Sign In

By signing in or creating an account, you agree with Associated Broadcasting Company's Terms & Conditions and Privacy Policy.

Railway Recruitment 2023: ರೈಲ್ವೆ ನೇಮಕಾತಿ: ಮಾಸಿಕ ವೇತನ 56 ಸಾವಿರ ರೂ.

Railway Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜುಲೈ 26, 2023 ರಂತೆ 15 ವರ್ಷ ಮತ್ತು 24 ವರ್ಷಗಳ ನಡುವೆ ಇರಬೇಕು.

Railway Recruitment 2023: ರೈಲ್ವೆ ನೇಮಕಾತಿ: ಮಾಸಿಕ ವೇತನ 56 ಸಾವಿರ ರೂ.
Railway Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 27, 2023 | 2:17 PM

Railway Recruitment 2023: ಭಾರತೀಯ ರೈಲ್ವೆ ಇಲಾಖೆಯ ಪಶ್ಚಿಮ ರೈಲ್ವೆ ವಿಭಾಗದಲ್ಲಿನ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3,624 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಶ್ಚಿಮ ರೈಲ್ವೆಯ ಅಧಿಕೃತ ವೆಬ್​ಸೈಟ್ rrc-wr.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ: 3,624 ಹುದ್ದೆಗಳು
  • UR (ಜನರಲ್) ಅಭ್ಯರ್ಥಿಗಳಿಗೆ: 1,487 ಹುದ್ದೆಗಳು
  • SC ಅಭ್ಯರ್ಥಿಗಳಿಗೆ: 532 ಹುದ್ದೆಗಳು
  • ST ಅಭ್ಯರ್ಥಿಗಳಿಗೆ: 266 ಹುದ್ದೆಗಳು
  • OBC ಅಭ್ಯರ್ಥಿಗಳಿಗೆ: 981 ಹುದ್ದೆಗಳು
  • EWS ಅಭ್ಯರ್ಥಿಗಳಿಗೆ: 358 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 12ನೇ ತರಗತಿ ಪಾಸ್ ಆಗಿರಬೇಕು. ಇದಲ್ಲದೆ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಹಾಗೆಯೇ ITI ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜುಲೈ 26, 2023 ರಂತೆ 15 ವರ್ಷ ಮತ್ತು 24 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ:

  • SC/ST/PWD/ಮಹಿಳಾ ಅರ್ಜಿದಾರರಿಗೆ: ಶುಲ್ಕವಿಲ್ಲ
  • ಇತರೆ ಎಲ್ಲಾ ಅರ್ಜಿದಾರರಿಗೆ: ರೂ. 100

ಆಯ್ಕೆ ಪ್ರಕ್ರಿಯೆ:

ಅಪ್ರೆಂಟಿಸ್ ಆಕ್ಟ್, 1961 ರ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಅರ್ಜಿದಾರರ ಮೆಟ್ರಿಕ್ಯುಲೇಶನ್​ನಲ್ಲಿ ಶೇಕಡಾವಾರು ಅಂಕಗಳ ಸರಾಸರಿಯನ್ನು ತೆಗೆದುಕೊಳ್ಳುತ್ತದೆ. ಹಾಗೆಯೇ ಐಟಿಐ ಪ್ರಮಾಣಪತ್ರವನ್ನು ಕೂಡ ಗಣನೆಗೆ ತೆಗೆದುಕೊಳ್ಳಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನವಾಗಿ ರೂ. 18,000 ರಿಂದ ರೂ. 56,900 ರವರೆಗೆ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 26/07/2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು