ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ

ಕರ್ನಾಟಕದಲ್ಲಿ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಇನ್ನೂ ಮುಗಿಯದ ಹಿನ್ನೆಲೆ ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ.

ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ
ಕರ್ನಾಟಕದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ (ಸಾಂದರ್ಭಿಕ ಚಿತ್ರ)
Follow us
|

Updated on: May 25, 2023 | 7:33 PM

ಬೆಂಗಳೂರು: ಕರ್ನಾಟಕದಲ್ಲಿ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ (Graduate Teachers Recruitment) ಇನ್ನೂ ಮುಗಿಯದ ಹಿನ್ನೆಲೆ ತಾತ್ಕಾಲಿಕವಾಗಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಸದ್ಯ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಅತಿಥಿ ಶಿಕ್ಷಕರ (Guest Teachers) ನೇಮಕಕ್ಕೆ ತೀರ್ಮಾನಿಸಲಾಗಿದೆ. ಅದರಂತೆ ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಲಿದ್ದಾರೆ.

2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. 15 ಸಾವಿರ ಪದವಿದರ ಶಿಕ್ಷಕರ ನೇಮಕಾತಿ ಕೊನೆಯ ಹಂತದ ಪ್ರಕ್ರಿಯೇ ಇದೆ. ಇದು ಇನ್ನೂ ಸಂಪೂರ್ಣವಾಗ ಹಿನ್ನೆಲೆ ಒಟ್ಟು 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಇಲಾಖೆ ಮುಂದಾಗಿದೆ.

ಇದನ್ನೂ ಓದಿ: Business Ideas: ಮಹಿಳೆಯರೇ! ಮನೆಯಲ್ಲೇ ಇದ್ದುಕೊಂಡು ತಿಂಗಳಿಗೆ 1 ಲಕ್ಷ ರೂಪಾಯಿ ಆದಾಯ ಗಳಿಸುವ ಬಿಸಿನೆಸ್​ ಅವಕಾಶ ನಿಮಗಾಗಿ ಇಲ್ಲಿದೆ ನೋಡಿ

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ -2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಮಾರ್ಚ್ 8ರಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ಆಯ್ಕೆ ಪಟ್ಟಿಯು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿತ್ತು.

ಇದಕ್ಕೂ ಮುನ್ನ ಬಿಡುಗಡೆಯಾಗಿದ್ದ ತಾತ್ಕಾಲಿಕ ಪಟ್ಟಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿತ್ತು. ಹೀಗಾಗಿ ಒಂದಷ್ಟು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪರಿಣಾಮ, ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು.

ಉದ್ಯೋಗ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್