AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NDA Recruitment 2023: SSLC ಮತ್ತು PUC ಪಾಸಾದವರಿಗೆ ಸರ್ಕಾರಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

National Defence Academy Recruitment 2023: ಈ ಹುದ್ದೆಗಳಿಗೆ 18 ರಿಂದ 27 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಕೆಲ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 25 ಎಂದು ನಿಗದಿಪಡಿಸಲಾಗಿದೆ.

NDA Recruitment 2023: SSLC ಮತ್ತು PUC ಪಾಸಾದವರಿಗೆ ಸರ್ಕಾರಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
Govt Jobs
TV9 Web
| Updated By: ಝಾಹಿರ್ ಯೂಸುಫ್|

Updated on: Jan 03, 2023 | 2:59 PM

Share

NDA Recruitment 2023: ನೀವು SSLC ಹಾಗೂ PUC ನಲ್ಲಿ ಪಾಸ್ ಆಗಿದ್ದೀರಾ? ಜೊತೆಗೆ ಈ ವಿದ್ಯಾರ್ಹತೆಯೊಂದಿಗೆ ಸರ್ಕಾರಿ ನೌಕರಿಯನ್ನು ಹುಡುಕುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಅಂದರೆ ಎನ್.ಡಿ.ಎ. ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ನಿಮಗೆ ಇರಬೇಕಾದ ವಿದ್ಯಾರ್ಹತೆ ಎಂದರೆ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಅಷ್ಟೇ. ಪುಣೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಈ ಮೂಲಕ ಲೋವರ್ ಡಿವಿಷನ್ ಕ್ಲರ್ಕ್, ಪೇಂಟರ್, ಡ್ರಾಟ್ಸ್ ಮನ್, ಕುಕ್, ಫೈರ್ ಮ್ಯಾನ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಮಲ್ಟಿ ಟಾಸ್ಕಿಂಗ್ ಸ್ಟಾಫ್ – 182 ಹುದ್ದೆಗಳು
  • ಲೋವರ್ ಡಿವಿಷನ್ ಕ್ಲರ್ಕ್ – 27 ಹುದ್ದೆಗಳು
  • ಪೇಂಟರ್ – 1 ಹುದ್ದೆ
  • ಡ್ರಾಫ್ಟ್ಸ್‌ಮ್ಯಾನ್ – 1 ಹುದ್ದೆ
  • ಸಿವಿಲ್ ಮೋಟಾರ್ ಡ್ರೈವರ್ – 8 ಹುದ್ದೆ
  • ಪ್ರಿಂಟರ್ – 1 ಹುದ್ದೆ
  • ಸಿನಿಮಾ ಪ್ರೊಜೆಕ್ಷನಿಸ್ಟ್ – 1 ಹುದ್ದೆ
  • ಕುಕ್ – 12 ಹುದ್ದೆಗಳು
  • ಫೈರ್‌ಮ್ಯಾನ್ – 10 ಹುದ್ದೆಗಳು
  • ಕಮ್ಮಾರ – 1 ಹುದ್ದೆ
  • ಬೇಕರ್ – 2 ಹುದ್ದೆಗಳು
  • ಸೈಕಲ್ ರಿಪೇರಿ – 5 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 251

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ನಿಮ್ಮ ಬಳಿ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪ್ರಮಾಣಪತ್ರಗಳಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಎನ್​ಡಿಎಯ ಅಧಿಕೃತ ವೆಬ್‌ಸೈಟ್ ndacivrect.gov.in ಗೆ ಭೇಟಿ ನೀಡುವ ಮೂಲಕ ನೇಮಕಾತಿಗಾಗಿ ಆನ್‌ಲೈನ್ ಫಾರ್ಮ್ ಅನ್ನು ಭರ್ತಿ ಮಾಡಬೇಕು. ಅಲ್ಲದೆ ಇಂದಿನಿಂದ (ಜನವರಿ 1) 21 ದಿನಗಳ ಒಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅಂದರೆ, ನೀವು ಜನವರಿ 20 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:

ಈ ಹುದ್ದೆಗಳಿಗೆ 18 ರಿಂದ 27 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಕೆಲ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 25 ಎಂದು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸ್ಕ್ರೀನ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ. ಒಟ್ಟು ಖಾಲಿ ಹುದ್ದೆಗಳ 10 ಪಟ್ಟು ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ

ವಿಶೇಷ ಸೂಚನೆ: ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ. ಅಂದರೆ ಕೆಲ ಹುದ್ದೆಗಳಿಗೆ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಇನ್ನು ಕೆಲ ಹುದ್ದೆಗಳಿಗೆ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ. ಹೀಗಾಗಿ ಅಧಿಸೂಚನೆಯನ್ನು ಪರಿಶೀಲಿಸಿದ ಬಳಿಕ ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಖಚಿತಪಡಿಸಿ ಅರ್ಜಿಗಳನ್ನು ಭರ್ತಿ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು