AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NDA’s First Women Cadets Graduate: ಇತಿಹಾಸದಲ್ಲೇ ಮೊದಲ ಬಾರಿಗೆ 300 ಪುರುಷ ಸೈನಿಕರೊಂದಿಗೆ 17 ಮಹಿಳಾ ಕೆಡೆಟ್‌ಗಳಿಗೆ ಪದವಿ

ಮೇ 30 ರಂದು, ಪುಣೆಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ (ಎನ್‌ಡಿಎ) 17 ಮಹಿಳಾ ಕೆಡೆಟ್‌ಗಳು ಪದವಿ ಪಡೆದು ಇತಿಹಾಸ ನಿರ್ಮಿಸಲಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ನಂತರ, ಮಹಿಳೆಯರಿಗೆ ಎನ್‌ಡಿಎ ಪ್ರವೇಶ ದೊರೆತಿರುವುದು ಇದಕ್ಕೆ ಕಾರಣ. ಈ ಘಟನೆಯು ಭಾರತೀಯ ಸಶಸ್ತ್ರ ಪಡೆಗಳಲ್ಲಿ ಲಿಂಗ ಸಮಾನತೆಯತ್ತ ಮಹತ್ವದ ಹೆಜ್ಜೆಯಾಗಿದೆ. ಕೆಡೆಟ್ ಇಶಿತಾ ಶರ್ಮಾ ಅವರ ಅನುಭವಗಳನ್ನು ಇಲ್ಲಿ ವಿವರಿಸಲಾಗಿದೆ.

NDA's First Women Cadets Graduate: ಇತಿಹಾಸದಲ್ಲೇ ಮೊದಲ ಬಾರಿಗೆ 300 ಪುರುಷ ಸೈನಿಕರೊಂದಿಗೆ 17 ಮಹಿಳಾ ಕೆಡೆಟ್‌ಗಳಿಗೆ ಪದವಿ
Nda's First Women Cadets Graduate
ಅಕ್ಷತಾ ವರ್ಕಾಡಿ
|

Updated on:May 25, 2025 | 2:14 PM

Share

ಮೇ 30 ರಂದು, ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಪುರುಷ ಕೆಡೆಟ್‌ಗಳ ಜೊತೆಗೆ ಮೊದಲ ಬಾರಿಗೆ 17 ಮಹಿಳಾ ಕೆಡೆಟ್‌ಗಳು ಪದವಿ ಪಡೆಯಲಿದ್ದಾರೆ. ಈ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಈ ಕಾರ್ಯಕ್ರಮವು ಭಾರತದ ಸಶಸ್ತ್ರ ಪಡೆಗಳಲ್ಲಿ ಲಿಂಗ ಏಕೀಕರಣದ ಕಡೆಗೆ ಮಹತ್ವದ ಹೆಜ್ಜೆಯನ್ನು ಸೂಚಿಸಲಿದೆ.

ಕೆಡೆಟ್ ಇಶಿತಾ ಶರ್ಮಾ ಪುಣೆಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪರೇಡ್ ಮೈದಾನಕ್ಕೆ ಕೇವಲ ಪದವೀಧರರಾಗಿ ಮಾತ್ರವಲ್ಲದೆ ಇತಿಹಾಸದಲ್ಲಿ ದಾಖಲಾಗುವ ಕ್ಷಣದ ಭಾಗವಾಗಿ ಹೆಜ್ಜೆ ಹಾಕಲಿದ್ದಾರೆ. ದಶಕಗಳ ಕಾಲ, ಎನ್‌ಡಿಎ ಸಂಪೂರ್ಣವಾಗಿ ಪುರುಷರ ಭದ್ರಕೋಟೆಯಾಗಿತ್ತು. ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ ಅದು ಬದಲಾಗಿದ್ದು, ಈಗ, ಮೂರು ವರ್ಷಗಳ ನಂತರ, ಆ ಬದಲಾವಣೆಯ ಫಲಿತಾಂಶ ಕಾಣಸಿಗಲಿದೆ. ಈ ಎಲ್ಲಾ ಮಹಿಳಾ ಕೆಡೆಟ್‌ಗಳು ಭಾರತೀಯ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಗೆ ಸೇರಲಿದ್ದಾರೆ.

“ನಾನು ಮಿಲಿಟರಿ ಹಿನ್ನೆಲೆಯಿಂದ ಬಂದವಳಲ್ಲ. ನನ್ನ ಪೋಷಕರು ಕಾರ್ಪೊರೇಟ್ ವಲಯದಲ್ಲಿ ಕೆಲಸ ಮಾಡುತ್ತಾರೆ ಮತ್ತು ನನ್ನ ಸಹೋದರ ಐಟಿ ವೃತ್ತಿಪರ. ಎನ್‌ಡಿಎ ಮಹಿಳೆಯರಿಗೆ ಪ್ರವೇಶವನ್ನು ಘೋಷಿಸಿದಾಗ ನಾನು ಅರ್ಥಶಾಸ್ತ್ರದಲ್ಲಿ ಪದವಿ ಪಡೆಯುತ್ತಿದ್ದೆ. ಅರ್ಜಿ ಸಲ್ಲಿಸುವ ಮೊದಲು ನಾನು ಯೋಚಿಸಲಿಲ್ಲ, ನೇರವಾಗಿ ಅರ್ಜಿ ಸಲ್ಲಿಸಿದೆ” ಎಂದು ಡಿವಿಷನ್ ಕೆಡೆಟ್ ಕ್ಯಾಪ್ಟನ್ (ಡಿಸಿಸಿ) ಗೌರವ ಬಿರುದನ್ನು ಹೊಂದಿರುವ ಇಶಿತಾ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶ:

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ ಎನ್‌ಡಿಎ ಮತ್ತು ನೌಕಾ ಅಕಾಡೆಮಿ ಪ್ರವೇಶ ಪರೀಕ್ಷೆಗಳಲ್ಲಿ ಅರ್ಹ ಮಹಿಳೆಯರು ಹಾಜರಾಗಲು ಅವಕಾಶ ನೀಡುವಂತೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಆಗಸ್ಟ್ 2021 ರಲ್ಲಿ ಐತಿಹಾಸಿಕ ತೀರ್ಪು ನೀಡಿತು. ಈ ಮೂಲಕ ಮಹಿಳೆಯರು NDA ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ UPSC ಗೆ ಆದೇಶಿಸಿತು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:09 pm, Sun, 25 May 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!