AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗದ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

KPSC Recruitment 2023: ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಈ ಹುದ್ದೆಗಳ ನೇಮಕಾತಿಯು 3 ವರ್ಷಗಳ ಗುತ್ತಿಗೆಯ ಆಧಾರದಲ್ಲಿ ನಡೆಯಲಿದೆ.

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗದ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
KPSC Recruitment 2023
TV9 Web
| Edited By: |

Updated on: Jan 09, 2023 | 7:15 AM

Share

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗವು (KPSC) ತನ್ನ ವಿವಿಧ ತಾಂತ್ರಿಕ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಈ ಹುದ್ದೆಗಳ ನೇಮಕಾತಿಯು 3 ವರ್ಷಗಳ ಗುತ್ತಿಗೆಯ ಆಧಾರದಲ್ಲಿ ನಡೆಯಲಿದೆ. ಹೀಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್​ಸೈಟ್​ kpsc.kar.nic.in ಗೆ ಭೇಟಿ ನೀಡಿ ಪರಿಶೀಲಿಸಬಹುದು. ಈ ನೇಮಕಾತಿ ಕುರಿತಾದ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಹುದ್ದೆಗಳ ವಿವರ:

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ
  • ಸೀನಿಯರ್ ಪ್ರೋಗ್ರಾಮರ್- 1 ಹುದ್ದೆ
  • ಜೂನಿಯರ್ ಪ್ರೋಗ್ರಾಮರ್- 1 ಹುದ್ದೆ
  • ಡಾಟಾ ಬೇಸ್ ಅಡ್ಮಿನ್- 1 ಹುದ್ದೆ
  • ನೆಟ್‌ವರ್ಕ್‌ ಅಡ್ಮಿನ್- 1 ಹುದ್ದೆ
  • ಒಟ್ಟು ಹುದ್ದೆಗಳ ಸಂಖ್ಯೆ- 04

ಅರ್ಹತಾ ಮಾನದಂಡಗಳು:

  • ಸೀನಿಯರ್ ಪ್ರೋಗ್ರಾಮರ್– ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸಿಎಸ್/ಸಿಎ/ಐಟಿ/ಮಾಹಿತಿ ತಂತ್ರಜ್ಞಾನ/ಎಲೆಕ್ಟ್ರಾನಿಕ್ಸ್‌ / ಕಮ್ಯುನಿಕೇಷನ್ ವಿಷಯಗಳಲ್ಲಿ ಇಂಜಿನಿಯರಿಂಗ್ ಅಥವಾ ಪಿಜಿ ಅಥವಾ ಎಂಎಸ್‌ ಮಾಡಿರಬೇಕು. ಇದರ ಜೊತೆಗೆ 5 ವರ್ಷಗಳ ಕಾರ್ಯಾನುಭವವನ್ನು ಹೊಂದಿರಬೇಕಾಗುತ್ತದೆ.
  • ಜೂನಿಯರ್ ಪ್ರೋಗ್ರಾಮರ್– ಸಿಎಸ್/ಸಿಎ/ಐಟಿ/ ಮಾಹಿತಿ ತಂತ್ರಜ್ಞಾನ/ಎಲೆಕ್ಟ್ರಾನಿಕ್ಸ್‌/ಕಮ್ಯುನಿಕೇಷನ್ ವಿಷಯಗಳಲ್ಲಿ ಇಂಜಿನಿಯರಿಂಗ್ ಅಥವಾ ಪಿಜಿ ಅಥವಾ ಎಂಎಸ್‌ ಮಾಡಿರುವ ಅಭ್ಯರ್ಥಿಗಳು ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಜತೆಗೆ 3 ವರ್ಷಗಳ ಕಾರ್ಯಾನುಭವ ಹೊಂದಿರಬೇಕೆಂದು ತಿಳಿಸಲಾಗಿದೆ.
  • ಡಾಟಾ ಬೇಸ್ ಅಡ್ಮಿನ್– ಈ ಹುದ್ದೆಗಳಿಗೆ ಸಿಎಸ್/ಸಿಎ/ಐಟಿ/ಮಾಹಿತಿ ತಂತ್ರಜ್ಞಾನ/ಎಲೆಕ್ಟ್ರಾನಿಕ್ಸ್‌/ಕಮ್ಯುನಿಕೇಷನ್ ವಿಷಯಗಳಲ್ಲಿ ಇಂಜಿನಿಯರಿಂಗ್ ಅಥವಾ ಪಿಜಿ ಅಥವಾ ಎಂಎಸ್‌ ಮಾಡಿರುವ ಹಾಗೂ ಕನಿಷ್ಠ 3 ವರ್ಷಗಳ ಕಾರ್ಯಾನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ನೆಟ್‌ವರ್ಕ್‌ ಅಡ್ಮಿನ್- ಈ ಹುದ್ದೆಗಳಿಗೂ ಸಿಎಸ್/ಸಿಎ/ಐಟಿ/ಮಾಹಿತಿ ತಂತ್ರಜ್ಞಾನ/ಎಲೆಕ್ಟ್ರಾನಿಕ್ಸ್‌/ಕಮ್ಯುನಿಕೇಷನ್ ವಿಷಯಗಳಲ್ಲಿ ಇಂಜಿನಿಯರಿಂಗ್ ಅಥವಾ ಪಿಜಿ ಅಥವಾ ಎಂಎಸ್‌ ಮಾಡಿರಲೇಬೇಕು. ಹಾಗೆಯೇ ಸಿಸಿಎನ್‌ಎ ಅಥವಾ ಎಂಸಿಎಸ್‌ಇ ಸರ್ಟಿಫಿಕೇಟ್ ಕೂಡ ಹೊಂದಿರಬೇಕಾಗುತ್ತದೆ.
  • ಈ ಎಲ್ಲಾ ವಿದ್ಯಾರ್ಹತೆಗಳ ಜೊತೆಗೆ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಸ್ಕಿಲ್ ಟೆಸ್ಟ್‌ ಅನ್ನು ಸಹ ಪಾಸ್‌ ಮಾಡಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ಸಾವಿರದಿಂದ 60 ಸಾವಿರವರೆಗೆ ತಿಂಗಳ ಸಂಬಳ ಸಿಗಲಿದೆ.

ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಂದರೆ ಅರ್ಜಿಯನ್ನು ಡೌನ್​ಲೋಡ್ ಮಾಡಿ ಅಥವಾ ಖರೀದಿಸಿ ಆ ಬಳಿಕ ಸಂಪೂರ್ಣ ಮಾಹಿತಿಯೊಂದಿಗೆ, ಅಗತ್ತ ದಾಖಲೆ ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

ಶ್ರೀ ಸುರಳ್ಕರ್ ವಿಕಾಸ್ ಕಿಶೋರ್, ಭಾ.ಆ.ಸೇ, ಕಾರ್ಯದರ್ಶಿಗಳು,

ಕರ್ನಾಟಕ ಲೋಕಸೇವಾ ಆಯೋಗ,

ಉದ್ಯೋಗ ಸೌಧ, ಬೆಂಗಳೂರು – 560001.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?