AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ

Indian Navy Agniveer SSR Recruitment 2022: ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 08 ರಿಂದ ಶುರುವಾಗಲಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿಗಳು ಈ ಕೆಳಗಿನಂತಿದೆ.

Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Navy SSR Recruitment 2022
TV9 Web
| Edited By: |

Updated on: Nov 27, 2022 | 8:15 AM

Share

Indian Navy SSR Recruitment 2022: ಭಾರತೀಯ ನೌಕಾಪಡೆಯು ಸೀನಿಯರ್ ಸೆಕೆಂಡರಿ ನೇಮಕಾತಿ (SSR) ಮೂಲಕ ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 08 ರಿಂದ ಶುರುವಾಗಲಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿಗಳು ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 1400

ಅರ್ಹತಾ ಮಾನದಂಡಗಳು: ಎಸ್ಎಸ್ಆರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಗಣಿತ ಮತ್ತು ಭೌತಶಾಸ್ತ್ರ ವಿಷಯದೊಂದಿಗೆ 12ನೇ ತರಗತಿ ತೇರ್ಗಡೆಯಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಮೇ 1, 2002 ರಿಂದ ಅಕ್ಟೋಬರ್ 31, 2005 ರ ನಡುವೆ (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ಜನಿಸಿರಬೇಕು.

ಅರ್ಜಿ ಶುಲ್ಕ: ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 550/- ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • – ಶಾರ್ಟ್‌ಲಿಸ್ಟಿಂಗ್ (ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ)
  • – ಲಿಖಿತ ಪರೀಕ್ಷೆ
  • – PFT ಮತ್ತು ಪ್ರಾಥಮಿಕ ವೈದ್ಯಕೀಯ
  • – ಅಂತಿಮ ನೇಮಕಾತಿ ವೈದ್ಯಕೀಯ ಪರೀಕ್ಷೆ

ಈ ಮೇಲಿನ ಅರ್ಹತೆಯ ಆಧಾರದ ಮೇಲೆ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆಯನ್ನು ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಡಿಸೆಂಬರ್ 8, 2022
  • ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 17, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ