AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament winter session: ಉದ್ಯೋಗ ಸೃಷ್ಟಿಗೆ ಹಲವು ಮಸೂದೆಗಳನ್ನು ಮಂಡಿಸಿದ ಕೇಂದ್ರ ಸರ್ಕಾರ

ಚಳಿಗಾಲದ ಅಧಿವೇಶನದಲ್ಲಿ ಆರ್ಥಿಕ ಬೆಳವಣಿಗೆ, ಆಧುನೀಕರಣ, ಉದ್ಯೋಗ ಸೃಷ್ಟಿಸಲು ಸರ್ಕಾರವು ಪರಿವರ್ತಕ ಮಸೂದೆಗಳ ಪ್ರಸ್ತಾಪಿಸಿದೆ. ಸರ್ಕಾರಿ ಮೂಲಗಳ ಪ್ರಕಾರ, ಇವುಗಳಲ್ಲಿ ತೈಲ ಕ್ಷೇತ್ರ, ಹಡಗು, ರೈಲ್ವೆ, ವಾಯುಯಾನ ಮತ್ತು ವಿಪತ್ತು ನಿರ್ವಹಣೆ ಒಳಗೊಂಡಿವೆ. ಇದು ಕೇವಲ ನವೀಕರಣಗಳಲ್ಲ; ಭಾರತವನ್ನು ಜಾಗತಿಕ ಮಾನದಂಡಗಳೊಂದಿಗೆ ಜೋಡಿಸಲು ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ.

Parliament winter session: ಉದ್ಯೋಗ ಸೃಷ್ಟಿಗೆ ಹಲವು ಮಸೂದೆಗಳನ್ನು ಮಂಡಿಸಿದ ಕೇಂದ್ರ ಸರ್ಕಾರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Nov 30, 2024 | 7:42 PM

Share

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆರ್ಥಿಕ ಬೆಳವಣಿಗೆ, ಆಧುನೀಕರಣ, ಉದ್ಯೋಗ ಸೃಷ್ಟಿಸಲು ಸರ್ಕಾರವು ಪರಿವರ್ತಕ ಮಸೂದೆಗಳ ಪ್ರಸ್ತಾಪಿಸಿದೆ. ಸರ್ಕಾರಿ ಮೂಲಗಳ ಪ್ರಕಾರ, ಇವುಗಳಲ್ಲಿ ತೈಲ ಕ್ಷೇತ್ರ, ಹಡಗು, ರೈಲ್ವೆ, ವಾಯುಯಾನ ಮತ್ತು ವಿಪತ್ತು ನಿರ್ವಹಣೆ ಒಳಗೊಂಡಿವೆ. ಇದು ಕೇವಲ ನವೀಕರಣಗಳಲ್ಲ; ಭಾರತವನ್ನು ಜಾಗತಿಕ ಮಾನದಂಡಗಳೊಂದಿಗೆ ಜೋಡಿಸಲು ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ.

ರಾಜ್ಯಸಭೆಯಲ್ಲಿ, ತೈಲ ಕ್ಷೇತ್ರಗಳ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆ 2024 , ಅನ್ನು ಆಧುನೀಕರಿಸುವ ಮೂಲಕ ಗಮನಾರ್ಹ ಬದಲಾವಣೆಗೆ ಒತ್ತು ನೀಡಿದೆ. ಅಂತೆಯೇ, ವ್ಯಾಪಾರಿ ಹಡಗು ಮಸೂದೆ, 2024, ಲಾಡಿಂಗ್ ಮಸೂದೆ 2024 ನೊಂದಿಗೆ ಕಡಲ ಕಾನೂನುಗಳನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾಗಿದೆ, ಅವುಗಳನ್ನು ಹೆಚ್ಚು ಪರಿಣಾಮಕಾರಿ ಮತ್ತು ಅಂತರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಮಾಡಲಾಗಿದೆ. ಮರ್ಚೆಂಟ್ ಶಿಪ್ಪಿಂಗ್ ಮಸೂದೆಯು ಭಾರತದ ಜಾಗತಿಕ ವ್ಯಾಪಾರ ಸಾಮರ್ಥ್ಯಗಳನ್ನು ಹೆಚ್ಚಿಸುತ್ತದೆ. ಅಲ್ಲದೆ ಇದು ಭಾರತವನ್ನು ಹಳೆಯ ವಸಾಹತುಶಾಹಿ ಕಾನೂನುಗಳಿಂದ ಮುಕ್ತಗೊಳಿಸುವ, ಇಂಧನ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಮತ್ತು ನಾವೀನ್ಯತೆಯನ್ನು ಉತ್ತೇಜಿಸುವ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಚಳಿಗಾಲದ ಅಧಿವೇಶನದ ಮೊದಲ ವಾರದಲ್ಲಿ ಯಾವುದೇ ವ್ಯವಹಾರ ನಡೆದಿಲ್ಲವಾದರೂ, ಮುಂದಿನ ವಾರದಿಂದ ಪ್ರಾರಂಭವಾಗುವ ಸುಗಮ ಕಲಾಪಗಳ ಬಗ್ಗೆ ಸರ್ಕಾರಿ ಮೂಲಗಳು ಆಶಾವಾದಿಯಾಗಿರುವುದು ಸುಳ್ಳಲ್ಲ.

ಈ ಮಸೂದೆಗಳು ಶಾಸನಾತ್ಮಕ ಬದಲಾವಣೆಗಳಿಗಿಂತ ಹೆಚ್ಚು ಮಹತ್ವ ಹೊಂದಿದೆ. ಅವು ಒಂದು ರೀತಿಯ “ಭಾರತದ ಭವಿಷ್ಯದ ನೀಲನಕ್ಷೆ”. ವಸಾಹತುಶಾಹಿ ಪರಂಪರೆಯನ್ನು ಅಳಿಸಿಹಾಕುವುದು, ಆರ್ಥಿಕ ಬೆಳವಣಿಗೆಗೆ ನಿರ್ಣಾಯಕ ಕ್ಷೇತ್ರಗಳನ್ನು ಸಬಲೀಕರಣಗೊಳಿಸುವುದು, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು ಇದರ ಗುರಿಯಾಗಿದೆ. ರೈಲ್ವೆ (ತಿದ್ದುಪಡಿ) ಮಸೂದೆ- 2024 ಕಾನೂನು ರಚನೆಗಳನ್ನು ಸರಳೀಕರಿಸುವ ಮೂಲಕ, ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಈ ವಲಯದಲ್ಲಿ ಗಮನಾರ್ಹ ಪರಿವರ್ತನೆಯನ್ನು ತರುವ ನಿರೀಕ್ಷೆಯಿದೆ, ಇದು ಉದ್ಯೋಗಾವಕಾಶಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ದೇಶದಲ್ಲಿ ಉದ್ಯೋಗಿಗಳ ಸಂಖ್ಯೆ ಭಾರಿ ಏರಿಕೆ : ಸೆಪ್ಟೆಂಬರ್’ನಲ್ಲಿ 1.88 ಮಿಲಿಯನ್ ನಷ್ಟು ಉದ್ಯೋಗ ಸೃಷ್ಟಿ

ಇನ್ನು ಕರಾವಳಿ ಹಡಗು ಮಸೂದೆ- 2024, ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡುವ ಮೂಲಕ, ಭಾರತೀಯ ರಫ್ತುಗಳನ್ನು ಹೆಚ್ಚು ಮಾಡಿ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ವಿಪತ್ತು ನಿರ್ವಹಣಾ (ತಿದ್ದುಪಡಿ) ಮಸೂದೆಯು ನಗರ ವಿಪತ್ತು ನಿರ್ವಹಣಾ ಪ್ರಾಧಿಕಾರಗಳನ್ನು ಪರಿಚಯಿಸುತ್ತದೆ, ಸ್ಥಳೀಯ ವ್ಯವಸ್ಥೆಗಳ ಮೇಲೆ ಕೇಂದ್ರೀಕರಿಸುತ್ತದೆ, ಆ ಮೂಲಕ ಸುರಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಅಪಾಯ ಮೇಲ್ವಿಚಾರಣೆ ಮತ್ತು ತುರ್ತು ಸೇವೆಗಳಲ್ಲಿ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಭಾರತೀಯ ವಾಯುಯಾನ್ ವಿಧೇಯಕ್ (ವಿಮಾನ ಮಸೂದೆ) ಭಾರತವನ್ನು ಏರೋಸ್ಪೇಸ್ ಹಬ್ ಆಗಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!