AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job Alert: ಹಣಕಾಸು ಸಚಿವಾಲಯದಲ್ಲಿ 590 ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪೂರ್ಣ ಮಾಹಿತಿ ಇಲ್ಲಿದೆ

Ministry of Finance 2022: ಹಣಕಾಸು ಸಚಿವಾಲಯವು ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 590 ಹುದ್ದೆಗಳು ಖಾಲಿ ಇದ್ದು, ಈ ಕುರಿತ ಮಾಹಿತಿ ಇಲ್ಲಿದೆ.

Job Alert: ಹಣಕಾಸು ಸಚಿವಾಲಯದಲ್ಲಿ 590 ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪೂರ್ಣ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 23, 2022 | 3:22 PM

Share

ಹಣಕಾಸು ಸಚಿವಾಲಯವು ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ (Assistant Accounts Officer) ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸುವ ಮೂಲಕ ಅಥವಾ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ಉದ್ಯೋಗ ಸುದ್ದಿಗಳಲ್ಲಿ ಜಾಹೀರಾತು ಪ್ರಕಟವಾದ ದಿನಾಂಕದಿಂದ 45 ದಿನಗಳ ಒಳಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಲಾಗಿದೆ. ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 590 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಡೆಪ್ಯುಟೇಶನ್ ಅವಧಿಯು ಆರಂಭದಲ್ಲಿ 3 ವರ್ಷಗಳವರೆಗೆ ಇರುತ್ತದೆ. ಸಾರ್ವಜನಿಕ ಸೇವೆಗಳ ಅಗತ್ಯತೆಗಳಲ್ಲಿ ಅಗತ್ಯವಿರುವಂತೆ ಅದನ್ನು ವಿಸ್ತರಿಸಬಹುದು ಅಥವಾ ಮೊಟಕುಗೊಳಿಸಬಹುದು. ಬೆಂಗಳೂರು, ಮಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯ ಹಾಗೂ ದೇಶದ ವಿವಿಧ ನಗರಗಳಲ್ಲಿ ಹುದ್ದೆಗಳು ಖಾಲಿ ಇವೆ. ವೇತನ ಶ್ರೇಣಿ 7ನೇ ಸಿಪಿಸಿ ಅನ್ವಯ 8 ಅಥವಾ 9ನೇ ಹಂತದಲ್ಲಿರಲಿದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳ ಕುರಿತು ಮಾಹಿತಿ ಇಲ್ಲಿದೆ.

ಅರ್ಹತೆಯ ಮಾನದಂಡ: ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು AAO (Civil)/ SAS ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಎಸ್‌ಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು- ತಮ್ಮ ಬಡ್ತಿಗಾಗಿ ಕಾಯುತ್ತಿರುವವರು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿಯ ಸ್ವೀಕೃತಿಯ ಅಂತಿಮ ದಿನಾಂಕಕ್ಕೆ ಅನ್ವಯವಾಗುವಂತೆ ಗರಿಷ್ಠ ವಯಸ್ಸಿನ ಮಿತಿಯು 56 ವರ್ಷಕ್ಕಿಂತ ಕಡಿಮೆ ಇರಬೇಕು.

ಭರ್ತಿ ಮಾಡಿದ ಅರ್ಜಿಯನ್ನು ಕಳುಹಿಸುವ ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಇಲ್ಲಿಗೆ ಕಳುಹಿಸಬೇಕು: Senior Accounts Officer (HR-3), O/o Controller General of Accounts, Department of Expenditure, Ministry of Finance, Room No 210, 2nd Floor, Mahalekha Niyantrak Bhawan, Block GPO Complex, INA, Delhi-110023

ಇಮೇಲ್ ವಿಳಾಸ: groupbsec-cga@gov.in

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ- http://davp.nic.in/WriteReadData/ADS/eng_15101_2_2122b.pdf

ಇದನ್ನೂ ಓದಿ:

Job Alert: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ವಿವಿಧ ಹುದ್ದೆಗಳು: ಕನ್ನಡ, ಕೊಂಕಣಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ

Central Railway Jobs: 2422 ಅಪ್ರೆಂಟಿಸ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ; 5 ವಲಯಗಳಲ್ಲಿ ಇದೆ ಉದ್ಯೋಗ ಅವಕಾಶ

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?