AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PWD ಎಂಜಿನಿಯರ್​ ಪರೀಕ್ಷೆ ಅಚ್ಚುಕಟ್ಟಾಗಿಯೇ ನಡೆದಿದೆ, ಯಾವುದೇ ಅಕ್ರಮ ಇಲ್ಲ: ಲೋಕೋಪಯೋಗಿ ಸಚಿವ ಪಾಟೀಲ್

ಕುತೂಹಲಕಾರಿ ಬೆಳವಣಿಗೆಯಲ್ಲಿ, ಗೃಹ ಕಚೇರಿ ಕೃಷ್ಣಾದಲ್ಲಿ ಗುತ್ತಿಗೆದಾರರ ಸಂಘದವರು ಇಂದು ಸಿಎಂ ಬೊಮ್ಮಾಯಿ ಆಮಂತ್ರಣದ ಮೇರೆಗೆ ಅವರನ್ನು ಭೇಟಿಯಾದರು. ಭೇಟಿ ವೇಳೆ PWD ಸಚಿವ ಸಿ.ಸಿ. ಪಾಟೀಲ್‌ರನ್ನು ಸಿಎಂ ಬೊಮ್ಮಾಯಿ ಕರೆಸಿದ್ದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆ ವಿರುದ್ಧ ಆರೋಪ ಕೇಳಿಬಂದಿತ್ತು. ಗುತ್ತಿಗೆದಾರರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು.

PWD ಎಂಜಿನಿಯರ್​ ಪರೀಕ್ಷೆ ಅಚ್ಚುಕಟ್ಟಾಗಿಯೇ ನಡೆದಿದೆ, ಯಾವುದೇ ಅಕ್ರಮ ಇಲ್ಲ: ಲೋಕೋಪಯೋಗಿ ಸಚಿವ ಪಾಟೀಲ್
ನನ್ನ ಇಲಾಖೆಯಲ್ಲಿ ಎಂಜಿನಿಯರ್​ ನೇಮಕ ಪರೀಕ್ಷೆ ಅಚ್ಚುಕಟ್ಟಾಗಿಯೇ ನಡೆದಿದೆ, ಯಾವುದೇ ಅಕ್ರಮ ಇಲ್ಲ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್
TV9 Web
| Edited By: |

Updated on: Apr 25, 2022 | 4:14 PM

Share

ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಇತ್ತೀಚೆಗೆ ನಡೆದಿದ್ದ ಜೂನಿಯರ್​ ಎಂಜಿನಿಯರ್​​ (ಜೆಇ) ಆಯ್ಕೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ/ ವಿಚಾರವಾಗಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದು ನನ್ನ ಇಲಾಖೆಯ ಜೆಇ ಪರೀಕ್ಷೆ ಅಚ್ಚುಕಟ್ಟಾಗಿಯೇ ನಡೆದಿದೆ. ಯಾವುದೇ ಅಕ್ರಮದ ವಾಸನೆ ಇಲ್ಲ. 900 ಹುದ್ದೆಗಳ ನೇಮಕಾತಿ ವಿಚಾರ ಕೋರ್ಟ್​​ನಲ್ಲಿ ಇತ್ತು. ಬಳಿಕ KPSC ಪರೀಕ್ಷೆ ಮೂಲಕ ನೇಮಕಾತಿಗೆ ತೀರ್ಮಾನ ಮಾಡಲಾಯಿತು. ಸೆಂಟ್ ಜಾನ್ಸ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅಕ್ರಮ ಅಂತಾ ಆರೋಪ ಕೇಳಿಬಂದಿದೆ. ಸೆಂಟ್ ಜಾನ್ಸ್ ಕಾಲೇಜು ವಿರುದ್ಧ ಎಫ್​ಐಆರ್ ದಾಖಲಾಗಿದೆ. ಇದಕ್ಕೂ PWD ಇಲಾಖೆಗೂ ಯಾವುದೇ ಸಂಬಂಧ ಇಲ್ಲ. ಇದರಲ್ಲಿ ಇಲಾಖೆಯ ಯಾವುದೇ ಪಾತ್ರ ಇಲ್ಲವೆಂದು ಸಿ.ಸಿ. ಪಾಟೀಲ್ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆ ಪರೀಕ್ಷೆಯಲ್ಲಿ ಅಕ್ರಮ ವಿಚಾರವಾಗಿ ಇನ್ನೂ ಮಾತನಾಡಿದ ಸಚಿವ ಸಚಿವ ಸಿ.ಸಿ.ಪಾಟೀಲ್ ಅವರು ಮಾಧ್ಯಮಗಳು ತಪ್ಪು ಮಾಹಿತಿ ಇಟ್ಟುಕೊಳ್ಳಬಾರದು. ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ 900 ಹುದ್ದೆ ನೇಮಕಾತಿ ವಿಚಾರ ಕೋರ್ಟ್ ನಲ್ಲಿ ಇತ್ತು. ಆ ಬಳಿಕ ಕೆಪಿಎಸ್ ಸಿ ಪರೀಕ್ಷೆ ಮೂಲಕ ನೇಮಕಾತಿ ಮಾಡಲು ತೀರ್ಮಾನ ಆಗಿತ್ತು. ಅಚ್ಚು ಕಟ್ಟಾಗಿ ಪರೀಕ್ಷೆ ಆಗಿದೆ. ಆದರೆ ಸೆಂಟ್ ಜಾನ್ಸ್ ಕೇಂದ್ರದಲ್ಲಿ ಅಕ್ರಮ ಆಗಿದೆ ಅಂತಾ ಒಂದು ಆರೋಪ ಕೇಳಿ ಬಂದಿತ್ತು. ಅದರ ಮೇಲೆ ಎಫ್ ಐಆರ್ ಆಗಿದೆ. ಇದಕ್ಕೂ ಇಲಾಖೆಗೂ ಸಂಬಂಧ ಇಲ್ಲ. ಇಲಾಖೆಯ ಯಾವುದೇ ಪಾತ್ರ ಇದರಲ್ಲಿ ಇರುವುದಿಲ್ಲ ಎಂದು ಅವರು ಪುನರುಚ್ಚರಿಸಿದರು.

ಇನ್ನು, ಗೃಹ ಸಚಿವರಿಗೆ ನೋಟಿಸ್ ನೀಡಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿಕೆ ಪ್ರಸ್ತಾಪಿಸಿದ ಸಚಿವ ಪಾಟೀಲ್ ಅವರು ಜತೆಯಲ್ಲಿ ಫೋಟೋ ಇದ್ದ ಮಾತ್ರಕ್ಕೆ ಆರೋಪ ಸರಿಯಲ್ಲ. ವಿಧಾನಸೌಧದಲ್ಲಿ ಮೀಟಿಂಗ್ ಮುಗಿಸಿ ಬರುವಾಗ ನಮ್ಮ ಜೊತೆಯೂ ಯಾರು ಯಾರೋ ಸೆಲ್ಫಿ ತಗೋತಾರೆ. ಫೋಟೋ ಇದ್ದವರ ಜೊತೆ ಹೋಗಿ ಮೋಜು ಮಸ್ತಿ ಮಾಡಿದರೆ ಅದನ್ನು ವೆಸ್ಟೆಡ್​ ಇಂಟರೆಸ್ಟ್ ಎನ್ನಬಹುದು. ಇಲ್ಲದಿದ್ದರೆ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಗೃಹ ಸಚಿವರು ಯಾರ ಮನೆಗೆ ಹೋಗಿದ್ದರು ಎಂಬುದು ನನಗಂತೂ ಮಾಹಿತಿ ಇಲ್ಲ ಎಂದು ವಿಧಾನ ಸೌಧದಲ್ಲಿ ಸಚಿವ ಪಾಟೀಲ್ ಮಾರ್ಮಿಕವಾಗಿ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಗುತ್ತಿಗೆದಾರರ ಸಂಘದಿಂದ ಸಿಎಂ ಭೇಟಿ; PWD ಸಚಿವ ಪಾಟೀಲ್‌ ಗೆ ಸಿಎಂ ಬುಲಾವ್ ಕುತೂಹಲಕಾರಿ ಬೆಳವಣಿಗೆಯಲ್ಲಿ, ಗೃಹ ಕಚೇರಿ ಕೃಷ್ಣಾದಲ್ಲಿ ಗುತ್ತಿಗೆದಾರರ ಸಂಘದವರು ಇಂದು ಸಿಎಂ ಬೊಮ್ಮಾಯಿ ಆಮಂತ್ರಣದ ಮೇರೆಗೆ ಅವರನ್ನು ಭೇಟಿಯಾದರು. ಭೇಟಿ ವೇಳೆ PWD ಸಚಿವ ಸಿ.ಸಿ. ಪಾಟೀಲ್‌ರನ್ನು ಸಿಎಂ ಬೊಮ್ಮಾಯಿ ಕರೆಸಿದ್ದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆ ವಿರುದ್ಧ ಆರೋಪ ಕೇಳಿಬಂದಿತ್ತು. ಗುತ್ತಿಗೆದಾರರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು.

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್