AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament winter session: ಉದ್ಯೋಗ ಸೃಷ್ಟಿಗೆ ಹಲವು ಮಸೂದೆಗಳನ್ನು ಮಂಡಿಸಿದ ಕೇಂದ್ರ ಸರ್ಕಾರ

ಚಳಿಗಾಲದ ಅಧಿವೇಶನದಲ್ಲಿ ಆರ್ಥಿಕ ಬೆಳವಣಿಗೆ, ಆಧುನೀಕರಣ, ಉದ್ಯೋಗ ಸೃಷ್ಟಿಸಲು ಸರ್ಕಾರವು ಪರಿವರ್ತಕ ಮಸೂದೆಗಳ ಪ್ರಸ್ತಾಪಿಸಿದೆ. ಸರ್ಕಾರಿ ಮೂಲಗಳ ಪ್ರಕಾರ, ಇವುಗಳಲ್ಲಿ ತೈಲ ಕ್ಷೇತ್ರ, ಹಡಗು, ರೈಲ್ವೆ, ವಾಯುಯಾನ ಮತ್ತು ವಿಪತ್ತು ನಿರ್ವಹಣೆ ಒಳಗೊಂಡಿವೆ. ಇದು ಕೇವಲ ನವೀಕರಣಗಳಲ್ಲ; ಭಾರತವನ್ನು ಜಾಗತಿಕ ಮಾನದಂಡಗಳೊಂದಿಗೆ ಜೋಡಿಸಲು ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ.

Parliament winter session: ಉದ್ಯೋಗ ಸೃಷ್ಟಿಗೆ ಹಲವು ಮಸೂದೆಗಳನ್ನು ಮಂಡಿಸಿದ ಕೇಂದ್ರ ಸರ್ಕಾರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 30, 2024 | 7:42 PM

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆರ್ಥಿಕ ಬೆಳವಣಿಗೆ, ಆಧುನೀಕರಣ, ಉದ್ಯೋಗ ಸೃಷ್ಟಿಸಲು ಸರ್ಕಾರವು ಪರಿವರ್ತಕ ಮಸೂದೆಗಳ ಪ್ರಸ್ತಾಪಿಸಿದೆ. ಸರ್ಕಾರಿ ಮೂಲಗಳ ಪ್ರಕಾರ, ಇವುಗಳಲ್ಲಿ ತೈಲ ಕ್ಷೇತ್ರ, ಹಡಗು, ರೈಲ್ವೆ, ವಾಯುಯಾನ ಮತ್ತು ವಿಪತ್ತು ನಿರ್ವಹಣೆ ಒಳಗೊಂಡಿವೆ. ಇದು ಕೇವಲ ನವೀಕರಣಗಳಲ್ಲ; ಭಾರತವನ್ನು ಜಾಗತಿಕ ಮಾನದಂಡಗಳೊಂದಿಗೆ ಜೋಡಿಸಲು ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ.

ರಾಜ್ಯಸಭೆಯಲ್ಲಿ, ತೈಲ ಕ್ಷೇತ್ರಗಳ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆ 2024 , ಅನ್ನು ಆಧುನೀಕರಿಸುವ ಮೂಲಕ ಗಮನಾರ್ಹ ಬದಲಾವಣೆಗೆ ಒತ್ತು ನೀಡಿದೆ. ಅಂತೆಯೇ, ವ್ಯಾಪಾರಿ ಹಡಗು ಮಸೂದೆ, 2024, ಲಾಡಿಂಗ್ ಮಸೂದೆ 2024 ನೊಂದಿಗೆ ಕಡಲ ಕಾನೂನುಗಳನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾಗಿದೆ, ಅವುಗಳನ್ನು ಹೆಚ್ಚು ಪರಿಣಾಮಕಾರಿ ಮತ್ತು ಅಂತರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಮಾಡಲಾಗಿದೆ. ಮರ್ಚೆಂಟ್ ಶಿಪ್ಪಿಂಗ್ ಮಸೂದೆಯು ಭಾರತದ ಜಾಗತಿಕ ವ್ಯಾಪಾರ ಸಾಮರ್ಥ್ಯಗಳನ್ನು ಹೆಚ್ಚಿಸುತ್ತದೆ. ಅಲ್ಲದೆ ಇದು ಭಾರತವನ್ನು ಹಳೆಯ ವಸಾಹತುಶಾಹಿ ಕಾನೂನುಗಳಿಂದ ಮುಕ್ತಗೊಳಿಸುವ, ಇಂಧನ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಮತ್ತು ನಾವೀನ್ಯತೆಯನ್ನು ಉತ್ತೇಜಿಸುವ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಚಳಿಗಾಲದ ಅಧಿವೇಶನದ ಮೊದಲ ವಾರದಲ್ಲಿ ಯಾವುದೇ ವ್ಯವಹಾರ ನಡೆದಿಲ್ಲವಾದರೂ, ಮುಂದಿನ ವಾರದಿಂದ ಪ್ರಾರಂಭವಾಗುವ ಸುಗಮ ಕಲಾಪಗಳ ಬಗ್ಗೆ ಸರ್ಕಾರಿ ಮೂಲಗಳು ಆಶಾವಾದಿಯಾಗಿರುವುದು ಸುಳ್ಳಲ್ಲ.

ಈ ಮಸೂದೆಗಳು ಶಾಸನಾತ್ಮಕ ಬದಲಾವಣೆಗಳಿಗಿಂತ ಹೆಚ್ಚು ಮಹತ್ವ ಹೊಂದಿದೆ. ಅವು ಒಂದು ರೀತಿಯ “ಭಾರತದ ಭವಿಷ್ಯದ ನೀಲನಕ್ಷೆ”. ವಸಾಹತುಶಾಹಿ ಪರಂಪರೆಯನ್ನು ಅಳಿಸಿಹಾಕುವುದು, ಆರ್ಥಿಕ ಬೆಳವಣಿಗೆಗೆ ನಿರ್ಣಾಯಕ ಕ್ಷೇತ್ರಗಳನ್ನು ಸಬಲೀಕರಣಗೊಳಿಸುವುದು, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು ಇದರ ಗುರಿಯಾಗಿದೆ. ರೈಲ್ವೆ (ತಿದ್ದುಪಡಿ) ಮಸೂದೆ- 2024 ಕಾನೂನು ರಚನೆಗಳನ್ನು ಸರಳೀಕರಿಸುವ ಮೂಲಕ, ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಈ ವಲಯದಲ್ಲಿ ಗಮನಾರ್ಹ ಪರಿವರ್ತನೆಯನ್ನು ತರುವ ನಿರೀಕ್ಷೆಯಿದೆ, ಇದು ಉದ್ಯೋಗಾವಕಾಶಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ದೇಶದಲ್ಲಿ ಉದ್ಯೋಗಿಗಳ ಸಂಖ್ಯೆ ಭಾರಿ ಏರಿಕೆ : ಸೆಪ್ಟೆಂಬರ್’ನಲ್ಲಿ 1.88 ಮಿಲಿಯನ್ ನಷ್ಟು ಉದ್ಯೋಗ ಸೃಷ್ಟಿ

ಇನ್ನು ಕರಾವಳಿ ಹಡಗು ಮಸೂದೆ- 2024, ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡುವ ಮೂಲಕ, ಭಾರತೀಯ ರಫ್ತುಗಳನ್ನು ಹೆಚ್ಚು ಮಾಡಿ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ವಿಪತ್ತು ನಿರ್ವಹಣಾ (ತಿದ್ದುಪಡಿ) ಮಸೂದೆಯು ನಗರ ವಿಪತ್ತು ನಿರ್ವಹಣಾ ಪ್ರಾಧಿಕಾರಗಳನ್ನು ಪರಿಚಯಿಸುತ್ತದೆ, ಸ್ಥಳೀಯ ವ್ಯವಸ್ಥೆಗಳ ಮೇಲೆ ಕೇಂದ್ರೀಕರಿಸುತ್ತದೆ, ಆ ಮೂಲಕ ಸುರಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಅಪಾಯ ಮೇಲ್ವಿಚಾರಣೆ ಮತ್ತು ತುರ್ತು ಸೇವೆಗಳಲ್ಲಿ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಭಾರತೀಯ ವಾಯುಯಾನ್ ವಿಧೇಯಕ್ (ವಿಮಾನ ಮಸೂದೆ) ಭಾರತವನ್ನು ಏರೋಸ್ಪೇಸ್ ಹಬ್ ಆಗಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!