AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಎ ಹುದ್ದೆಗಳಿಗೆ ಅರ್ಜಿ ಅಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

KPSC Recruitment 2022: ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಗಳಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಪ್ರಶ್ನೆ ಸಿದ್ಧಪಡಿಸಲಾಗುತ್ತದೆ.

KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಎ ಹುದ್ದೆಗಳಿಗೆ ಅರ್ಜಿ ಅಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ
ಕರ್ನಾಟಕ ಲೋಕಸೇವಾ ಆಯೋಗ
TV9 Web
| Edited By: |

Updated on: Mar 17, 2022 | 5:18 PM

Share

ಕರ್ನಾಟಕ ಲೋಕಸೇವಾ ಆಯೋಗವು, ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021ರನ್ವಯ ಗ್ರೂಪ್​-ಎ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಗ್ರೂಪ್​- ಎ ಹುದ್ದೆಗಳಾದ ಪೊಲೀಸ್​ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಗಳಲ್ಲಿ ಸಹಾಯಕ ನಿರ್ದೇಶಕರು (ವಿಷವಿಜ್ಞಾನ ವಿಭಾಗ), ಸಹಾಯಕ ನಿರ್ದೇಶಕರು (ಜೀವಶಾಸ್ತ್ರ ವಿಭಾಗ), ಸಹಾಯಕ ನಿರ್ದೇಶಕರು (ಡಿಎನ್​ಎ ವಿಭಾಗ), ಸಹಾಯಕ ನಿರ್ದೇಶಕರು (ರಸಾಯನಿಕ ವಿಭಾಗ), ಸಹಾಯಕ ನಿರ್ದೇಶಕರು (ಪ್ರಶ್ನಿತ ದಸ್ತಾವೇಜು ವಿಭಾಗ) ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

KPSC Recruitment 2022: ಹುದ್ದೆಗಳ ವಿವರ:

ಸಹಾಯಕ ನಿರ್ದೇಶಕರು(ವಿಷವಿಜ್ಞಾನ ವಿಭಾಗ): 03 ಹುದ್ದೆಗಳು ಸಹಾಯಕ ನಿರ್ದೇಶಕರು (ಜೀವಶಾಸ್ತ್ರ ವಿಭಾಗ): 02 ಹುದ್ದೆಗಳು ಸಹಾಯಕ ನಿರ್ದೇಶಕರು (ಡಿಎನ್​ಎ ವಿಭಾಗ): 01 ಹುದ್ದೆ ಸಹಾಯಕ ನಿರ್ದೇಶಕರು (ರಸಾಯನಿಕ ವಿಭಾಗ): 02 ಹುದ್ದೆಗಳು ಸಹಾಯಕ ನಿರ್ದೇಶಕರು (ಪ್ರಶ್ನಿತ ದಸ್ತಾವೇಜು ವಿಭಾಗ): 02 ಹುದ್ದೆಗಳು ಒಟ್ಟು : 10 ಹುದ್ದೆಗಳು

KPSC Recruitment 2022: ಅರ್ಹತಾ ಮಾನದಂಡ:

ವಿಷವಿಜ್ಞಾನ ವಿಭಾಗ: ವಿಷವಿಜ್ಞಾನ ವಿಭಾಗಕ್ಕೆ ಸಂಬಂಧಿಸಿದ ಪದವಿ ಜೀವಶಾಸ್ತ್ರ ವಿಭಾಗ: ಜೀವಶಾಸ್ತ್ರಕ್ಕೆ ಸಂಬಂಧಿಸಿದ ಪದವಿ ಡಿಎನ್​ಎ ವಿಭಾಗ: ಡಿಎನ್​ಎ ಪದವಿ ರಸಾಯನಿಕ ವಿಭಾಗ: ರಸಾಯನಿಕ ವಿಜ್ಞಾನ ಪದವಿ ಪ್ರಶ್ನಿತ ದಸ್ತಾವೇಜು ವಿಭಾಗ: ಪ್ರಶ್ನಿತ ದಸ್ತಾವೇಜು ವಿಭಾಗಕ್ಕೆ ಸಂಬಂಧಿಸಿದ ಪದವಿ

KPSC Recruitment 2022: ಅನುಭವ:

ಸದರಿ ಸೂಚನೆಯಲ್ಲಿನ ಹುದ್ದೆಗಳಿಗೆ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅನುಭವವನ್ನು ನಿಗದಿಪಡಿಸಿದ್ದು, ಈ ಸಂಬಂಧ ಅಧಿಸೂಚನೆಯಲ್ಲಿ ತೋರಿಸಿರುವ ನಮೂನೆಯಲ್ಲಿಯೇ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅನುಭವ ಪ್ರಮಾಣ ಪತ್ರವನ್ನು ಪಡೆದುಕೊಂಡು ಕಡ್ಡಾಯವಾಗಿ ಅಪ್ಲೋಡ್​ ಮಾಡತಕ್ಕದ್ದು ಹಾಗೂ  ಅರ್ಜಿಯಲ್ಲಿ ಅಂಕಣದಲ್ಲಿ ವಿವರಗಳನ್ನು ಭರ್ತಿ ಮಾಡತಕ್ಕದ್ದು, ನಿಗದಿತ ನಮೂನೆಯನ್ನು ಹೊರತುಪಡಿಸಿ ಇತರ ನಮೂನೆಗಳಲ್ಲಿ ಪಡೆದಿರುವ ಪ್ರಮಾಣ ಪತ್ರಗಳನ್ನು ಪರಿಗಣಿಸುವುದಿಲ್ಲ.

KPSC Recruitment 2022: ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600 ರೂ. ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ: 300 ರೂ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

KPSC Recruitment 2022: ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 16-03-2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-04-2022 ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 19-04-2022

KPSC Recruitment 2022: ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅಧಿಕೃತ ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Recruitment 2022: ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ