AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Navy Recruitment 2021: SSLC ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ

ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ joinindiannavy.gov.in/en ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

Indian Navy Recruitment 2021: SSLC ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ
India Navy
TV9 Web
| Edited By: |

Updated on: Jul 19, 2021 | 3:53 PM

Share

Indian Navy Recruitment 2021: ಭಾರತೀಯ ನೌಕಾಪಡೆಯ ನಾವಿಕ – ಮೆಟ್ರಿಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ಸೈಟ್ (- joinindiannavy.gov.in) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಒಟ್ಟು 350 ಹುದ್ದೆಗಳು ಖಾಲಿಯಿದ್ದು, ಜುಲೈ 23, 2021ರ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಈ ಹುದ್ದೆಗಳಿಗೆ ಸುಮಾರು 1,750 ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ (ಪಿಎಫ್‌ಟಿ) ಆಹ್ವಾನಿಸುವ ನಿರೀಕ್ಷೆಯಿದೆ. ಲಿಖಿತ ಪರೀಕ್ಷೆಯಲ್ಲಿ ಹಾಜರಾಗಲು ಕಟ್ ಆಫ್ ಅಂಕಗಳನ್ನು ನಿಗದಿಪಡಿಸಲಾಗುತ್ತದೆ. ಈ ಅಂಕಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗಬಹುದು. ಈ ಹುದ್ದೆಗಳ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಭ್ಯರ್ಥಿಗಳು ಮಾನ್ಯತೆ ಪಡೆದ ಶಾಲಾ ಶಿಕ್ಷಣ ಮಂಡಳಿಗಳಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂದರೆ ಕರ್ನಾಟಕದ ಎಸ್​ಎಸ್​ಎಲ್​ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ ಮಾನದಂಡ: ಅರ್ಜಿದಾರರು ಏಪ್ರಿಲ್ 1, 2001 ರಿಂದ ಸೆಪ್ಟೆಂಬರ್ 30, 2004 ರ ನಡುವೆ ಜನಿಸಿರಬೇಕು.

ನೇಮಕಾತಿಗಾಗಿ ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷಾ ಆಧಾರದ ಮೇಲೆ ಆಯ್ಕೆ ನಡೆಯಲಿದೆ. ಅರ್ಹತಾ ಪರೀಕ್ಷೆಯ ಶೇಕಡಾವಾರು (10 ನೇ ತರಗತಿ) ಆಧಾರದ ಮೇಲೆ ಹಾಗೂ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷಾ ಸಾಮರ್ಥ್ಯದ ಆಧಾರದ ಮೇಲೆ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಖಾಲಿ ಹುದ್ದೆಗಳನ್ನು ರಾಜ್ಯವಾರು ರೀತಿಯಲ್ಲಿ ಹಂಚಿಕೆ ಮಾಡಿರುವುದರಿಂದ ಕಟ್ ಆಫ್ ಅಂಕಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗಲಿದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜುಲೈ 19, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 23, 2021

ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ https://www.joinindiannavy.gov.in/en ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್