AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Job Fair: ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ; ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ನಿರುದ್ಯೋಗಿಗಳಿಗೆ ಮೇ 16 ರಂದು ಉಚಿತ ನೇರ ಸಂದರ್ಶನ ಆಯೋಜಿಸಲಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಎಕ್ಸ್‌ಪರ್ಟ್ ಕಾಲೇಜು (ಫಿಸಿಕ್ಸ್ ಲ್ಯಾಬ್ ಇನ್‌ಸ್ಟ್ರಕ್ಟರ್) ಮತ್ತು ಮಾಂಡೋವಿ ಮೋಟಾರ್ಸ್ (ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್) ಹುದ್ದೆಗಳಿಗೆ ಸಂದರ್ಶನ ನಡೆಸಲಿವೆ. ಅರ್ಹ ಬಿ.ಎಸ್ಸಿ (ಫಿಸಿಕ್ಸ್), ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಪದವೀಧರರು ಭಾಗವಹಿಸಬಹುದು.

Mangaluru Job Fair: ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ; ಮಂಗಳೂರಿನಲ್ಲಿ ನೇರ ಸಂದರ್ಶನ
ಉದ್ಯೋಗವಕಾಶImage Credit source: Pinterest
ಅಕ್ಷತಾ ವರ್ಕಾಡಿ
|

Updated on:May 13, 2026 | 3:29 PM

Share

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಿರುದ್ಯೋಗಿಗಳಿಗೆ ಸುವರ್ಣಾವಕಾಶವೊಂದು ಇಲ್ಲಿದೆ. ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಪ್ರತಿಷ್ಠಿತ ಸಂಸ್ಥೆಗಳಾದ ಎಕ್ಸ್‌ಪರ್ಟ್ ಕಾಲೇಜು ಮತ್ತು ಮಾಂಡೋವಿ ಮೋಟಾರ್ಸ್ ಸಹಯೋಗದೊಂದಿಗೆ “ನೇರ ಸಂದರ್ಶನ” ಕಾರ್ಯಕ್ರಮವನ್ನು ಆಯೋಜಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.

ಲಭ್ಯವಿರುವ ಹುದ್ದೆಗಳು ಮತ್ತು ಅರ್ಹತೆ:

ಈ ಸಂದರ್ಶನದಲ್ಲಿ ಪ್ರಮುಖವಾಗಿ ಎರಡು ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಎಕ್ಸ್‌ಪರ್ಟ್ ಕಾಲೇಜಿನಲ್ಲಿ ‘ಫಿಸಿಕ್ಸ್ ಲ್ಯಾಬ್ ಇನ್‌ಸ್ಟ್ರಕ್ಟರ್’ ಹುದ್ದೆಗೆ ಬಿ.ಎಸ್ಸಿ (ಫಿಸಿಕ್ಸ್) ಪದವೀಧರರು ಬೇಕಾಗಿದ್ದಾರೆ. ಅದೇ ರೀತಿ, ಮಾಂಡೋವಿ ಮೋಟಾರ್ಸ್ ಕಂಪನಿಯಲ್ಲಿ ‘ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್’ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದಕ್ಕೆ ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಅಥವಾ ಯಾವುದೇ ಪದವಿ ಹೊಂದಿರುವ ಮತ್ತು ವಾಹನ ಚಾಲನಾ ಪರವಾನಗಿ (Driving License) ಇರುವ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ಸಂದರ್ಶನದ ಸಮಯ ಮತ್ತು ಸ್ಥಳದ ಮಾಹಿತಿ:

ಆಸಕ್ತ ಅಭ್ಯರ್ಥಿಗಳು ದಿನಾಂಕ 16-05-2026 ರಂದು ನಡೆಯುವ ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನವು ಅಂದು ಬೆಳಿಗ್ಗೆ 10:00 ಗಂಟೆಯಿಂದ ಆರಂಭವಾಗಿ ಮಧ್ಯಾಹ್ನ 1:30 ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಡಳಿತ ಭವನದ ಕಟ್ಟಡದಲ್ಲಿರುವ ‘ಪ್ರಜಾ ಸೌಧ’ದ ನೆಲಮಹಡಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ (ಕೊಠಡಿ ಸಂಖ್ಯೆ: 04) ಹಾಜರಾಗಬೇಕು. ಈ ನೇಮಕಾತಿ ಕುರಿತು ಯಾವುದೇ ರೀತಿಯ ಸಂದೇಹಗಳಿದ್ದಲ್ಲಿ ಅಥವಾ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಅಭ್ಯರ್ಥಿಗಳು ಕಚೇರಿಯ ದೂರವಾಣಿ ಸಂಖ್ಯೆ 0824 2457139 ಅನ್ನು ಸಂಪರ್ಕಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Wed, 13 May 26

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?