AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Job Fair 2025: ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮೈಸೂರಿನಲ್ಲಿ ಕೆಎಸ್​ಡಿಸಿ ವತಿಯಿಂದ ಮೆಗಾ ಜಾಬ್ ಫೇರ್!

ಮೈಸೂರನಲ್ಲಿ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಘನ ನೇತೃತ್ವದಲ್ಲಿ ಅಕ್ಟೋಬರ್​ 17ರಂದು ನಡೆಯಲಿರುವ ಈ ಮೇಳವು ನಿರುದ್ಯೋಗಿಗಳಿಗೆ ಉದ್ಯೋಗದ ಬಾಗಿಲು ತೆರೆಯಲಿದೆ. 200ಕ್ಕೂ ಹೆಚ್ಚು ಕಂಪನಿಗಳಿಂದ ನೇರ ಸಂದರ್ಶನವಿರಲಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ 200ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳುತ್ತಿವೆ. ವಿವಿಧ ಕ್ಷೇತ್ರಗಳ, ವಿವಿಧ ಹುದ್ದೆಗಳಿಗಾಗಿ ನಡೆಯುವ ಈ ನೇರ ಸಂದರ್ಶನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ನಿಮ್ಮ ಅರ್ಹತೆಗೆ ತಕ್ಕ ಉದ್ಯೋಗವನ್ನು ಒಂದೇ ದಿನದಲ್ಲಿ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

Mysore Job Fair 2025: ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮೈಸೂರಿನಲ್ಲಿ ಕೆಎಸ್​ಡಿಸಿ ವತಿಯಿಂದ ಮೆಗಾ ಜಾಬ್ ಫೇರ್!
Mysore Job Fair 2025
TV9 Web
| Updated By: Digi Tech Desk|

Updated on:Oct 14, 2025 | 1:04 PM

Share

ಮೈಸೂರು, ಅ. 14: ​ಉದ್ಯೋಗ ಮೇಳಗಳು (Job Fairs) ಕೇವಲ ಉದ್ಯೋಗ ಪಡೆಯುವ ವೇದಿಕೆಯಾಗದೆ, ನಿಮ್ಮ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ಮತ್ತು ವೃತ್ತಿಜೀವನದಲ್ಲಿ ಮುಂದುವರೆಯಲು ಒಂದು ಉತ್ತಮ ಮಾರ್ಗವಾಗಿದೆ. ಕರ್ನಾಟಕದಲ್ಲಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) ಮತ್ತು ಇತರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಈ ನಿಟ್ಟಿನಲ್ಲಿ ಮಹತ್ವದ ಕೆಲಸ ಮಾಡುತ್ತಿವೆ. ಕರ್ನಾಟಕದ ಯುವಜನತೆಯ ಕೌಶಲ್ಯ ಮತ್ತು ಉದ್ಯೋಗದ ಕನಸುಗಳಿಗೆ ರೆಕ್ಕೆ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು (Job Fair) ಆಯೋಜಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಘನ ನೇತೃತ್ವದಲ್ಲಿ ನಡೆಯಲಿರುವ ಈ ಮೇಳವು ನಿರುದ್ಯೋಗಿಗಳಿಗೆ ಉದ್ಯೋಗದ ಬಾಗಿಲು ತೆರೆಯಲಿದೆ.

​200ಕ್ಕೂ ಹೆಚ್ಚು ಕಂಪನಿಗಳಿಂದ ನೇರ ಸಂದರ್ಶನ

ಮೈಸೂರಿನಲ್ಲಿ ಮೆಗಾ ಉದ್ಯೋಗ ಮೇಳ ನಡೆಯಲಿದ್ದು, ಇದರಲ್ಲಿ 200 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್ ಮಾತನಾಡಿ, ವಿವಿಧ ಕ್ಷೇತ್ರಗಳ, ವಿವಿಧ ಹುದ್ದೆಗಳಿಗಾಗಿ ನಡೆಯುವ ಈ ನೇರ ಸಂದರ್ಶನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ನಿಮ್ಮ ಅರ್ಹತೆಗೆ ತಕ್ಕ ಉದ್ಯೋಗವನ್ನು ಒಂದೇ ದಿನದಲ್ಲಿ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ, ಆದ್ದರಿಂದ ಈ ಉದ್ಯೋಗ ಮೇಳದಲ್ಲಿ ಯುವಜನರು ಅತೀ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಮೈಸೂರಿನ ಉದ್ಯೋಗ ಮೇಳ ಎಲ್ಲಿ ಮತ್ತು ಯಾವಾಗ?

ಈ ಉದ್ಯೋಗ ಮೇಳವು ಮೈಸೂರಿನ ಐತಿಹಾಸಿಕ ಮಹಾರಾಜ ಮೈದಾನದಲ್ಲಿ, ಅಕ್ಟೋಬರ್ 17, 2025 ರಂದು ಮೈಸೂರು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಡೆಯಲಿದೆ.

ಮೈಸೂರಿನ ಉದ್ಯೋಗ ಮೇಳದಲ್ಲಿ ​ಯಾರು ಭಾಗವಹಿಸಬಹುದು?

​ನೀವು SSLC, PUC, ಪದವಿ, ಸ್ನಾತಕೋತ್ತರ ಪದವಿ, ಐಟಿಐ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿದ್ದರೆ, ಈ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತೀರಿ. ಉದ್ಯೋಗ ಮೇಳದಲ್ಲಿ ಹಲವು ಕಂಪನಿಗಳು ಭಾಗವಹಿಸುತ್ತವೆ. ಅವು ಯಾವ ರೀತಿಯ ಕೌಶಲ್ಯಗಳು, ಜ್ಞಾನ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳನ್ನು ಹುಡುಕುತ್ತಿವೆ ಎಂಬುದನ್ನು ನೀವು ನೇರವಾಗಿ ತಿಳಿದುಕೊಳ್ಳಬಹುದು. ನೀವು ಸಂದರ್ಶನಕ್ಕೆ ಹಾಜರಾದಾಗ ಅಥವಾ ಕಂಪನಿಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದಾಗ, ನಿಮ್ಮಲ್ಲಿರುವ ಕೌಶಲ್ಯ ಮತ್ತು ಉದ್ಯಮಕ್ಕೆ ಬೇಕಾದ ಕೌಶಲ್ಯದ ನಡುವೆ ಇರುವ ಅಂತರವನ್ನು ಅರಿತುಕೊಳ್ಳಬಹುದು. ಇದು ಮುಂದೆ ಯಾವ ವಿಷಯದಲ್ಲಿ ತರಬೇತಿ ಪಡೆಯಬೇಕು ಎಂಬುದನ್ನು ನಿರ್ಧರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕಾತಿ; 10th, ಪಿಯುಸಿ ಪಾಸಾಗಿದ್ರೆ ಸಾಕು

ಮೈಸೂರಿನ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳುವುದು ಎಲ್ಲಿ ಮತ್ತು ಹೇಗೆ?

ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ​ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೀವು ಅರ್ಹರಾಗಿದ್ದರೆ ಈ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಿ: udyogamela.ksdckarnataka.com

ಸಿದ್ಧರಾಗಿ ಬನ್ನಿ: ಸಂದರ್ಶನಕ್ಕೆ ಹಾಜರಾಗುವಾಗ ನಿಮ್ಮ ರೆಸ್ಯೂಮ್‌ನ ಸಾಕಷ್ಟು ಪ್ರತಿಗಳನ್ನು ತರಲು ಮರೆಯಬೇಡಿ. ​ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ನಿರುದ್ಯೋಗವನ್ನು ದೂರ ಮಾಡಿ. ಹೆಚ್ಚಿನ ಮಾಹಿತಿ ಮತ್ತು ಸ್ಪಷ್ಟೀಕರಣಕ್ಕಾಗಿ 9606494308 ಸಹಾಯವಾಣಿಗೆ ಕರೆ ಮಾಡಿ

ಉದ್ಯೋಗ ಮೇಳವು ಕೇವಲ ಪದವೀಧರರಿಗೆ ಸೀಮಿತವಾಗಿಲ್ಲ ಮತ್ತು ಎಸ್‌ಎಸ್‌ಎಲ್‌ಸಿ ಅಥವಾ ಪಿಯು ವಿದ್ಯಾರ್ಹತೆ ಹೊಂದಿರುವವರೂ ಸಹ ನೋಂದಾಯಿಸಿಕೊಂಡು ಸೂಕ್ತ ಉದ್ಯೋಗವನ್ನು ಪಡೆಯಲು ಈ ಮೇಳದಲ್ಲಿ ಭಾಗವಹಿಸಬಹುದು ಎಂದು ಶ್ರೀ ಯುಕೇಶ್ ಕುಮಾರ್ ಹೇಳಿದರು. ಯುವ ನಿಧಿಯಡಿಯಲ್ಲಿ ನೋಂದಾಯಿಸಿಕೊಂಡಿರುವ ಯುವಕರನ್ನು ಸಹ ಪರಿಗಣಿಸಿಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Published On - 12:58 pm, Tue, 14 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ