ನಾಳೆ ಚನ್ನಪಟ್ಟಣದಲ್ಲಿ ಉದ್ಯೊಗ ಮೇಳ: SSLC ಫೇಲ್ ಆಗಿದ್ರೂ ಜಾಬ್ ಸಿಗುತ್ತೆ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್​ಫುಲ್​ ಆ್ಯಕ್ಟಿವ್ ಆಗಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೂ ಮುನ್ನ ಸರಣಿ ಕಾರ್ಯಕ್ರಮ ಮಾಡಲಾಗುತ್ತಿದೆ. ಜನಸಂಪರ್ಕ ಸಭೆ ಬಳಿಕ ಇದೀಗ ಉದ್ಯೋಗ ಮೇಳವನ್ನು ಸರ್ಕಾರ ಆಯೋಜಿಸಿದೆ.

ನಾಳೆ ಚನ್ನಪಟ್ಟಣದಲ್ಲಿ ಉದ್ಯೊಗ ಮೇಳ: SSLC ಫೇಲ್ ಆಗಿದ್ರೂ ಜಾಬ್ ಸಿಗುತ್ತೆ
ನಾಳೆ ಚನ್ನಪಟ್ಟಣದಲ್ಲಿ ಉದ್ಯೊಗ ಮೇಳ, SSLC ಫೇಲ್ ಆಗಿದ್ರೂ ಜಾಬ್ ಸಿಗುತ್ತೆ
Edited By:

Updated on: Aug 29, 2024 | 5:07 PM

ರಾಮನಗರ, ಆಗಸ್ಟ್​​ 29: ಜಿಲ್ಲೆಯ ಚನ್ನಪಟ್ಟಣದಲ್ಲಿ ಸರ್ಕಾರದ ವತಿಯಿಂದ ಸರಣಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಇತ್ತೀಚೆಗೆ ಜನಸಂಪರ್ಕ ಸಭೆ ಬಳಿಕ ಇದೀಗ ನಾಳೆ (ಆ. 30) ಉದ್ಯೊಗ ಮೇಳ (job fair) ಆಯೋಜನೆ ಮಾಡಲಾಗಿದೆ. ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಯೊಗ ಮೇಳವನ್ನು ಉದ್ಘಾಟಿಸಲಿದ್ದಾರೆ.

ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗಿಯಾಗಲಿದ್ದು, ಎಲ್ಲಾ ಕಂಪನಿಗಳನ್ನು ಸರ್ಕಾರ ಚನ್ನಪಟ್ಟಣಕ್ಕೆ ಕರೆತರುತ್ತಿದೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್​ಫುಲ್​ ಆ್ಯಕ್ಟಿವ್ ಆಗಿದ್ದಾರೆ.

ಇದನ್ನೂ ಓದಿ: job fair: ರಾಜ್ಯ ಸರ್ಕಾರದಿಂದ ಬೃಹತ್ ಉದ್ಯೋಗ ಮೇಳ: ಸಹಾಯವಾಣಿ ಬಿಡುಗಡೆ

ಹಾಗಾಗಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೂ ಮುನ್ನ ಸರಣಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಉದ್ಯೋಗ ಮೇಳಕ್ಕೆ ಬಿಜೆಪಿ ಎಂಎಲ್​ಸಿ ಸಿ.ಪಿ.ಯೋಗೇಶ್ವರ್​ಗೂ ರಾಮನಗರ ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಗಿದೆ.

ವಿದ್ಯಾರ್ಹತೆ ಏನು?

ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಉದ್ಯೋಗ ಮೇಳಕ್ಕೆ ಎಸ್​ಎಸ್​​ಎಲ್​​ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಎಲ್ಲಾ ಪದವೀಧರರು ಪಾಲ್ಗೊಳ್ಳಬಹುದಾಗಿದೆ.

ಇದನ್ನೂ ಓದಿ: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಜಾಬ್‌ ಫೇರ್

ಉದ್ಯೋಗ ಮೇಳ ಬಗ್ಗೆ ರಾಮನಗರ ಡಿ ಸಿ ಯಶವಂತ್ ವಿ ಗುರುಕಾರ್​ ಮಾಧ್ಯಮದವರೊಂದಿಗೆ ಮಾತನಾಡಿದ್ದು, 25 ಸಾವಿರಕ್ಕೂ ಹೆಚ್ಚು ಉದ್ಯೋಗ ಅವಕಾಶ ಇದೆ. 200 ಕ್ಕೂ ಹೆಚ್ಚು ಕಂಪನಿಗಳಿಂದ ಉದ್ಯೋಗ ಅವಕಾಶವಿದೆ. ಉದ್ಯೋಗ ಬಯಸಿ 8 ಸಾವಿರ ಜನ ನೊಂದಾಣಿ ಮಾಡಿದ್ದಾರೆ. ಹತ್ತನೇ ತರಗತಿ ಫೇಲ್ ಆದ ಯುವಕರಿಗೂ ಉದ್ಯೋಗ ಸಿಗಲಿದೆ. ಡಬಲ್ ಡಿಗ್ರಿ ಮಾಡಿದವರಿಗೂ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us