AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NVS Recruitment 2022: ನವೋದಯ ವಿದ್ಯಾಲಯ ಸಮಿತಿಯ 1925 ಹುದ್ದೆಗಳಿಗೆ ಅರ್ಜಿ ಆಹ್ವಾನ

NVS Recruitment 2022: ಫೆಬ್ರವರಿ 10 ರ ಒಳಗೆ ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ವೆಬ್‌ಸೈಟ್ navodaya.gov.in ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬೇಕು.

NVS Recruitment 2022: ನವೋದಯ ವಿದ್ಯಾಲಯ ಸಮಿತಿಯ 1925 ಹುದ್ದೆಗಳಿಗೆ ಅರ್ಜಿ ಆಹ್ವಾನ
NVS Recruitment 2022
TV9 Web
| Updated By: ಝಾಹಿರ್ ಯೂಸುಫ್|

Updated on: Feb 08, 2022 | 9:05 PM

Share

NVS Recruitment 2022: ಕೇಂದ್ರ ಸರ್ಕಾರದ ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) ವಿವಿಧ ಗ್ರೂಪ್​ಗಳ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಫೆಬ್ರವರಿ 10 ರವರೆಗೆ ಅರ್ಜಿ ಸಲ್ಲಿಸಲು ಸಮಯವಕಾಶವಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NVS ನ ಅಧಿಕೃತ ವೆಬ್‌ಸೈಟ್ , navodaya.gov.in ಗೆ ಭೇಟಿ ನೀಡುವ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಮಾರ್ಚ್ 01, 2022 ರಿಂದ ನಡೆಯಲಿರುವ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ (CBT) ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಕರೆಯಲಾಗುವುದು. ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಗಳು, ಅನುಭವ, ಅರ್ಜಿ ಶುಲ್ಕ ಮತ್ತು ಇತರ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.

NVS Recruitment 2022: ಪ್ರಮುಖ ದಿನಾಂಕಗಳು ಆನ್‌ಲೈನ್ ಅಪ್ಲಿಕೇಶನ್‌ನ ಕೊನೆಯ ದಿನಾಂಕ: ಫೆಬ್ರವರಿ 10, 2022. NVS CBT ಪರೀಕ್ಷೆ: ಮಾರ್ಚ್ 09 ರಿಂದ ಮಾರ್ಚ್ 11, 2022.

ಹುದ್ದೆಯ ವಿವರಗಳು ಒಟ್ಟು ಪೋಸ್ಟ್‌ಗಳು: 1925

ಗ್ರೂಪ್ ಎ ಸಹಾಯಕ ಆಯುಕ್ತರು: 5 ಸಹಾಯಕ ಆಯುಕ್ತರು (ನಿರ್ವಾಹಕರು): 2

ಗ್ರೂಪ್ ಬಿ ಮಹಿಳಾ ಸಿಬ್ಬಂದಿ ನರ್ಸ್: 82

ಗ್ರೂಪ್ ಸಿ ಸಹಾಯಕ ವಿಭಾಗ ಅಧಿಕಾರಿ: 10 ಆಡಿಟ್ ಸಹಾಯಕ: 11 ಕಿರಿಯ ಭಾಷಾಂತರ ಅಧಿಕಾರಿ: 4 ಜೂನಿಯರ್ ಇಂಜಿನಿಯರ್ (ಸಿವಿಲ್): 1 ಸ್ಟೆನೋಗ್ರಾಫರ್: 22 ಕಂಪ್ಯೂಟರ್ ಆಪರೇಟರ್: 4 ಅಡುಗೆ ಸಹಾಯಕ: 87 ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (RO ಕೇಡರ್): 8 ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (ಜೆಎನ್‌ವಿ ಕೇಡರ್): 622 ಎಲೆಕ್ಟ್ರಿಷಿಯನ್ ಕಮ್ ಪ್ಲಂಬರ್: 273 ಲ್ಯಾಬ್ ಅಟೆಂಡೆಂಟ್: 142 ಮೆಸ್ ಸಹಾಯಕ: 629 MTS: 23

ಶೈಕ್ಷಣಿಕ ಅರ್ಹತೆ ಸಹಾಯಕ ಆಯುಕ್ತರು (ನಿರ್ವಾಹಕರು): 8 ವರ್ಷಗಳ ಅನುಭವದೊಂದಿಗೆ ಪದವಿ ಪಡೆದಿರಬೇಕು. ಮಹಿಳಾ ಸಿಬ್ಬಂದಿ ನರ್ಸ್: 12 ನೇ ತೇರ್ಗಡೆ ಮತ್ತು ನರ್ಸಿಂಗ್‌ನಲ್ಲಿ ಡಿಪ್ಲೊಮಾ ಅಥವಾ ನರ್ಸಿಂಗ್‌ನಲ್ಲಿ ಪದವಿ ಹೊಂದಿರಬೇಕು. ಸಹಾಯಕ ವಿಭಾಗ ಅಧಿಕಾರಿ: ಪದವಿ ಹೊಂದಿರಬೇಕು. ಆಡಿಟ್ ಅಸಿಸ್ಟೆಂಟ್: ಬಿ.ಕಾಂ ಪದವಿ ಪಡೆದಿರಬೇಕು. ಕಿರಿಯ ಭಾಷಾಂತರ ಅಧಿಕಾರಿ: ಇಂಗ್ಲಿಷ್‌ನೊಂದಿಗೆ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಅಥವಾ ಹಿಂದಿಯೊಂದಿಗೆ ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಹಿಂದಿ/ಇಂಗ್ಲಿಷ್ ಆಗಿ ಸ್ನಾತಕೋತ್ತರ ಪದವಿ ಕಡ್ಡಾಯ. ಜೂನಿಯರ್ ಇಂಜಿನಿಯರ್ (ಸಿವಿಲ್): ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಸಿವಿಲ್‌ನಲ್ಲಿ 3 ವರ್ಷಗಳ ಡಿಪ್ಲೊಮಾ. ಸ್ಟೆನೋಗ್ರಾಫರ್: 12ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ; ಸಹಾಯಕ ಕಮಿಷನರ್: 45 ವರ್ಷಗಳು ಮಹಿಳಾ ಸಿಬ್ಬಂದಿ ನರ್ಸ್: 35 ವರ್ಷಗಳು ಸಹಾಯಕ ವಿಭಾಗ ಅಧಿಕಾರಿ: 18 ರಿಂದ 30 ವರ್ಷಗಳು ಆಡಿಟ್ ಸಹಾಯಕ: 18 ರಿಂದ 30 ವರ್ಷಗಳು ಕಿರಿಯ ಭಾಷಾಂತರ ಅಧಿಕಾರಿ: 32 ವರ್ಷಗಳು ಜೂನಿಯರ್ ಇಂಜಿನಿಯರ್ (ಸಿವಿಲ್): 35 ವರ್ಷಗಳು ಸ್ಟೆನೋಗ್ರಾಫರ್: 18 ರಿಂದ 27 ವರ್ಷಗಳು

ಅರ್ಜಿ ಶುಲ್ಕ: ಸಹಾಯಕ ಆಯುಕ್ತರು: 1500 ರೂ. ಮಹಿಳಾ ಸಿಬ್ಬಂದಿ ನರ್ಸ್: 1200 ರೂ. ಲ್ಯಾಬ್ ಅಟೆಂಡೆಂಟ್/ ಮೆಸ್ ಹೆಲ್ಪರ್/ ಎಂಟಿಎಸ್: 750 ರೂ. ಇತರೆ ಹುದ್ದೆಗಳು: 1000 ರೂ.

ಅರ್ಜಿ ಸಲ್ಲಿಸುವುದು ಹೇಗೆ? ಫೆಬ್ರವರಿ 10 ರ ಒಳಗೆ ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ವೆಬ್‌ಸೈಟ್ navodaya.gov.in ಮೂಲಕ ಆನ್​ಲೈನ್​ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

(NVS Recruitment 2022: Only Two Days Left to Apply For 1925 Posts)

ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್