AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KMF Recruitment 2023: ಕರ್ನಾಟಕದಲ್ಲಿ ಉದ್ಯೋಗಾವಕಾಶ: ವೇತನ 97 ಸಾವಿರ ರೂ.

KMF SHIMUL Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಶಿಮುಲ್)  ಅಧಿಕೃತ ವೆಬ್​ಸೈಟ್ www.shimul.coop ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

KMF Recruitment 2023: ಕರ್ನಾಟಕದಲ್ಲಿ ಉದ್ಯೋಗಾವಕಾಶ: ವೇತನ 97 ಸಾವಿರ ರೂ.
KMF Recruitment 2023
TV9 Web
| Edited By: |

Updated on: Feb 04, 2023 | 2:31 PM

Share

KMF SHIMUL Recruitment 2023: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (KMF) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಮೂಲಕ ಕೆಎಂಎಫ್​ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 194 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಶಿಮುಲ್)  ಅಧಿಕೃತ ವೆಬ್​ಸೈಟ್ www.shimul.coop ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ)- 17 ಹುದ್ದೆಗಳು
  • ಸಹಾಯಕ ವ್ಯವಸ್ಥಾಪಕರು (ಆಡಳಿತ)- 1 ಹುದ್ದೆಗಳು
  • ಸಹಾಯಕ ವ್ಯವಸ್ಥಾಪಕರು (F&F)- 3 ಹುದ್ದೆಗಳು
  • ಎಂಐಎಸ್ /ಸಿಸ್ಟಂ ಆಫೀಸರ್- 1 ಹುದ್ದೆ
  • ಮಾರುಕಟ್ಟೆ ಅಧಿಕಾರಿ- 2 ಹುದ್ದೆಗಳು
  • ಲೆಕ್ಕ ಸಹಾಯಕ (ದರ್ಜೆ 2)- 12 ಹುದ್ದೆಗಳು
  • ಮಾರುಕಟ್ಟೆ ಸಹಾಯಕ (ದರ್ಜೆ 2)- 10 ಹುದ್ದೆಗಳು
  • ಕೆಮಿಸ್ಟ್ (ದರ್ಜೆ 2)- 28 ಹುದ್ದೆಗಳು
  • ಕಿರಿಯ ಸಿಸ್ಟಂ ಆಪರೇಟರ್- 13 ಹುದ್ದೆಗಳು
  • ಶೀಘ್ರ ಲಿಪಿಗಾರರು (ದರ್ಜೆ 2)-1 ಹುದ್ದೆಗಳು
  • ಕಿರಿಯ ತಾಂತ್ರಿಕರು- 50 ಹುದ್ದೆಗಳು
  • ತಾಂತ್ರಿಕ ಅಧಿಕಾರಿ (ಅಭಿಯಂತರ)- 2 ಹುದ್ದೆಗಳು
  • ತಾಂತ್ರಿಕ ಅಧಿಕಾರಿ(ಗುಣನಿಯಂತ್ರಣ)- 2 ಹುದ್ದೆಗಳು
  • ತಾಂತ್ರಿಕ ಅಧಿಕಾರಿ (ಡಿಟಿ)- 14 ಹುದ್ದೆಗಳು
  • ಕೆಮಿಸ್ಟ್ (ದರ್ಜೆ 1)- 4 ಹುದ್ದೆಗಳು
  • ವಿಸ್ತರಣಾಧಿಕಾರಿ (ದರ್ಜೆ 3)- 17 ಹುದ್ದೆಗಳು
  • ಆಡಳಿತ ಸಹಾಯಕ (ದರ್ಜೆ 2)- 17 ಹುದ್ದೆಗಳು
  • ಒಟ್ಟು – 194

ವಿದ್ಯಾರ್ಹತೆ:

ಇದನ್ನೂ ಓದಿ
Image
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Image
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದಿ ವಿಶ್ವವಿದ್ಯಾಲಯ ಹಾಗೂ ಶಿಕ್ಷಣ ಮಂಡಳಿಯಿಂದ 10ನೇ ತರಗತಿ, ಪದವಿ, ಡಿಪ್ಲೋಮಾ, ಬಿಎಸ್ಸಿ, ಎಂಎಸ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ 18 ರಿಂದ 35 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ PWD ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ವೇತನ ನಿಗದಿ ಮಾಡಲಾಗುತ್ತದೆ. ಅಂದರಂತೆ ಕನಿಷ್ಠ 21 ಸಾವಿರದಿಂದ ಗರಿಷ್ಠ 97 ಸಾವಿರದವರೆಗೆ ವೇತನ ಸಿಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ- 1000 ರೂ.
  • SC/ST/ಪ್ರವರ್ಗ-1 ಮತ್ತು PWD ಅಭ್ಯರ್ಥಿಗಳಿಗೆ- 500 ರೂ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಇದರಲ್ಲಿ ಪಾಸಾಗಿರುವ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ.

Also Read: Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್​ 3, 2023.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ