AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC Eligibility List: ಗೆಜೆಟೆಡ್ ಅಧಿಕಾರಿಗಳ ಹುದ್ದೆಯ ಅರ್ಹತಾ ಪಟ್ಟಿ ಪ್ರಕಟ

ಪ್ರಿಲಿಮ್ಸ್‌ ಮತ್ತು ಮುಖ್ಯ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಕೆಪಿಎಸ್​ಸಿ ಜಾಲತಾಣದ ಮೂಲಕ ಫಲಿತಾಂಶ ನೋಡಬಹುದು.

KPSC Eligibility List: ಗೆಜೆಟೆಡ್ ಅಧಿಕಾರಿಗಳ ಹುದ್ದೆಯ ಅರ್ಹತಾ ಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 29, 2022 | 9:22 AM

Share

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) 2017-18ರ ಸಾಲಿನ ಗ್ರೂಪ್ 3 ಮತ್ತು ಗ್ರೂಪ್​ ಬಿ ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಗಳ ಹುದ್ದೆಯ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಿದೆ. ಇವರನ್ನು ಕರ್ನಾಟಕ ಆಡಳಿತ ಸೇವೆಗೆ (Karnataka Administration Service – KAS) ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪ್ರಿಲಿಮ್ಸ್‌ ಮತ್ತು ಮುಖ್ಯ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಕೆಪಿಎಸ್​ಸಿ ಜಾಲತಾಣದ ಮೂಲಕ ಫಲಿತಾಂಶ ನೋಡಬಹುದು. ವೈಯಕ್ತಿಕ ಸಂದರ್ಶನಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳ 1:3 ಅನುಪಾತದ ಅರ್ಹತಾ ಪಟ್ಟಿಯನ್ನು ಇದೀಗ ವೆಬ್​ಸೈಟ್​ಗೆ kpsc.kar.nic.in ಅಪ್​ಲೋಡ್ ಮಾಡಲಾಗಿದೆ. ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ.

2020ರಲ್ಲಿ ಅಧಿಸೂಚನೆ ಹೊರಡಿಸಿದ್ದ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ 2017-18ರಲ್ಲಿ ಪರೀಕ್ಷೆ ಬರೆದಿದ್ದ 318 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗಿದೆ. ನೋಂದಣಿ ಸಂಖ್ಯೆಯ ಮೂಲಕ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಈ ಪಟ್ಟಿಯಲ್ಲಿ ನೋಂದಣಿ ಸಂಖ್ಯೆ ಇರುವ ಅಭ್ಯರ್ಥಿಗಳು ಕೆಪಿಎಸ್​ಸಿ ಸೂಚಿಸಿರುವ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕಿದೆ. ವ್ಯಕ್ತಿತ್ವ ಪರೀಕ್ಷೆಗಾಗಿ (ಪರ್ಸನಾಲಿಟಿ ಟೆಸ್ಟ್​) ದಿನಾಂಕ, ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ.

ಕೆಪಿಎಸ್​ಸಿ ಪರೀಕ್ಷೆಯ ಫಲಿತಾಂಶ ವರ್ಷಗಟ್ಟಲೆ ತಡವಾಗಿರುವುದು ಪ್ರಶ್ನಿಸಿ ಸಾವಿರಾರು ಅಭ್ಯರ್ಥಿಗಳು ಕೆಪಿಎಸ್​ಸಿ ಕಾರ್ಯಾಲಯ ಇರುವ ‘ಉದ್ಯೋಗ ಭವನ’ದ ಎದುರು ಕಳೆದ ಸೋಮವಾರ (ಜುಲೈ 25) ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾನಿರತರೊಂದಿಗೆ ಮಾತನಾಡಿದ್ದ ಕೆಪಿಎಸ್​ಸಿ ನೂತನ ಕಾರ್ಯದರ್ಶಿ ವಿಕಾಸ್ ಕಿಶೋರ್, ಶೀಘ್ರ ಫಲಿತಾಂಶ ಪ್ರಕಟಿಸುವ ಭರವಸೆ ನೀಡಿದ್ದರು. ಇದೀಗ ಫಲಿತಾಂಶ ಪ್ರಕಟವಾಗಿದ್ದು, ಮುಂದಿನ ಪ್ರಕ್ರಿಯೆಗಳು ಇನ್ನಷ್ಟೇ ನಡೆಯಬೇಕಿದೆ.

Published On - 9:21 am, Fri, 29 July 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ