AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC Eligibility List: ಗೆಜೆಟೆಡ್ ಅಧಿಕಾರಿಗಳ ಹುದ್ದೆಯ ಅರ್ಹತಾ ಪಟ್ಟಿ ಪ್ರಕಟ

ಪ್ರಿಲಿಮ್ಸ್‌ ಮತ್ತು ಮುಖ್ಯ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಕೆಪಿಎಸ್​ಸಿ ಜಾಲತಾಣದ ಮೂಲಕ ಫಲಿತಾಂಶ ನೋಡಬಹುದು.

KPSC Eligibility List: ಗೆಜೆಟೆಡ್ ಅಧಿಕಾರಿಗಳ ಹುದ್ದೆಯ ಅರ್ಹತಾ ಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 29, 2022 | 9:22 AM

Share

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) 2017-18ರ ಸಾಲಿನ ಗ್ರೂಪ್ 3 ಮತ್ತು ಗ್ರೂಪ್​ ಬಿ ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಗಳ ಹುದ್ದೆಯ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಿದೆ. ಇವರನ್ನು ಕರ್ನಾಟಕ ಆಡಳಿತ ಸೇವೆಗೆ (Karnataka Administration Service – KAS) ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪ್ರಿಲಿಮ್ಸ್‌ ಮತ್ತು ಮುಖ್ಯ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಕೆಪಿಎಸ್​ಸಿ ಜಾಲತಾಣದ ಮೂಲಕ ಫಲಿತಾಂಶ ನೋಡಬಹುದು. ವೈಯಕ್ತಿಕ ಸಂದರ್ಶನಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳ 1:3 ಅನುಪಾತದ ಅರ್ಹತಾ ಪಟ್ಟಿಯನ್ನು ಇದೀಗ ವೆಬ್​ಸೈಟ್​ಗೆ kpsc.kar.nic.in ಅಪ್​ಲೋಡ್ ಮಾಡಲಾಗಿದೆ. ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ.

2020ರಲ್ಲಿ ಅಧಿಸೂಚನೆ ಹೊರಡಿಸಿದ್ದ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ 2017-18ರಲ್ಲಿ ಪರೀಕ್ಷೆ ಬರೆದಿದ್ದ 318 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗಿದೆ. ನೋಂದಣಿ ಸಂಖ್ಯೆಯ ಮೂಲಕ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಈ ಪಟ್ಟಿಯಲ್ಲಿ ನೋಂದಣಿ ಸಂಖ್ಯೆ ಇರುವ ಅಭ್ಯರ್ಥಿಗಳು ಕೆಪಿಎಸ್​ಸಿ ಸೂಚಿಸಿರುವ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕಿದೆ. ವ್ಯಕ್ತಿತ್ವ ಪರೀಕ್ಷೆಗಾಗಿ (ಪರ್ಸನಾಲಿಟಿ ಟೆಸ್ಟ್​) ದಿನಾಂಕ, ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ.

ಕೆಪಿಎಸ್​ಸಿ ಪರೀಕ್ಷೆಯ ಫಲಿತಾಂಶ ವರ್ಷಗಟ್ಟಲೆ ತಡವಾಗಿರುವುದು ಪ್ರಶ್ನಿಸಿ ಸಾವಿರಾರು ಅಭ್ಯರ್ಥಿಗಳು ಕೆಪಿಎಸ್​ಸಿ ಕಾರ್ಯಾಲಯ ಇರುವ ‘ಉದ್ಯೋಗ ಭವನ’ದ ಎದುರು ಕಳೆದ ಸೋಮವಾರ (ಜುಲೈ 25) ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾನಿರತರೊಂದಿಗೆ ಮಾತನಾಡಿದ್ದ ಕೆಪಿಎಸ್​ಸಿ ನೂತನ ಕಾರ್ಯದರ್ಶಿ ವಿಕಾಸ್ ಕಿಶೋರ್, ಶೀಘ್ರ ಫಲಿತಾಂಶ ಪ್ರಕಟಿಸುವ ಭರವಸೆ ನೀಡಿದ್ದರು. ಇದೀಗ ಫಲಿತಾಂಶ ಪ್ರಕಟವಾಗಿದ್ದು, ಮುಂದಿನ ಪ್ರಕ್ರಿಯೆಗಳು ಇನ್ನಷ್ಟೇ ನಡೆಯಬೇಕಿದೆ.

Published On - 9:21 am, Fri, 29 July 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್