AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agriculture Jobs 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; 890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಕೃಷಿ ಇಲಾಖೆ (KSDA) ಮತ್ತು KEA ಮೂಲಕ 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಉತ್ತಮ ವೇತನ ಶ್ರೇಣಿ ಹೊಂದಿರುವ ಈ ಹುದ್ದೆಗಳಿಗೆ ಮೇ 10ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ಇಲ್ಲಿ ಪಡೆಯಿರಿ.

Agriculture Jobs 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; 890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಕೃಷಿ ಇಲಾಖೆ
ಅಕ್ಷತಾ ವರ್ಕಾಡಿ
|

Updated on:Apr 19, 2026 | 5:53 PM

Share

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಒಟ್ಟು 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಪದವಿ ಪಡೆದ ಹಾಗೂ ಕರ್ನಾಟಕ ಸರ್ಕಾರದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತರು ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ:

ಈ ನೇಮಕಾತಿಯಲ್ಲಿ ಒಟ್ಟು 890 ಹುದ್ದೆಗಳಿದ್ದು, ಇವುಗಳಲ್ಲಿ ಕೃಷಿ ಅಧಿಕಾರಿ (AO) ಹುದ್ದೆಗಳು ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳು ಸೇರಿವೆ. ಈ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ (KK) ಮತ್ತು ಉಳಿಕೆ ಮೂಲ ವೃಂದ (RPC) ಎಂದು ವಿಂಗಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 69,250 ರಿಂದ ರೂ. 1,34,200 ರವರೆಗಿನ ಅತ್ಯುತ್ತಮ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು, ರಾಜ್ಯದಾದ್ಯಂತ ವಿವಿಧ ಕೃಷಿ ಕೇಂದ್ರಗಳಲ್ಲಿ ಕೆಲಸ ಮಾಡುವ ಅವಕಾಶ ದೊರೆಯಲಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಕೃಷಿ (B.Sc Agriculture), ಬಿ.ಟೆಕ್ ಬಯೋಟೆಕ್ ಅಥವಾ ಕೃಷಿ ಎಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿಯನ್ನು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷಗಳವರೆಗೆ ನಿಗದಿಪಡಿಸಲಾಗಿದೆ. ನಿಯಮದಂತೆ ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಮತ್ತು ವಿಧವೆಯರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ:

ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಒಬಿಸಿ ವರ್ಗದವರಿಗೆ ರೂ. 750, ಎಸ್‌ಸಿ/ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500 ಹಾಗೂ ಮಾಜಿ ಸೈನಿಕರಿಗೆ ರೂ. 250 ಶುಲ್ಕ ನಿಗದಿಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆಯು ಪ್ರಮುಖವಾಗಿ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲನೆಯದಾಗಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಎರಡನೆಯದಾಗಿ ಆಫ್‌ಲೈನ್ OMR ಮಾದರಿಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹರನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಕ್ರಮ:

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಪೂರ್ಣವಾಗಿ ಓದಿ ಅರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು. ನಂತರ ಆನ್‌ಲೈನ್‌ನಲ್ಲಿ ಅಗತ್ಯ ದಾಖಲೆಗಳಾದ ಶೈಕ್ಷಣಿಕ ಪ್ರಮಾಣಪತ್ರಗಳು, ವಯಸ್ಸಿನ ಪುರಾವೆ ಮತ್ತು ಇತ್ತೀಚಿನ ಫೋಟೋಗಳೊಂದಿಗೆ ವಿವರಗಳನ್ನು ಭರ್ತಿ ಮಾಡಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಿ, ಅರ್ಜಿಯನ್ನು ಸಲ್ಲಿಸಿದ (Submit) ನಂತರ ಅದರ ಪ್ರತಿಯನ್ನು ತೆಗೆದಿಟ್ಟುಕೊಳ್ಳುವುದು ಅತ್ಯಗತ್ಯ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:50 pm, Sun, 19 April 26

Follow Us
ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ಫ್ಲ
ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ಫ್ಲ
ಸುಟ್ಟಘಟ್ಟ ಗ್ರಾಮದ ತೋಟದಲ್ಲಿ ಪ್ರತ್ಯಕ್ಷವಾಯಿತು ಕಾಡಾನೆಗಳ ಹಿಂಡು!
ಸುಟ್ಟಘಟ್ಟ ಗ್ರಾಮದ ತೋಟದಲ್ಲಿ ಪ್ರತ್ಯಕ್ಷವಾಯಿತು ಕಾಡಾನೆಗಳ ಹಿಂಡು!
ಸಚಿವ ಜಮೀರ್‌ ಅಹ್ಮದ್‌ JDS ಕಡೆಗೆ? ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ
ಸಚಿವ ಜಮೀರ್‌ ಅಹ್ಮದ್‌ JDS ಕಡೆಗೆ? ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ
ಮೇ 5ರ ನಂತರ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: HDK ಹೊಸ ಬಾಂಬ್
ಮೇ 5ರ ನಂತರ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: HDK ಹೊಸ ಬಾಂಬ್
ಇರಾನ್ ರಾಯಭಾರಿ ಬಳಿ ವಿವರಣೆ ಕೇಳಿದ ಭಾರತ
ಇರಾನ್ ರಾಯಭಾರಿ ಬಳಿ ವಿವರಣೆ ಕೇಳಿದ ಭಾರತ
ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗ, 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!
ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗ, 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ!
ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ!
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು