AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ONGC Scholarship 2026: ಒಎನ್‌ಜಿಸಿ ವಿದ್ಯಾರ್ಥಿವೇತನ; ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 48,000ರೂ. ಆರ್ಥಿಕ ನೆರವು

ONGC 2026ನೇ ಸಾಲಿನ ವಿದ್ಯಾರ್ಥಿವೇತನವನ್ನು ಪ್ರತಿಭಾವಂತ UG/PG ವಿದ್ಯಾರ್ಥಿಗಳಿಗೆ ಘೋಷಿಸಿದೆ. SC/ST, OBC, ಸಾಮಾನ್ಯ ವರ್ಗಗಳಿಗೆ ಮೀಸಲಾತಿಯಿದ್ದು, ಮಹಿಳೆಯರಿಗೆ ಶೇ.50ರಷ್ಟು ಮೀಸಲಿದೆ. ಇಂಜಿನಿಯರಿಂಗ್, ಎಂಬಿಬಿಎಸ್, ಭೂವಿಜ್ಞಾನ, ಎಂಬಿಎ ವಿದ್ಯಾರ್ಥಿಗಳು ಮೇ 15ರೊಳಗೆ ಅರ್ಜಿ ಸಲ್ಲಿಸಬಹುದು. ಪೋಷಕರ ಆದಾಯ ಮತ್ತು ವಯಸ್ಸಿನ ಮಿತಿಗಳಿವೆ. ಹಿಂದಿನ ಅಂಕಗಳ ಆಧಾರದ ಮೇಲೆ ಆಯ್ಕೆ ನಡೆಯುತ್ತದೆ.

ONGC Scholarship 2026: ಒಎನ್‌ಜಿಸಿ ವಿದ್ಯಾರ್ಥಿವೇತನ; ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 48,000ರೂ. ಆರ್ಥಿಕ ನೆರವು
ವಿದ್ಯಾರ್ಥಿವೇತನ
ಅಕ್ಷತಾ ವರ್ಕಾಡಿ
|

Updated on:May 02, 2026 | 4:54 PM

Share

ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ 2026ನೇ ಸಾಲಿನ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಈ ಯೋಜನೆಯಡಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 1000, ಒಬಿಸಿ ಅಭ್ಯರ್ಥಿಗಳಿಗೆ 500 ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ವಿದ್ಯಾರ್ಥಿವೇತನಗಳನ್ನು ಮೀಸಲಿಡಲಾಗಿದೆ. ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದ್ದು, ಎಲ್ಲಾ ವಿಭಾಗಗಳಲ್ಲಿ ಶೇಕಡಾ 50 ರಷ್ಟು ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿನಿಯರಿಗೇ ಹಂಚಿಕೆ ಮಾಡಲಾಗುತ್ತದೆ. ಪ್ರಸ್ತುತ ಸಂಬಂಧಿತ ವಿಭಾಗಗಳಲ್ಲಿ ಯುಜಿ (UG) ಮತ್ತು ಪಿಜಿ (PG) ಕೋರ್ಸ್‌ಗಳನ್ನು ಕಲಿಯುತ್ತಿರುವ ಆಸಕ್ತ ವಿದ್ಯಾರ್ಥಿಗಳು ಮೇ 15, ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಈ ವಿದ್ಯಾರ್ಥಿವೇತನವು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಂಜಿನಿಯರಿಂಗ್ (B.E/B.Tech), ಎಂಬಿಬಿಎಸ್ (MBBS), ಭೂವಿಜ್ಞಾನ (Geology), ಭೂಭೌತಶಾಸ್ತ್ರ (Geophysics) ಅಥವಾ ಎಂಬಿಎ (MBA) ಕೋರ್ಸ್‌ಗಳ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಮಾತ್ರ ಲಭ್ಯವಿರುತ್ತದೆ. ಎಂಜಿನಿಯರಿಂಗ್ ಮತ್ತು ಎಂಬಿಬಿಎಸ್ ವಿದ್ಯಾರ್ಥಿಗಳು ಪಿಯುಸಿ/ಇಂಟರ್‌ನಲ್ಲಿ ಕನಿಷ್ಠ ಶೇಕಡಾ 60 ರಷ್ಟು ಅಂಕಗಳನ್ನು ಹೊಂದಿರಬೇಕು. ಅದೇ ರೀತಿ, ಪಿಜಿ ಮಟ್ಟದ ಭೂವಿಜ್ಞಾನ, ಭೂಭೌತಶಾಸ್ತ್ರ ಮತ್ತು ಎಂಬಿಎ ವಿದ್ಯಾರ್ಥಿಗಳು ತಮ್ಮ ಪದವಿಯಲ್ಲಿ ಕನಿಷ್ಠ ಶೇಕಡಾ 60 ರಷ್ಟು ಅಂಕಗಳನ್ನು ಪಡೆದಿರಬೇಕು. ಆಗಸ್ಟ್ 1, 2025ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು. ಅಲ್ಲದೆ, ಪೋಷಕರ ವಾರ್ಷಿಕ ಆದಾಯವು ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ 2 ಲಕ್ಷ ರೂ. ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 4.5 ಲಕ್ಷ ರೂ. ಮೀರಿರಬಾರದು.

ಆಯ್ಕೆ ಪ್ರಕ್ರಿಯೆ ಮತ್ತು ಆರ್ಥಿಕ ನೆರವು:

ಈ ವಿದ್ಯಾರ್ಥಿವೇತನಕ್ಕೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಾಗಿ, ಅಭ್ಯರ್ಥಿಗಳು ತಮ್ಮ ಹಿಂದಿನ ಶಿಕ್ಷಣದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಎಂಜಿನಿಯರಿಂಗ್ ಮತ್ತು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಕಾಲ ತಿಂಗಳಿಗೆ 4,000 ರೂ.ಗಳಂತೆ ವರ್ಷಕ್ಕೆ ಒಟ್ಟು 48,000 ರೂ. ವಿದ್ಯಾರ್ಥಿವೇತನ ದೊರೆಯುತ್ತದೆ. ಅದೇ ರೀತಿ, ಎಂಬಿಎ ಮತ್ತು ಭೂವಿಜ್ಞಾನ/ಭೂಭೌತಶಾಸ್ತ್ರದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಕಾಲ ಇದೇ ಮೊತ್ತದ ನೆರವು ಸಿಗಲಿದೆ. ಅಭ್ಯರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿವೇತನವನ್ನು ಪಡೆಯಲು ತಮ್ಮ ಕೋರ್ಸ್‌ನ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಅರ್ಜಿ ಸಲ್ಲಿಸುವ ವಿಧಾನ ಮತ್ತು ವಲಯವಾರು ಹಂಚಿಕೆ:

ಈ ವಿದ್ಯಾರ್ಥಿವೇತನಕ್ಕಾಗಿ ದೇಶವನ್ನು ಐದು ವಲಯಗಳಾಗಿ ವಿಂಗಡಿಸಲಾಗಿದ್ದು, ಕಾಲೇಜು ಇರುವ ರಾಜ್ಯದ ಆಧಾರದ ಮೇಲೆ ವಲಯವನ್ನು ನಿರ್ಧರಿಸಲಾಗುತ್ತದೆ. ಪ್ರತಿ ವಲಯದಿಂದ ನಿಗದಿತ ಸಂಖ್ಯೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (NSP) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಗಮನಿಸಬೇಕಾದ ಪ್ರಮುಖ ಅಂಶವೆಂದರೆ, ಈಗಾಗಲೇ ಬೇರೆ ಯಾವುದೇ ವಿದ್ಯಾರ್ಥಿವೇತನ ಪಡೆಯುತ್ತಿರುವವರು ಈ ಒಎನ್‌ಜಿಸಿ ಸ್ಕಾಲರ್‌ಶಿಪ್‌ಗೆ ಅರ್ಹರಾಗಿರುವುದಿಲ್ಲ. ಆಸಕ್ತರು ಮೇ 15ರ ಒಳಗಾಗಿ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ದಾಖಲೆಗಳನ್ನು ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಈ ಲಿಂಕ್​ ಮೇಲೆ ಕ್ಲಿಕ್ ಮಾಡಿ

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Sat, 2 May 26

Follow Us
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?