AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಐಐಟಿ ಕಾರ್ಖಾನೆ’ ಎಂದೇ ಪ್ರಸಿದ್ಧಿಯಾಗಿರುವ ಭಾರತದ ಈ ಪುಟ್ಟ ಹಳ್ಳಿ; ಕಾರಣವೇನು ಗೊತ್ತಾ?

ಬಿಹಾರದ ಗಯಾ ಜಿಲ್ಲೆಯ ಪಟ್ವಾ ಟೋಲಿ ಗ್ರಾಮದಲ್ಲಿ ಪ್ರತೀ ವರ್ಷ ನೂರಾರು ಎಂಜಿನಿಯರ್‌ಗಳು ಹೊರಬರುವುದರಿಂದ "ಐಐಟಿ ಕಾರ್ಖಾನೆ" ಎಂದು ಪ್ರಸಿದ್ಧವಾಗಿದೆ. ಪ್ರತಿ ವರ್ಷ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಈ ಗ್ರಾಮದ ಅನೇಕ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ವೃಕ್ಷ ಎಂಬ ಸಂಸ್ಥೆಯ ಸಹಾಯದಿಂದ ಈ ಗ್ರಾಮದ ಶಿಕ್ಷಣ ವ್ಯವಸ್ಥೆ ಸುಧಾರಿಸಿದೆ. 1991ರಿಂದಲೂ ಈ ಸಾಧನೆ ಮುಂದುವರಿದಿದೆ.

'ಐಐಟಿ ಕಾರ್ಖಾನೆ' ಎಂದೇ ಪ್ರಸಿದ್ಧಿಯಾಗಿರುವ ಭಾರತದ ಈ ಪುಟ್ಟ ಹಳ್ಳಿ; ಕಾರಣವೇನು ಗೊತ್ತಾ?
Patwa Toli
Follow us
ಅಕ್ಷತಾ ವರ್ಕಾಡಿ
|

Updated on:Apr 22, 2025 | 2:44 PM

ಬಿಹಾರದ ಒಂದು ಹಳ್ಳಿಯು ‘ಐಐಟಿ ಕಾರ್ಖಾನೆ’ ಎಂಬ ಹೆಸರಿನಿಂದ ಪ್ರಸಿದ್ಧವಾಗಿದೆ. ಏಕೆಂದರೆ ಇಲ್ಲಿಯವರೆಗೆ, ಈ ಹಳ್ಳಿಯಿಂದ ನೂರಾರು ಎಂಜಿನಿಯರ್‌ಗಳು ಹೊರಬಂದಿದ್ದಾರೆ. ಪ್ರತಿ ವರ್ಷ ಇಲ್ಲಿ ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಸಂದರ್ಭದಲ್ಲಿ ಈ ಹಳ್ಳಿಯ ಸಾವಿರಾರು ಮಕ್ಕಳು ಉತ್ತೀರ್ಣರಾಗುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈ ವರ್ಷ ಈ ಹಳ್ಳಿಯ 40 ಮಕ್ಕಳು ಜೆಇಇ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅಷ್ಟಕ್ಕೂ ಈ ಗ್ರಾಮದ ಹೆಸರು ‘ಪಟ್ವಾ ಟೋಲಿ’.

ಬಿಹಾರದ ಗಯಾ ಜಿಲ್ಲೆಯಲ್ಲಿ ಪಟ್ವಾ ಟೋಲಿ ಎಂದು ಕರೆಯಲ್ಪಡುವ ನೇಕಾರರ ವಸಾಹತು ಇದೆ. 1991 ರಿಂದ ಈ ಪ್ರದೇಶದಿಂದ ನೂರಾರು ಎಂಜಿನಿಯರ್‌ಗಳು ಹೊರಹೊಮ್ಮಿದ್ದಾರೆ. ಹೌದು, ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶಗಳನ್ನು ಏಪ್ರಿಲ್ 19 ರಂದು ಘೋಷಿಸಲಾಗಿದೆ. ಜೆಇಇ ಮೇನ್ಸ್‌ನಲ್ಲಿ ಅರ್ಹತೆ ಪಡೆದ ಮಕ್ಕಳನ್ನು ಗ್ರಾಮದ ಜನರು ಒಟ್ಟುಗೂಡಿಸಿ ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದರು. ಈ ಗ್ರಾಮ ಕಳೆದ 25 ವರ್ಷಗಳಲ್ಲಿ ದೇಶಕ್ಕೆ ಅನೇಕ ಐಐಟಿ ತಜ್ಞರನ್ನು ನೀಡಿದೆ.

ಎಲ್ಲಿಂದ ಆರಂಭವಾಯಿತು?

1991 ರಲ್ಲಿ ಐಐಟಿ ಪಾಸ್ ಮಾಡಿದ ಪಟ್ವಾ ಗ್ಯಾಂಗ್‌ನಲ್ಲಿ ಜಿತೇಂದ್ರ ಪಟ್ವಾ ಮೊದಲಿಗರು. ಅವರು ಐಐಟಿಯಲ್ಲಿ ಪ್ರವೇಶ ಪಡೆದ ಹಳ್ಳಿಯ ಮೊದಲ ವಿದ್ಯಾರ್ಥಿಯಾದರು. ಅವರ ಈ ಸಾಧನೆಯ ನಂತರ, ಇಡೀ ಪ್ರದೇಶದ ಜನರು ಅವರಿಂದ ಪ್ರೇರಿತರಾದರು ಮತ್ತು ಕ್ರಮೇಣ ಇಡೀ ಗ್ರಾಮದಲ್ಲಿ ಎಂಜಿನಿಯರಿಂಗ್ ವಾತಾವರಣ ಸೃಷ್ಟಿಯಾಯಿತು. ಈಗ ಈ ಹಳ್ಳಿಯ ಹೆಚ್ಚಿನ ಮಕ್ಕಳ ಕನಸು ಯಶಸ್ವಿ ಎಂಜಿನಿಯರ್ ಆಗುವುದು. ಪ್ರತಿ ವರ್ಷ ಈ ಗ್ರಾಮದ ಅನೇಕ ವಿದ್ಯಾರ್ಥಿಗಳು ಜೆಇಇ ಉತ್ತೀರ್ಣರಾಗುತ್ತಾರೆ. ಈ ಹಳ್ಳಿಯಲ್ಲಿ ಬಹುತೇಕ ಪ್ರತಿಯೊಂದು ಮನೆಯಲ್ಲೂ ಒಬ್ಬ ಎಂಜಿನಿಯರ್ ಇರುತ್ತಾನೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ದಿನಗೂಲಿ ಮಾಡುತ್ತಿದ್ದ ವ್ಯಕ್ತಿ ಇಂದು ನ್ಯಾಯಾಧೀಶ; ಮೊದಲ ಪ್ರಯತ್ನದಲ್ಲೇ 26 ನೇ ರ‍್ಯಾಂಕ್

‘ವೃಕ್ಷ’ ಎಂಬ ಸರ್ಕಾರೇತರ ಸಂಸ್ಥೆ ಈ ಗ್ರಾಮದಲ್ಲಿ ಶಿಕ್ಷಣದ ಚಿತ್ರಣವನ್ನು ಬದಲಾಯಿಸುವಲ್ಲಿ ದೊಡ್ಡ ಪಾತ್ರ ವಹಿಸಿದೆ. 2013 ರಲ್ಲಿ, ಈ ಸಂಸ್ಥೆಯು ಈ ಪ್ರದೇಶದ ಮಕ್ಕಳನ್ನು ಐಐಟಿಗೆ ಉಚಿತವಾಗಿ ಸಿದ್ಧಪಡಿಸುವ ಕೆಲಸವನ್ನು ಪ್ರಾರಂಭಿಸಿತು. ಇದರಿಂದಾಗಿ, ದುಬಾರಿ ಶುಲ್ಕವನ್ನು ಭರಿಸಲಾಗದ ಈ ಪ್ರದೇಶದ ವಿದ್ಯಾರ್ಥಿಗಳು ಸುಲಭವಾಗಿ ತಮ್ಮ ಕನಸನ್ನು ನನಸು ಮಾಡಲು ಶುರು ಮಾಡಿದರು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Tue, 22 April 25

ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ