AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದರಸಾದಲ್ಲಿ ಓದಿದ ವಿದ್ಯಾರ್ಥಿಗೆ IAS ನಲ್ಲಿ 751ನೇ ರ‍್ಯಾಂಕ್‌​​! UPSC ನಲ್ಲಿ ಹೆಚ್ಚು ಹೆಚ್ಚು ಯಶಸ್ಸು ಕಾಣುತ್ತಿರುವ ಯುವ ಮುಸಲ್ಮಾನರು!

Muslims in UPSC exams: ಸರಕಾರಿ ಆಡಳಿತದಲ್ಲಿ ಮುಸ್ಲಿಮರ ಪ್ರಾತಿನಿಧ್ಯ ಕಡಿಮೆ ಇರುವುದೇ ಅವರು ಹಿಂದುಳಿಯಲು ಪ್ರಮುಖ ಕಾರಣ. ಆಡಳಿತಯಂತ್ರವನ್ನು ಪ್ರವೇಶಿಸಲು, UPSC ಅಂತಹ ಪರೀಕ್ಷೆಗಳಿವೆ. ಅದರಲ್ಲಿ ಮುಸ್ಲಿಮರು ಹೆಚ್ಚು ಪಾಲ್ಗೊಳ್ಳಬೇಕು. ಆದರೆ ಅದು ಇಲ್ಲಿಯವರೆಗೆ ಕಾರ್ಯಸಾಧುವಾಗಿಲ್ಲ. ಹಾಗಂತ UPSC ನಲ್ಲಿ ಮುಸಲ್ಮಾನರು ಯಾರೂ ಇದುವರೆಗೆ ಯಾರೂ ಆಯ್ಕೆಯಾಗಿಲ್ಲ ಎಂದಲ್ಲ. ಅನೇಕ ಮಂದಿ ಸರ್ಕಾರದಲ್ಲಿ ಅತ್ಯುನ್ನತ ಆಯಕಟ್ಟಿನ ಸ್ಥಾನ ಅಲಂಕರಿಸಿದವರಿದ್ದಾರೆ. ಆದರೆ ಅದು ಅಲಂಕಾರಕ್ಕೆ ಸೀಮಿವಾಗಿತ್ತೇ ಹೊರತು ಇಡೀ ಸಮುದಾಯದ ಏಳ್ಗೆಗೆ ದಾರಿದೀಪವಾಗಿಲ್ಲ.

ಮದರಸಾದಲ್ಲಿ ಓದಿದ ವಿದ್ಯಾರ್ಥಿಗೆ IAS ನಲ್ಲಿ 751ನೇ ರ‍್ಯಾಂಕ್‌​​! UPSC ನಲ್ಲಿ ಹೆಚ್ಚು ಹೆಚ್ಚು ಯಶಸ್ಸು ಕಾಣುತ್ತಿರುವ ಯುವ ಮುಸಲ್ಮಾನರು!
UPSC: ಬಡ ಮುಸ್ಲಿಂ ಕುಟುಂಬಗಳ ಕನಸು ನನಸಾಗುತ್ತಿದೆ!
ಸಾಧು ಶ್ರೀನಾಥ್​
|

Updated on:May 20, 2024 | 12:54 PM

Share

ಇತ್ತೀಚಿನ ವರ್ಷಗಳಲ್ಲಿ ಮುಸ್ಲಿಂ ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪರಿಸ್ಥಿತಿಯ ವ್ಯಂಗ್ಯವೆಂದರೆ ಮುಸಲ್ಮಾನರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದಾರೆ ಎಂದು ನಿರಂತರವಾಗಿ ಚರ್ಚಿಸಲಾಗುತ್ತದೆ. ಆದರೆ ಮುಸಲ್ಮಾನರು ಹೆಚ್ಚು ಸುಶಿಕ್ಷತರಾಗುತ್ತಿದ್ದಾರೆ. ಸಮಾಜವನ್ನು ಮುಖ್ಯವಾಹಿನಿಗೆ ತರಲು ಕೆಲವು ಶಿಕ್ಷಣ ಸಂಸ್ಥೆಗಳು ಹುಟ್ಟಿಕೊಂಡಿವೆ. ಇದರಿಂದಾಗಿ ಮುಸ್ಲಿಮರು ಶಿಕ್ಷಣ ಮತ್ತು ವೃತ್ತಿಜೀವನದ ಬಗ್ಗೆ ಕಾಳಜಿಯನ್ನು ಹೆಚ್ಚಿಸಿದ್ದಾರೆ. ಪರಿಣಾಮವಾಗಿ ಮುಸ್ಲಿಂ ಯುವಕರು UPSC ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡುತ್ತಿದ್ದಾರೆ. ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮಾಜದಲ್ಲಿ ಈ ಆಮೂಲಾಗ್ರ ಬದಲಾವಣೆ ಹೇಗೆ ಸಾಧ್ಯವಾಗುತ್ತಿದೆ? ಈ ವಿಶೇಷ ವರದಿಯನ್ನು ಓದಿ… ದೇಶದ ಅತಿದೊಡ್ಡ, ಪ್ರತಿಷ್ಠಿತ ಆಡಳಿತ ಸೇವೆಗಳ ಪರೀಕ್ಷೆಯಾದ UPSC (ಕೇಂದ್ರ ಲೋಕಸೇವಾ ಆಯೋಗ -Union Public Service Commission) ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ. ಈ ಫಲಿತಾಂಶವು ಹಲವು ಗಮನಾರ್ಹ ಸಾಧನೆಗಳನ್ನು ಕಂಡಿದೆ. ಇದರಲ್ಲಿ 51 ಮುಸ್ಲಿಂ ಮಕ್ಕಳು ಯಶಸ್ಸು ಸಾಧಿಸಿರುವುದು ಸಕಾರಾತ್ಮಕ ವಿಚಾರವಾಗಿದ್ದು, ಇದೀಗ ಬಹು ಚರ್ಚೆಯ ವಿಷಯವಾಗಿದೆ. ಇದು ಮುಸ್ಲಿಂ ಸಮಾಜದ ಭರವಸೆಯ ನವ ಚಿತ್ರಣವಾಗಿದೆ. ಗಮನಿಸಿ, ನಕಾರಾತ್ಮಕ ಕಾರಣಗಳಿಗಾಗಿ ಮುಸಲ್ಮಾನರು ಆಗಾಗ್ಗೆ ಸುದ್ದಿಯಾಗುತ್ತಿದ್ದರು. ಅನಕ್ಷರತೆ ಮತ್ತು ಬಡತನವು ಈ ಸಮುದಾಯವನ್ನು ಬಹಳ ಹಿಂದಿನಿಂದಲೂ ಬಹುವಾಗಿ ಕಾಡುತ್ತಿದೆ. ಆದರೆ ಈಗ ಆ ಪರಿಸರದಲ್ಲಿ ಕ್ರಮೇಣ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದೆ. ಇಂತಹ ದುಃಸ್ಥಿತಿಯಲ್ಲಿ ಸಿಲುಕಿರುವ ತಾವು ಇಲ್ಲಿ ನಿಂತನೀರಾಗದೆ ಮುಖ್ಯವಾಹಿನಿಯಲ್ಲಿ ಹರಿಯಬೇಕು, ಅದರ ಭಾಗವಾಗಬೇಕು ಮತ್ತು ಏನಾದರೂ ದೊಡ್ಡದನ್ನು ಸಾಧಿಸಬೇಕು ಎಂಬ ಹಂಬಲ ಈ ಸಮಾಜದಲ್ಲಿಯೂ ದೃಗ್ಗೋಚರವಾಗುತ್ತಿದೆ. UPSC ಯ ಈ ಫಲಿತಾಂಶಗಳು ಇದಕ್ಕೆ ಸಾಕ್ಷಿಯಾಗಿದೆ. ಇದು ಹೇಗೆ ಸಂಭವಿಸಿತು ಎಂಬುದೇ...

Published On - 11:58 am, Sun, 19 May 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ