AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC Eligibility List: ಗೆಜೆಟೆಡ್ ಅಧಿಕಾರಿಗಳ ಹುದ್ದೆಯ ಅರ್ಹತಾ ಪಟ್ಟಿ ಪ್ರಕಟ

ಪ್ರಿಲಿಮ್ಸ್‌ ಮತ್ತು ಮುಖ್ಯ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಕೆಪಿಎಸ್​ಸಿ ಜಾಲತಾಣದ ಮೂಲಕ ಫಲಿತಾಂಶ ನೋಡಬಹುದು.

KPSC Eligibility List: ಗೆಜೆಟೆಡ್ ಅಧಿಕಾರಿಗಳ ಹುದ್ದೆಯ ಅರ್ಹತಾ ಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 29, 2022 | 9:22 AM

Share

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) 2017-18ರ ಸಾಲಿನ ಗ್ರೂಪ್ 3 ಮತ್ತು ಗ್ರೂಪ್​ ಬಿ ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಗಳ ಹುದ್ದೆಯ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಿದೆ. ಇವರನ್ನು ಕರ್ನಾಟಕ ಆಡಳಿತ ಸೇವೆಗೆ (Karnataka Administration Service – KAS) ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪ್ರಿಲಿಮ್ಸ್‌ ಮತ್ತು ಮುಖ್ಯ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಕೆಪಿಎಸ್​ಸಿ ಜಾಲತಾಣದ ಮೂಲಕ ಫಲಿತಾಂಶ ನೋಡಬಹುದು. ವೈಯಕ್ತಿಕ ಸಂದರ್ಶನಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳ 1:3 ಅನುಪಾತದ ಅರ್ಹತಾ ಪಟ್ಟಿಯನ್ನು ಇದೀಗ ವೆಬ್​ಸೈಟ್​ಗೆ kpsc.kar.nic.in ಅಪ್​ಲೋಡ್ ಮಾಡಲಾಗಿದೆ. ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ.

2020ರಲ್ಲಿ ಅಧಿಸೂಚನೆ ಹೊರಡಿಸಿದ್ದ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ 2017-18ರಲ್ಲಿ ಪರೀಕ್ಷೆ ಬರೆದಿದ್ದ 318 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗಿದೆ. ನೋಂದಣಿ ಸಂಖ್ಯೆಯ ಮೂಲಕ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಈ ಪಟ್ಟಿಯಲ್ಲಿ ನೋಂದಣಿ ಸಂಖ್ಯೆ ಇರುವ ಅಭ್ಯರ್ಥಿಗಳು ಕೆಪಿಎಸ್​ಸಿ ಸೂಚಿಸಿರುವ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕಿದೆ. ವ್ಯಕ್ತಿತ್ವ ಪರೀಕ್ಷೆಗಾಗಿ (ಪರ್ಸನಾಲಿಟಿ ಟೆಸ್ಟ್​) ದಿನಾಂಕ, ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ.

ಕೆಪಿಎಸ್​ಸಿ ಪರೀಕ್ಷೆಯ ಫಲಿತಾಂಶ ವರ್ಷಗಟ್ಟಲೆ ತಡವಾಗಿರುವುದು ಪ್ರಶ್ನಿಸಿ ಸಾವಿರಾರು ಅಭ್ಯರ್ಥಿಗಳು ಕೆಪಿಎಸ್​ಸಿ ಕಾರ್ಯಾಲಯ ಇರುವ ‘ಉದ್ಯೋಗ ಭವನ’ದ ಎದುರು ಕಳೆದ ಸೋಮವಾರ (ಜುಲೈ 25) ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾನಿರತರೊಂದಿಗೆ ಮಾತನಾಡಿದ್ದ ಕೆಪಿಎಸ್​ಸಿ ನೂತನ ಕಾರ್ಯದರ್ಶಿ ವಿಕಾಸ್ ಕಿಶೋರ್, ಶೀಘ್ರ ಫಲಿತಾಂಶ ಪ್ರಕಟಿಸುವ ಭರವಸೆ ನೀಡಿದ್ದರು. ಇದೀಗ ಫಲಿತಾಂಶ ಪ್ರಕಟವಾಗಿದ್ದು, ಮುಂದಿನ ಪ್ರಕ್ರಿಯೆಗಳು ಇನ್ನಷ್ಟೇ ನಡೆಯಬೇಕಿದೆ.

Published On - 9:21 am, Fri, 29 July 22

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್