AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPTCL Recruitment 2022: ಕೆಪಿಟಿಸಿಎಲ್​ನಲ್ಲಿ 1492 ಹುದ್ದೆಗಳಿಗೆ ಅರ್ಜಿ ಆಹ್ವಾನ

KPTCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ (BE/B.Tech) ಮತ್ತು 12ನೇ ತರಗತಿಯ ಪಾಸಾಗಿರಬೇಕು.

KPTCL Recruitment 2022: ಕೆಪಿಟಿಸಿಎಲ್​ನಲ್ಲಿ 1492 ಹುದ್ದೆಗಳಿಗೆ ಅರ್ಜಿ ಆಹ್ವಾನ
KPTCL Recruitment 2022
TV9 Web
| Edited By: |

Updated on: Feb 02, 2022 | 7:26 PM

Share

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ( KPTCL ) ಇಲಾಖೆಯು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ವಿಭಾಗದಲ್ಲಿ ಒಟ್ಟು 1492 ಹುದ್ದೆಗಳು ಖಾಲಿಯಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ( Online ) ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

ಹುದ್ದೆಗಳ ವಿವರ ಮತ್ತು ಸಂಖ್ಯೆ:

ಸಹಾಯಕ ಇಂಜಿನಿಯರ್ (ವಿದ್ಯುತ್) -508 ಹುದ್ದೆಗಳು

ಸಹಾಯಕ ಇಂಜಿನಿಯರ್ (ಸಿವಿಲ್)-28 ಹುದ್ದೆಗಳು

ಕಿರಿಯ ಇಂಜಿನಿಯರ್ (ವಿದ್ಯುತ್) -570 ಹುದ್ದೆಗಳು

ಕಿರಿಯ ಇಂಜಿನಿಯರ್ (ಸಿವಿಲ್)-29 ಹುದ್ದೆಗಳು

ಕಿರಿಯ ಸಹಾಯಕ -360 ಹುದ್ದೆಗಳು

ವಯೋಮಿತಿ: KPTCL ನೇಮಕಾತಿಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯಸ್ಸು 35 ರ ಒಳಗಿರಬೇಕು. ಇನ್ನು SC/ST ಮತ್ತು ವರ್ಗ-I ಅರ್ಜಿದಾರರಿಗೆ ಗರಿಷ್ಠ ವಯಸ್ಸಿನ ಮಿತಿ 40 ವರ್ಷಗಳು ಎಂದು ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ (BE/B.Tech) ಮತ್ತು 12ನೇ ತರಗತಿಯ ಪಾಸಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆರಂಭದಲ್ಲಿ ಲಿಖಿತ ಪರೀಕ್ಷೆ ಇರಲಿದ್ದು, ಇದರಲ್ಲಿ ಉತ್ತೀರ್ಣರಾದವರು ಮಾತ್ರ ಸಂದರ್ಶನದ ಹಂತಕ್ಕೆ ಅರ್ಹತೆ ಪಡೆಯುತ್ತಾರೆ/

ಮತ್ತಷ್ಟು ಮಾಹಿತಿ: ಈ ನೇಮಕಾತಿ ಕುರಿತಾದ ಅಧಿಕೃತ ಅಧಿಸೂಚನೆ ಫೆಬ್ರವರಿ 7 ರಂದು ಬಿಡುಗಡೆಯಾಗಲಿದ್ದು, ಆಸಕ್ತ ಅಭ್ಯರ್ಥಿಗಳು https://kptcl.karnataka.gov.in ಗೆ ಭೇಟಿ ಹೆಚ್ಚಿನ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(KPTCL Recruitment 2022 Apply Online for 1492)

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು