AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಘಟಿತ ವಲಯದ ಕಾರ್ಮಿಕರಿಗೆ ಹೊಸ ಪಿಂಚಣಿ ಯೋಜನೆ: ಇಪಿಎಫ್​ಒ ಚಿಂತನೆ

ಕಾರ್ಮಿಕರು ನಿವೃತ್ತಿಯ ನಂತರ ಹೆಚ್ಚು ಪಿಂಚಣಿ ಬಯಸುವ ಕಾರಣ ಹೊಸ ಪಿಂಚಣಿ ಯೋಜನೆಯನ್ನು ರೂಪಿಸಲು ಪಿಎಫ್ ಚಿಂತನೆ ನಡೆಸಿದೆ ಎಂದು ಮೂಲಗಳು ಹೇಳಿವೆ.

ಸಂಘಟಿತ ವಲಯದ ಕಾರ್ಮಿಕರಿಗೆ ಹೊಸ ಪಿಂಚಣಿ ಯೋಜನೆ: ಇಪಿಎಫ್​ಒ ಚಿಂತನೆ
ಮಹಿಳಾ ಕಾರ್ಮಿಕರು ಮತ್ತು ಇಪಿಎಫ್​ಒ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Feb 20, 2022 | 6:24 PM

Share

ನವದೆಹಲಿ: ನಿವೃತ್ತಿಯ ನಂತರ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಕಲ್ಪಿಸುವ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯು (Employees Provident Fund Organisation – EPFO) ಸಂಘಟಿತ ವಲಯದಲ್ಲಿ 15 ಸಾವಿರ ರೂಪಾಯಿಗಿಂತ ಹೆಚ್ಚು ಮೂಲ ವೇತನ ಇರುವ ಕಾಮಿರ್ಕರಿಗೆ ಹೊಸ ರೀತಿಯ ಪಿಂಚಣಿ ಯೋಜನೆಯನ್ನು ರೂಪಿಸಲು ಮುಂದಾಗಿದೆ.  1995ರ ಕಾರ್ಮಿಕರ ಪಿಂಚಣಿ ಯೋಜನೆಗೆ ಕಡ್ಡಾಯವಾಗಿ ಒಳಪಡದವರಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಈ ಯೋಜನೆ ರೂಪಿಸಿದೆ. ಕಾರ್ಮಿಕರು ನಿವೃತ್ತಿಯ ನಂತರ ಹೆಚ್ಚು ಪಿಂಚಣಿ ಬಯಸುವ ಕಾರಣ ಹೊಸ ಪಿಂಚಣಿ ಯೋಜನೆಯನ್ನು ರೂಪಿಸಲು ಪಿಎಫ್ ಚಿಂತನೆ ನಡೆಸಿದೆ. ಈ ಬಗ್ಗೆ ಮಾರ್ಚ್​ 11 ಮತ್ತು 12ರಂದು ಗುವಾಹಟಿಯಲ್ಲಿ ನಡೆಯುವ ಪಿಎಫ್​ ಟ್ರಸ್ಟಿಗಳ ಕೇಂದ್ರೀಯ ಮಂಡಳಿಯ (The Central Board of Trustees – CBT) ಸಭೆಯಲ್ಲಿ ಈ ಸಂಬಂಧದ ಚರ್ಚೆ ನಡೆಯಲಿದೆ. ಪಿಂಚಣಿ ಕುರಿತಂತೆ 2021ರ ನವೆಂಬರ್​ನಲ್ಲಿ ಸಿಬಿಟಿ ರಚಿಸಿದ್ದ ಉಪಸಮಿತಿಯ ವರದಿ ಕೂಡ ಈ ಸಭೆಯಲ್ಲಿ ಮಂಡನೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.

ಮೂಲವೇತನ ಮತ್ತು ತುಟ್ಟಿಭತ್ಯೆ ಸೇರಿ 15 ಸಾವಿರ ರೂಪಾಯಿಗಿಂತ ಹೆಚ್ಚು ವೇತನ ಪಡೆಯುವ ಕಾಮಿರ್ಕರು 1995ರ ಪಿಂಚಣಿ ಯೋಜನೆಗೆ ಕಡ್ಡಾಯವಾಗಿ ಒಳಪಡುತ್ತಾರೆ. ಇವರು ಶೇ. 8.33 ದರದಲ್ಲಿ ಕಡಿಮೆ ವಂತಿಗೆಯನ್ನು ಪಿಂಚಣಿ ನಿಧಿಗೆ ಪಾವತಿಸುತ್ತಿರುವ ಕಾರಣ ನಿವೃತ್ತಿಯ ನಂತರ ಕಡಿಮೆ ಪಿಂಚಣಿ ಪಡೆಯುತ್ತಾರೆ. ಇದಕ್ಕೆ 2014ರಲ್ಲಿ ತಿದ್ದುಪಡಿ ತಂದ ಪಿಎಫ್ ಸಂಘಟನೆಯು ಪಿಂಚಣಿ ಪಡೆಯುವುದಕ್ಕೆ 15 ಸಾವಿರ ರೂಪಾಯಿ ಮೂಲವೇತನದ ಮಿತಿಯನ್ನು ಹಾಕಿತು.

ಉದ್ಯೋಗಕ್ಕೆ ಸೇರುವ ವೇಳೆಗೆ 15 ಸಾವಿರ ರೂಪಾಯಿ ಮೂಲ ವೇತನ ಇದ್ದವರಿಗೆ ಮಾತ್ರ ಇದು ಅನ್ವಯ ಆಗುತ್ತಿತ್ತು. ಅದಕ್ಕೂ ಮೊದಲು 6,500 ರೂಪಾಯಿ ಮೂಲ ವೇತನ ಇದ್ದವರನ್ನು ಮಾತ್ರ ಪಿಂಚಣಿಗೆ ಪರಿಗಣಿಸಲಾಗುತ್ತಿತ್ತು. ಪಿಂಚಣಿಗೆ ಪರಿಗಣಿತವಾಗುವ ಮೂಲ ವೇತನವನ್ನು ಪರಿಷ್ಕರಣೆ ಮಾಡಿದ್ದರಿಂದ ಈ ಯೋಜನೆಗೆ ಒಳಪಡುವ ಕಾಮಿರ್ಕರ ಸಂಖ್ಯೆ 50 ಲಕ್ಷ ತಲುಪಿದೆ ಎಂದು ಅಂದಾಜು ಮಾಡಲಾಗಿದೆ. ಆದರೆ, ಕನಿಷ್ಠ ಮೂಲವೇತನವನ್ನು 15 ಸಾವಿರ ರೂಪಾಯಿಯ ಬದಲಿಗೆ 25 ಸಾವಿರ ರೂಪಾಯಿಗೆ ಏರಿಸಬೇಕು ಎಂಬ ಪ್ರಸ್ತಾವ ಕೂಡ ಇಪಿಎಫ್​ಒ ಮುಂದೆ ಇದೆ. ಆದರೆ, ಈ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ಆಗಿಲ್ಲ.

ಇದನ್ನೂ ಓದಿ: EPFO e-nomination: ಇಪಿಎಫ್​ಒ ಇ-ನಾಮಿನೇಷನ್ ಮಾಡುವುದು ಹೇಗೆ ಎಂಬ ಬಗ್ಗೆ ಹಂತಹಂತವಾದ ಮಾಹಿತಿ ಇಲ್ಲಿದೆ

ಇದನ್ನೂ ಓದಿ: PPF Vs NPS: ಪಿಪಿಎಫ್​ ವರ್ಸಸ್ ಎನ್​ಪಿಎಸ್​ ಇವೆರಡರಲ್ಲಿ ಯಾವ ಹೂಡಿಕೆ ಉತ್ತಮ?

Follow Us
TV9 Web
TV9 Web

TV9 Kannada

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!