AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC Eligibility List: ಗೆಜೆಟೆಡ್ ಅಧಿಕಾರಿಗಳ ಹುದ್ದೆಯ ಅರ್ಹತಾ ಪಟ್ಟಿ ಪ್ರಕಟ

ಪ್ರಿಲಿಮ್ಸ್‌ ಮತ್ತು ಮುಖ್ಯ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಕೆಪಿಎಸ್​ಸಿ ಜಾಲತಾಣದ ಮೂಲಕ ಫಲಿತಾಂಶ ನೋಡಬಹುದು.

KPSC Eligibility List: ಗೆಜೆಟೆಡ್ ಅಧಿಕಾರಿಗಳ ಹುದ್ದೆಯ ಅರ್ಹತಾ ಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 29, 2022 | 9:22 AM

Share

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) 2017-18ರ ಸಾಲಿನ ಗ್ರೂಪ್ 3 ಮತ್ತು ಗ್ರೂಪ್​ ಬಿ ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಗಳ ಹುದ್ದೆಯ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಿದೆ. ಇವರನ್ನು ಕರ್ನಾಟಕ ಆಡಳಿತ ಸೇವೆಗೆ (Karnataka Administration Service – KAS) ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪ್ರಿಲಿಮ್ಸ್‌ ಮತ್ತು ಮುಖ್ಯ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಕೆಪಿಎಸ್​ಸಿ ಜಾಲತಾಣದ ಮೂಲಕ ಫಲಿತಾಂಶ ನೋಡಬಹುದು. ವೈಯಕ್ತಿಕ ಸಂದರ್ಶನಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳ 1:3 ಅನುಪಾತದ ಅರ್ಹತಾ ಪಟ್ಟಿಯನ್ನು ಇದೀಗ ವೆಬ್​ಸೈಟ್​ಗೆ kpsc.kar.nic.in ಅಪ್​ಲೋಡ್ ಮಾಡಲಾಗಿದೆ. ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ.

2020ರಲ್ಲಿ ಅಧಿಸೂಚನೆ ಹೊರಡಿಸಿದ್ದ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ 2017-18ರಲ್ಲಿ ಪರೀಕ್ಷೆ ಬರೆದಿದ್ದ 318 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗಿದೆ. ನೋಂದಣಿ ಸಂಖ್ಯೆಯ ಮೂಲಕ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಈ ಪಟ್ಟಿಯಲ್ಲಿ ನೋಂದಣಿ ಸಂಖ್ಯೆ ಇರುವ ಅಭ್ಯರ್ಥಿಗಳು ಕೆಪಿಎಸ್​ಸಿ ಸೂಚಿಸಿರುವ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕಿದೆ. ವ್ಯಕ್ತಿತ್ವ ಪರೀಕ್ಷೆಗಾಗಿ (ಪರ್ಸನಾಲಿಟಿ ಟೆಸ್ಟ್​) ದಿನಾಂಕ, ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ.

ಕೆಪಿಎಸ್​ಸಿ ಪರೀಕ್ಷೆಯ ಫಲಿತಾಂಶ ವರ್ಷಗಟ್ಟಲೆ ತಡವಾಗಿರುವುದು ಪ್ರಶ್ನಿಸಿ ಸಾವಿರಾರು ಅಭ್ಯರ್ಥಿಗಳು ಕೆಪಿಎಸ್​ಸಿ ಕಾರ್ಯಾಲಯ ಇರುವ ‘ಉದ್ಯೋಗ ಭವನ’ದ ಎದುರು ಕಳೆದ ಸೋಮವಾರ (ಜುಲೈ 25) ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾನಿರತರೊಂದಿಗೆ ಮಾತನಾಡಿದ್ದ ಕೆಪಿಎಸ್​ಸಿ ನೂತನ ಕಾರ್ಯದರ್ಶಿ ವಿಕಾಸ್ ಕಿಶೋರ್, ಶೀಘ್ರ ಫಲಿತಾಂಶ ಪ್ರಕಟಿಸುವ ಭರವಸೆ ನೀಡಿದ್ದರು. ಇದೀಗ ಫಲಿತಾಂಶ ಪ್ರಕಟವಾಗಿದ್ದು, ಮುಂದಿನ ಪ್ರಕ್ರಿಯೆಗಳು ಇನ್ನಷ್ಟೇ ನಡೆಯಬೇಕಿದೆ.

Published On - 9:21 am, Fri, 29 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ