AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KVS Recruitment 2022: ಶಿಕ್ಷಕ, ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.2 ಕೊನೆಯ ದಿನ

ಕೇಂದ್ರೀಯ ವಿದ್ಯಾಲಯ ಸಂಘಟನೆ ಇಂದು ಜನವರಿ 2 ರಂದು TGT, PGT ಮತ್ತು ಪ್ರಾಥಮಿಕ ಶಿಕ್ಷಕರು ಸೇರಿದಂತೆ 13,000 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಇಂದು ಕೊನೆಗೊಳ್ಳಲಿದೆ.

KVS Recruitment 2022: ಶಿಕ್ಷಕ, ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.2 ಕೊನೆಯ ದಿನ
KVS Recruitment 2022
TV9 Web
| Updated By: Digi Tech Desk|

Updated on:Jan 02, 2023 | 2:35 PM

Share

ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) ಇಂದು ಜನವರಿ 2 ರಂದು TGT, PGT ಮತ್ತು ಪ್ರಾಥಮಿಕ ಶಿಕ್ಷಕರು ಸೇರಿದಂತೆ 13,000 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಇಂದು ಕೊನೆಗೊಳ್ಳಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ನಮೂನೆಗಳನ್ನು kvsangathan.nic.in ನಲ್ಲಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನಾಂಕವಾಗಿದ್ದು, ಅದನ್ನು ವಿಸ್ತರಿಸಲಾಗಿತ್ತು.

ಕೆವಿಎಸ್‌ನಲ್ಲಿನ ಅಧಿಕಾರಿಗಳ ಹುದ್ದೆಗಳು, ಬೋಧನೆ ಮತ್ತು ಬೋಧಕೇತರ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 26.12.2022 ರಿಂದ 02.01.2023 ಇಂದು ಸಂಜೆಯವರೆಗೆ ವಿಸ್ತರಿಸಲು KVS ನ ಸಕ್ಷಮ ಪ್ರಾಧಿಕಾರವು ನಿರ್ಧರಿಸಿದೆ. ವಯಸ್ಸು, ವಿದ್ಯಾರ್ಹತೆ, ಅನುಭವ ಇತ್ಯಾದಿಗಳಿಗೆ ಸಂಬಂಧಿಸಿದ ಇತರ ನಿಯಮಗಳು ಮತ್ತು ಷರತ್ತುಗಳು ಜಾಹೀರಾತು ಸಂಖ್ಯೆ 15 ಮತ್ತು 16 ರಲ್ಲಿ ಉಲ್ಲೇಖಿಸಿರುವಂತೆ (ಅಂದರೆ 26.12.2022) ಹಾಗೆಯೇ ಇರುತ್ತವೆ ಎಂದು ಇತ್ತೀಚಿನ ಅಧಿಸೂಚನೆಯಲ್ಲಿ ತಿಳಿಸಿದೆ.

ಇದನ್ನು ಓದಿ:ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, ದೇಶದಲ್ಲಿ ಹೆಚ್ಚುತ್ತಿದೆ ನೇಮಕಾತಿ; ವರದಿ

ಅಭ್ಯರ್ಥಿಗಳು ಅರ್ಹತಾ ಮಾನದಂಡಗಳು ಮತ್ತು ಇತರ ಮಾಹಿತಿಗಾಗಿ ವಿವರವಾದ ಅಧಿಸೂಚನೆಗಳನ್ನು ಪರಿಶೀಲಿಸಬಹುದು.

ಖಾಲಿ ಹುದ್ದೆಗಳ ವಿವರ:

ಪ್ರಾಥಮಿಕ ಶಿಕ್ಷಕ: 6414

ಸಹಾಯಕ ಆಯುಕ್ತರು: 52

ಪ್ರಿನ್ಸಿಪಾಲ್: 239

ವೈಸ್ ಪ್ರಿನ್ಸಿಪಾಲ್: 203

ಸ್ನಾತಕೋತ್ತರ ಶಿಕ್ಷಕರು: 1409

ತರಬೇತಿ ಪಡೆದ ಪದವೀಧರ ಶಿಕ್ಷಕರು: 3176

ಗ್ರಂಥಪಾಲಕರು: 355

ಪ್ರಾಥಮಿಕ ಶಿಕ್ಷಕ (ಸಂಗೀತ): 303

ಹಣಕಾಸು ಅಧಿಕಾರಿ: 6

ಸಹಾಯಕ ಇಂಜಿನಿಯರ್ (ಸಿವಿಲ್): 2

ಸಹಾಯಕ ವಿಭಾಗ ಅಧಿಕಾರಿ: 156

ಹಿಂದಿ ಅನುವಾದಕ: 11

ಹಿರಿಯ ಸೆಕ್ರೆಟರಿಯೇಟ್ ಸಹಾಯಕ: 322

ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ: 702

ಸ್ಟೆನೋಗ್ರಾಫರ್ ಗ್ರೇಡ್ 2: 54

ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Mon, 2 January 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು