IKEA Recruitment 2022: ಬೆಂಗಳೂರು ಐಕಿಯದಲ್ಲಿದೆ ಸ್ಥಳೀಯರಿಗೆ ಉದ್ಯೋಗಾವಕಾಶ

IKEA Recruitment 2022: ಈಗಾಗಲೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಅದರಂತೆ 1000 ನೌಕರರಲ್ಲಿ ಶೆ.72 ರಷ್ಟು ಸ್ಥಳೀಯ ಉದ್ಯೋಗಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕಂಪೆನಿ ತಿಳಿಸಿದೆ.

IKEA Recruitment 2022: ಬೆಂಗಳೂರು ಐಕಿಯದಲ್ಲಿದೆ ಸ್ಥಳೀಯರಿಗೆ ಉದ್ಯೋಗಾವಕಾಶ
IKEA Recruitment 2022
Follow us
| Updated By: ಝಾಹಿರ್ ಯೂಸುಫ್

Updated on: Jun 27, 2022 | 1:07 PM

ಬೆಂಗಳೂರಿನಲ್ಲಿ ನೂತನವಾಗಿ ಆರಂಭಗೊಂಡಿರುವ ಸ್ಪೀಡನ್​ ಮೂಲದ ಪಿಠೋಪಕರಣಗಳ ಮಳಿಗೆ ಐಕಿಯ (IKEA Bengaluru) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈಗಾಗಲೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಅದರಂತೆ 1000 ನೌಕರರಲ್ಲಿ ಶೆ.72 ರಷ್ಟು ಸ್ಥಳೀಯ ಉದ್ಯೋಗಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕಂಪೆನಿ ತಿಳಿಸಿದೆ. ಇದೀಗ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತಿದೆ. ಹೀಗಾಗಿ ಆಯ್ಕೆ ಪ್ರಕ್ರಿಯೆಯು ಯಾವಾಗ ಬೇಕಿದ್ದರೂ ಕೊನೆಗೊಳ್ಳಬಹುದು. ಏಕೆಂದರೆ ನಿರ್ದಿಷ್ಟ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದ್ದು, ಸಂಪೂರ್ಣ ಭರ್ತಿ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಂದರ್ಶನವನ್ನು ಕೊನೆಗೊಳಿಸಲಾಗುತ್ತಿದೆ. ಹೀಗಾಗಿ ಇಂದೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ಹೆಸರು:

  • ಹುದ್ದೆಗಳು
  • ಸಪ್ಲೈ ಪ್ಲಾನರ್​​, ಜವಳಿ ಕಾರ್ಪೆಟ್​​ಗಳು
  • ಸಪ್ಲೈ ಪ್ಲಾನರ್, ಜವಳಿ ಉತ್ಪನ್ನಗಳು
  • ಸಪ್ಲೈ ಪ್ಲಾನರ್, ವರ್ಗ ಪ್ರದೇಶ -ಮೆಟಲ್​​, ಪ್ಲಾಸ್ಟಿಕ್, ಫ್ಲೋಟ್ ಗ್ಲಾಸ್ ಮತ್ತು ಎಲೆಕ್ಟ್ರಾನಿಕ್ಸ್
  • ಪ್ರಾಜೆಕ್ಟ್ ಲೀಡರ್ (ವಿಸ್ತರಣೆ ಲಾಜಿಸ್ಟಿಕ್ಸ್)
  • ಉತ್ಪನ್ನ ಅನುಸರಣೆ ತಜ್ಞ
  • ಮಲ್ಟಿಚಾನಲ್ ನೆಟ್‌ವರ್ಕ್ ಪ್ರಾಜೆಕ್ಟ್ ಮ್ಯಾನೇಜರ್
  • ಹಿರಿಯ ಸೈಬರ್ ಇಂಜಿನಿಯರ್
  • ಸೈಬರ್ ಇಂಜಿನಿಯರ್
  • ಸರ್ವಿಸ್​ ಫುಲ್​ಫಿಲ್​ಮೆಂಟ್​​ ಆಪರೇಷನ್​ ಡೆವಲಪರ್
  • ಮಾರಾಟ ಸಹೋದ್ಯೋಗಿ (ಮೂಲ ತಂಡ)
  • ಪಬ್ಲಿಕ್​ ರಿಲೇಷನ್​​ ಲೀಡರ್​​
  • ಉತ್ತರಾಧಿಕಾರ ಯೋಜನೆ ತಜ್ಞ
  • ಸೇವಾ ವ್ಯಾಪಾರ ವಸಾಹತು ಜೂನಿಯರ್ ಸ್ಪೆಷಲಿಸ್ಟ್
  • ಗೂಡ್ಸ್ ಫ್ಲೋ ಟೀಮ್ ಲೀಡರ್ – ವಿಆರ್ ಮಾಲ್
  • SSS ತಂಡ-ನಾಯಕ – VR ಮಾಲ್

ವಿದ್ಯಾರ್ಹತೆ: ಆಯಾ ಹುದ್ದೆಗಳಿಗೆ ಅನುಸಾರವಾಗಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಹಾಗೆಯೇ ಇಂಗ್ಲಿಷ್​ನಲ್ಲಿ ಮಾತನಾಡುವ ಮತ್ತು ಬರೆಯುವ ಸಾಮರ್ಥ್ಯವನ್ನು ಹೊಂದಿರಬೇಕು. ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕಾಗುತ್ತದೆ ಎಂದು ತಿಳಿಸಲಾಗಿದೆ. ವಿದ್ಯಾರ್ಹತೆ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಅಧಿಸೂಚನೆ ಪರಿಶೀಲಿಸಿ.

ಅರ್ಜಿ ಸಲ್ಲಿಸುವುದು ಹೇಗೆ: ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ಆಯಾ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 15, 2022.

ಈ ನೇಮಕಾತಿ ಕುರಿತಾದ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ. ಹಾಗೆಯೇ ಕಂಪೆನಿಯ ವೆಬ್​ಸೈಟ್ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​