AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Post Recruitment 2025: ಭಾರತೀಯ ಅಂಚೆ ಇಲಾಖೆಯಲ್ಲಿ 10th ಪಾಸಾದವರಿಗೆ ಉದ್ಯೋಗವಕಾಶ

ಭಾರತೀಯ ಅಂಚೆ ಇಲಾಖೆಯು 25 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಹತ್ತನೇ ತರಗತಿ ಪಾಸಾದವರು ಮತ್ತು ಕನಿಷ್ಠ 3 ವರ್ಷಗಳ ಚಾಲನಾ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಫೆಬ್ರುವರಿ 8 ಕೊನೆಯ ದಿನಾಂಕ. ಆಯ್ಕೆ ಅರ್ಹತಾ ಪಟ್ಟಿಯ ಆಧಾರದ ಮೇಲೆ. ತಿಂಗಳಿಗೆ 19,900 ರೂ. ವೇತನ ನೀಡಲಾಗುವುದು.

India Post Recruitment 2025: ಭಾರತೀಯ ಅಂಚೆ ಇಲಾಖೆಯಲ್ಲಿ 10th  ಪಾಸಾದವರಿಗೆ ಉದ್ಯೋಗವಕಾಶ
India Post Driver Jobs
ಅಕ್ಷತಾ ವರ್ಕಾಡಿ
|

Updated on: Feb 04, 2025 | 3:43 PM

Share

ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಉತ್ತಮ ಅವಕಾಶವಿದು. ಭಾರತೀಯ ಅಂಚೆ ಇಲಾಖೆಯು ಒಟ್ಟು 25 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಗೆ ಸೇರಲು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫೆಬ್ರವರಿ 8 ಎಂದು ನಿಗದಿಪಡಿಸಲಾಗಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶ.

ಭಾರತೀಯ ಅಂಚೆ ಇಲಾಖೆ ಹೊರಡಿಸುವ ನೇಮಕಾತಿಯಲ್ಲಿ ಒಟ್ಟು 25 ಖಾಲಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಈ ಅಭಿಯಾನದ ಮೂಲಕ, ಮಧ್ಯ ಪ್ರದೇಶದಲ್ಲಿ 1 ಹುದ್ದೆ, ಎಂಎಂಎಸ್ ಚೆನ್ನೈನಲ್ಲಿ 15 ಹುದ್ದೆಗಳು, ದಕ್ಷಿಣ ಪ್ರದೇಶದಲ್ಲಿ 4 ಹುದ್ದೆಗಳು ಮತ್ತು ಪಶ್ಚಿಮ ಪ್ರದೇಶದಲ್ಲಿ 5 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅರ್ಹತಾ ವಿವರ:

ಈ ನೇಮಕಾತಿಯಲ್ಲಿ ಭಾಗವಹಿಸಲು, ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಅಭ್ಯರ್ಥಿಯು ಚಾಲನಾ ಪರವಾನಗಿಯನ್ನು ಹೊಂದಿರಬೇಕು ಮತ್ತು ಕನಿಷ್ಠ ಮೂರು ವರ್ಷಗಳ ಚಾಲನಾ ಅನುಭವವನ್ನು ಹೊಂದಿರಬೇಕು.

ವಯಸ್ಸಿನ ಮಿತಿ:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷಗಳನ್ನು ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ, ಅಂದರೆ ಫೆಬ್ರವರಿ 8.

ಸಂಬಳ ಎಷ್ಟು?

ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 7ನೇ ಕೇಂದ್ರ ವೇತನ ಆಯೋಗದ (ಸಿಪಿಸಿ) ಪ್ರಕಾರ ಲೆವೆಲ್ 2 ವೇತನ ಶ್ರೇಣಿಯಲ್ಲಿ ತಿಂಗಳಿಗೆ 19,900 ರೂ. ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಗಾಗಿ ಅಭ್ಯರ್ಥಿಗಳು ಯಾವುದೇ ರೀತಿಯ ಲಿಖಿತ ಪರೀಕ್ಷೆಗೆ ಹಾಜರಾಗಬೇಕಾಗಿಲ್ಲ. ಆಯ್ಕೆಯು ಅರ್ಹತೆಯ ಪಟ್ಟಿ ಅಥವಾ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ಇದನ್ನೂ ಓದಿ: ಬ್ಯಾಂಕ್‌ಗಳಿಂದ ಹಿಡಿದು ನ್ಯಾಯಾಲಯದವರೆಗೆ, ಫೆಬ್ರವರಿಯಲ್ಲಿ ಲಭ್ಯವಿರುವ ಸರ್ಕಾರಿ ಉದ್ಯೋಗಗಳ ಮಾಹಿತಿ ಇಲ್ಲಿದೆ

ಅರ್ಜಿ ನಮೂನೆಯನ್ನು ಕಳುಹಿಸಬೇಕಾದ ವಿವರ:

ಅಭ್ಯರ್ಥಿಗಳು ತಮ್ಮ ಸಂಪೂರ್ಣ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ದಿ ಸೀನಿಯರ್ ಮ್ಯಾನೇಜರ್, ಮೇಲ್ ಮೋಟಾರ್ ಸರ್ವಿಸ್, ನಂ. ಗೆ ಕಳುಹಿಸಬೇಕು. ವಿಳಾಸ: 37, ಗ್ರೀಮ್ಸ್ ರಸ್ತೆ, ಚೆನ್ನೈ – 600 006. ಅರ್ಜಿ ನಮೂನೆಯು ಕೊನೆಯ ದಿನಾಂಕದೊಳಗೆ ತಲುಪದಿದ್ದರೆ ಅಭ್ಯರ್ಥಿಯ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ