AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PWD ಎಂಜಿನಿಯರ್​ ಪರೀಕ್ಷೆ ಅಚ್ಚುಕಟ್ಟಾಗಿಯೇ ನಡೆದಿದೆ, ಯಾವುದೇ ಅಕ್ರಮ ಇಲ್ಲ: ಲೋಕೋಪಯೋಗಿ ಸಚಿವ ಪಾಟೀಲ್

ಕುತೂಹಲಕಾರಿ ಬೆಳವಣಿಗೆಯಲ್ಲಿ, ಗೃಹ ಕಚೇರಿ ಕೃಷ್ಣಾದಲ್ಲಿ ಗುತ್ತಿಗೆದಾರರ ಸಂಘದವರು ಇಂದು ಸಿಎಂ ಬೊಮ್ಮಾಯಿ ಆಮಂತ್ರಣದ ಮೇರೆಗೆ ಅವರನ್ನು ಭೇಟಿಯಾದರು. ಭೇಟಿ ವೇಳೆ PWD ಸಚಿವ ಸಿ.ಸಿ. ಪಾಟೀಲ್‌ರನ್ನು ಸಿಎಂ ಬೊಮ್ಮಾಯಿ ಕರೆಸಿದ್ದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆ ವಿರುದ್ಧ ಆರೋಪ ಕೇಳಿಬಂದಿತ್ತು. ಗುತ್ತಿಗೆದಾರರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು.

PWD ಎಂಜಿನಿಯರ್​ ಪರೀಕ್ಷೆ ಅಚ್ಚುಕಟ್ಟಾಗಿಯೇ ನಡೆದಿದೆ, ಯಾವುದೇ ಅಕ್ರಮ ಇಲ್ಲ: ಲೋಕೋಪಯೋಗಿ ಸಚಿವ ಪಾಟೀಲ್
ನನ್ನ ಇಲಾಖೆಯಲ್ಲಿ ಎಂಜಿನಿಯರ್​ ನೇಮಕ ಪರೀಕ್ಷೆ ಅಚ್ಚುಕಟ್ಟಾಗಿಯೇ ನಡೆದಿದೆ, ಯಾವುದೇ ಅಕ್ರಮ ಇಲ್ಲ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್
TV9 Web
| Edited By: |

Updated on: Apr 25, 2022 | 4:14 PM

Share

ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಇತ್ತೀಚೆಗೆ ನಡೆದಿದ್ದ ಜೂನಿಯರ್​ ಎಂಜಿನಿಯರ್​​ (ಜೆಇ) ಆಯ್ಕೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ/ ವಿಚಾರವಾಗಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದು ನನ್ನ ಇಲಾಖೆಯ ಜೆಇ ಪರೀಕ್ಷೆ ಅಚ್ಚುಕಟ್ಟಾಗಿಯೇ ನಡೆದಿದೆ. ಯಾವುದೇ ಅಕ್ರಮದ ವಾಸನೆ ಇಲ್ಲ. 900 ಹುದ್ದೆಗಳ ನೇಮಕಾತಿ ವಿಚಾರ ಕೋರ್ಟ್​​ನಲ್ಲಿ ಇತ್ತು. ಬಳಿಕ KPSC ಪರೀಕ್ಷೆ ಮೂಲಕ ನೇಮಕಾತಿಗೆ ತೀರ್ಮಾನ ಮಾಡಲಾಯಿತು. ಸೆಂಟ್ ಜಾನ್ಸ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅಕ್ರಮ ಅಂತಾ ಆರೋಪ ಕೇಳಿಬಂದಿದೆ. ಸೆಂಟ್ ಜಾನ್ಸ್ ಕಾಲೇಜು ವಿರುದ್ಧ ಎಫ್​ಐಆರ್ ದಾಖಲಾಗಿದೆ. ಇದಕ್ಕೂ PWD ಇಲಾಖೆಗೂ ಯಾವುದೇ ಸಂಬಂಧ ಇಲ್ಲ. ಇದರಲ್ಲಿ ಇಲಾಖೆಯ ಯಾವುದೇ ಪಾತ್ರ ಇಲ್ಲವೆಂದು ಸಿ.ಸಿ. ಪಾಟೀಲ್ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆ ಪರೀಕ್ಷೆಯಲ್ಲಿ ಅಕ್ರಮ ವಿಚಾರವಾಗಿ ಇನ್ನೂ ಮಾತನಾಡಿದ ಸಚಿವ ಸಚಿವ ಸಿ.ಸಿ.ಪಾಟೀಲ್ ಅವರು ಮಾಧ್ಯಮಗಳು ತಪ್ಪು ಮಾಹಿತಿ ಇಟ್ಟುಕೊಳ್ಳಬಾರದು. ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ 900 ಹುದ್ದೆ ನೇಮಕಾತಿ ವಿಚಾರ ಕೋರ್ಟ್ ನಲ್ಲಿ ಇತ್ತು. ಆ ಬಳಿಕ ಕೆಪಿಎಸ್ ಸಿ ಪರೀಕ್ಷೆ ಮೂಲಕ ನೇಮಕಾತಿ ಮಾಡಲು ತೀರ್ಮಾನ ಆಗಿತ್ತು. ಅಚ್ಚು ಕಟ್ಟಾಗಿ ಪರೀಕ್ಷೆ ಆಗಿದೆ. ಆದರೆ ಸೆಂಟ್ ಜಾನ್ಸ್ ಕೇಂದ್ರದಲ್ಲಿ ಅಕ್ರಮ ಆಗಿದೆ ಅಂತಾ ಒಂದು ಆರೋಪ ಕೇಳಿ ಬಂದಿತ್ತು. ಅದರ ಮೇಲೆ ಎಫ್ ಐಆರ್ ಆಗಿದೆ. ಇದಕ್ಕೂ ಇಲಾಖೆಗೂ ಸಂಬಂಧ ಇಲ್ಲ. ಇಲಾಖೆಯ ಯಾವುದೇ ಪಾತ್ರ ಇದರಲ್ಲಿ ಇರುವುದಿಲ್ಲ ಎಂದು ಅವರು ಪುನರುಚ್ಚರಿಸಿದರು.

ಇನ್ನು, ಗೃಹ ಸಚಿವರಿಗೆ ನೋಟಿಸ್ ನೀಡಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿಕೆ ಪ್ರಸ್ತಾಪಿಸಿದ ಸಚಿವ ಪಾಟೀಲ್ ಅವರು ಜತೆಯಲ್ಲಿ ಫೋಟೋ ಇದ್ದ ಮಾತ್ರಕ್ಕೆ ಆರೋಪ ಸರಿಯಲ್ಲ. ವಿಧಾನಸೌಧದಲ್ಲಿ ಮೀಟಿಂಗ್ ಮುಗಿಸಿ ಬರುವಾಗ ನಮ್ಮ ಜೊತೆಯೂ ಯಾರು ಯಾರೋ ಸೆಲ್ಫಿ ತಗೋತಾರೆ. ಫೋಟೋ ಇದ್ದವರ ಜೊತೆ ಹೋಗಿ ಮೋಜು ಮಸ್ತಿ ಮಾಡಿದರೆ ಅದನ್ನು ವೆಸ್ಟೆಡ್​ ಇಂಟರೆಸ್ಟ್ ಎನ್ನಬಹುದು. ಇಲ್ಲದಿದ್ದರೆ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಗೃಹ ಸಚಿವರು ಯಾರ ಮನೆಗೆ ಹೋಗಿದ್ದರು ಎಂಬುದು ನನಗಂತೂ ಮಾಹಿತಿ ಇಲ್ಲ ಎಂದು ವಿಧಾನ ಸೌಧದಲ್ಲಿ ಸಚಿವ ಪಾಟೀಲ್ ಮಾರ್ಮಿಕವಾಗಿ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಗುತ್ತಿಗೆದಾರರ ಸಂಘದಿಂದ ಸಿಎಂ ಭೇಟಿ; PWD ಸಚಿವ ಪಾಟೀಲ್‌ ಗೆ ಸಿಎಂ ಬುಲಾವ್ ಕುತೂಹಲಕಾರಿ ಬೆಳವಣಿಗೆಯಲ್ಲಿ, ಗೃಹ ಕಚೇರಿ ಕೃಷ್ಣಾದಲ್ಲಿ ಗುತ್ತಿಗೆದಾರರ ಸಂಘದವರು ಇಂದು ಸಿಎಂ ಬೊಮ್ಮಾಯಿ ಆಮಂತ್ರಣದ ಮೇರೆಗೆ ಅವರನ್ನು ಭೇಟಿಯಾದರು. ಭೇಟಿ ವೇಳೆ PWD ಸಚಿವ ಸಿ.ಸಿ. ಪಾಟೀಲ್‌ರನ್ನು ಸಿಎಂ ಬೊಮ್ಮಾಯಿ ಕರೆಸಿದ್ದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆ ವಿರುದ್ಧ ಆರೋಪ ಕೇಳಿಬಂದಿತ್ತು. ಗುತ್ತಿಗೆದಾರರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು.

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ