿತ ಮತ್ತು ಮೌಖಿಕ ಸಂವಹನ ಕೌಶಲ್ಯಗಳು ಮತ್ತು ಸಂಘಟಣಾ ಕೌಶಲ್ಯಗಳನ್ನು ಹೊಂದಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
  • ಇನ್ನು ಮಾಸ್ಟರ್ ಆಫ್ ಸೈನ್ಸ್/ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್/ಸ್ನಾತಕೋತ್ತರ ಡಿಪ್ಲೊಮಾ ಇನ್ ಮ್ಯಾನೇಜ್‌ಮೆಂಟ್/ಫಿಲಾಸಫಿಯಾ ಡಾಕ್ಟರ್ (MS/MBA/PGDM/Ph.D.) ಪದವಿ ಜೊತೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯಲ್ಲಿ ವಿಜ್ಞಾನ ಬರವಣಿಗೆ, ಎಡಿಟಿಂಗ್ ಮತ್ತು ಪಬ್ಲಿಷಿಂಗ್​ನಲ್ಲಿ ಅನುಭವ ಹೊಂದಿರುವವರು ಕೂಡ ಅರ್ಜಿ ಸಲ್ಲಿಸಬಹುದು.

ಮಾಸಿಕ ವೇತನ:

  • ಸಂಪಾದಕೀಯ ವ್ಯವಸ್ಥಾಪಕ ಹುದ್ದೆ: ರೂ.70000 ರಿಂದ ರೂ.75000
  • ಹಿರಿಯ ಸಂಪಾದಕೀಯ ಸಹಾಯಕ: ರೂ.40000 ರಿಂದ ರೂ.45000

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಗರಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿಲ್ಲ. ಹೀಗಾಗಿ ಹಿರಿಯ ಮತ್ತು ಅನುಭವಿ ಅಭ್ಯರ್ಥಿಗಳೂ ಕೂಡ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್​ಲೀಸ್ಟ್ ಮಾಡಲಾಗುತ್ತದೆ. ಇದಾದ ಬಳಿಕ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 19, 2023. ಇನ್ನು 10.01.2023 ರವರೆಗೆ ಈ ಮೇಲ್ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು.

ವಿಶೇಷ ಸೂಚನೆ:

ಹಿರಿಯ ಸಂಪಾದಕೀಯ ವ್ಯವಸ್ಥಾಪಕರು ಮತ್ತು ಹಿರಿಯ ಸಂಪಾದಕೀಯ ಸಹಾಯಕ ಹುದ್ದೆಗಳಿಗೆ ಒಪ್ಪಂದದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅದರಂತೆ ಒಂದು ವರ್ಷದ ಒಪ್ಪಂದ ಇರಲಿದ್ದು, ಇದಾದ ಬಳಿಕ ತೃಪ್ತಿದಾಯಕ ಕಾರ್ಯಕ್ಷಮತೆಯನ್ನು 04 ವರ್ಷಗಳವರೆಗೆ ಒಪ್ಪಂದವನ್ನು ವಿಸ್ತರಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 2:57 pm, Sun, 8 January 23

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?