Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಹೆಚ್ಚು MBBS ಸೀಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕನಾ೯ಟಕ ನಂಬರ್ ಒನ್

ಕೇಂದ್ರ ಸರ್ಕಾರದ ವರದಿಯ ಪ್ರಕಾರ, ಕರ್ನಾಟಕವು ಭಾರತದಲ್ಲಿ ಅತಿ ಹೆಚ್ಚು MBBS ಸೀಟುಗಳನ್ನು ಹೊಂದಿರುವ ರಾಜ್ಯವಾಗಿದೆ. ತಮಿಳುನಾಡು ಎರಡನೇ ಸ್ಥಾನದಲ್ಲಿದೆ. ಬೆಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳು ಮತ್ತು ರಾಜ್ಯದ ಬಲವಾದ ವೈದ್ಯಕೀಯ ಮೂಲಸೌಕರ್ಯ ಇದಕ್ಕೆ ಕಾರಣ. ಕರ್ನಾಟಕದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಬಗ್ಗೆ ಈ ಲೇಖನ ಹೆಚ್ಚಿನ ಮಾಹಿತಿ ನೀಡುತ್ತದೆ.

ಅತಿ ಹೆಚ್ಚು MBBS ಸೀಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕನಾ೯ಟಕ ನಂಬರ್ ಒನ್
Mbbs Seats
Follow us
ಅಕ್ಷತಾ ವರ್ಕಾಡಿ
|

Updated on:Jan 22, 2025 | 12:23 PM

ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕರ್ನಾಟಕದ ಕಾಲೇಜುಗಳು ಅತಿ ಹೆಚ್ಚು MBBS ವೈದ್ಯರನ್ನು ಉತ್ಪಾದಿಸುತ್ತದೆ ಎಂಬುದು ವರದಿಯಾಗಿದೆ. MBBS ಸೀಟುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯ ಸಭೆಯಲ್ಲಿ ದತ್ತಾಂಶ ಮಂಡಿಸಿತ್ತು. ಇದರ ಪ್ರಕಾರ ಕರ್ನಾಟಕ ಅತಿ ಹೆಚ್ಚು MBBS ಸೀಟುಗಳನ್ನು ಹೊಂದಿದೆ ಎಂದು ತಿಳಿದುಬಂದಿದೆ. ತಮಿಳುನಾಡು ಎರಡನೇ ಸ್ಥಾನದಲ್ಲಿದೆ.

MBBS ಸೀಟುಗಳ ಸಂಖ್ಯೆಯಲ್ಲಿ ತಮಿಳುನಾಡು 111650 ಸೀಟುಗಳನ್ನು ಹೊಂದಿದ್ದು, ಎರಡೇ ಸ್ಥಾನದಲ್ಲಿದೆ. ಅದರಂತೆ ಮಹಾರಾಷ್ಟ್ರ ಮೂರನೇ ಸ್ಥಾನದಲ್ಲಿದೆ. ಜೊತೆಗೆ MBBS ಸೀಟುಗಳ ಸಂಖ್ಯೆಯಲ್ಲಿ ಉತ್ತರ ಪ್ರದೇಶ ನಾಲ್ಕನೇ ಸ್ಥಾನದಲ್ಲಿದೆ. ಇಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 1322 ಸೀಟುಗಳನ್ನು ಹೆಚ್ಚಿಸಲಾಗಿದ್ದು, ಒಟ್ಟು ಸೀಟುಗಳ ಸಂಖ್ಯೆ 11200ರಕ್ಕೆ ಏರಿಕೆಯಾಗಿದೆ.

ದೇಶದ ಅರ್ಧದಷ್ಟು ವೈದ್ಯರು ನೊಂದಾಯಿಸಲ್ಪಟ್ಟಿರುವ ನಾಲ್ಕು ರಾಜ್ಯಗಳೆಂದರೆ ಆಂಧ್ರಪ್ರದೇಶ(1,00,587), ಕರ್ನಾಟಕ(1,22,875), ಮಹಾರಾಷ್ಟ್ರ (1,73,384) ಮತ್ತು ತಮಿಳುನಾಡು (1,33,918).

ಕನಾರ್ಟಕ ನಂಬರ್ ಒನ್:

ಸಾಮಾನ್ಯವಾಗಿ ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಬೆಂಗಳೂರು ತಂತ್ರಜ್ಞಾನದ ಕೇಂದ್ರ ಮಾತ್ರವಲ್ಲದೆ ವೈದ್ಯಕೀಯ ಕ್ಷೇತ್ರದಲ್ಲೂ ಹೆಚ್ಚಿನ ಖ್ಯಾತಿಯನ್ನು ಹೊಂದಿದೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ವೈದ್ಯಕೀಯ ಕಾಲೇಜುಗಳಂತಹ ಹೆಸರಾಂತ ಸಂಸ್ಥೆಗಳೊಂದಿಗೆ ಕರ್ನಾಟಕವು ಗಮನಾರ್ಹ ಸಂಖ್ಯೆಯ ವೈದ್ಯರನ್ನು ಉತ್ಪಾದಿಸುತ್ತದೆ. ರಾಜ್ಯದ ವೈದ್ಯಕೀಯ ಶಿಕ್ಷಣ ಮೂಲಸೌಕರ್ಯ ಮತ್ತು ಬೆಂಬಲ ನೀತಿಗಳು ವೈದ್ಯಕೀಯ ವೃತ್ತಿಪರರ ಹೆಚ್ಚಿನ ಉತ್ಪಾದನೆಗೆ ಕೊಡುಗೆ ನೀಡುತ್ತಿದೆ.

ಇದನ್ನೂ ಓದಿ: 39 ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ನೇರ ಸಂದರ್ಶನ

ಇದಲ್ಲದೇ ಕರ್ನಾಟಕದಲ್ಲಿ BMCRI ಎಂದೂ ಕರೆಯಲ್ಪಡುವ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಳಗಾವಿಯ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು, ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ, ತುಮಕೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಧಾರವಾಡದ ಎಸ್‌ಡಿಎಂ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ & ಆಸ್ಪತ್ರೆ ಹೀಗೆ ಸಾಕಷ್ಟು ಪ್ರತಿಷ್ಠಿತ ಕಾಲೇಜಿಗಳು ಪ್ರತೀ ವರ್ಷ ಲಕ್ಷಾಂತರ ವೈದ್ಯರನ್ನು ಉತ್ಪಾದಿಸುತ್ತಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Wed, 22 January 25

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ