AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jobs: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿನ 130 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಾರ್ಮಿಕ ಸಚಿವಾಲಯ ಮತ್ತು ಉದ್ಯೋಗ ಸಚಿವಾಲಯದಲ್ಲಿ ಖಾಲಿ ಇರುವ 130 ಖಾಲಿ ಇರುವ ಸಂಶೋಧನಾ ಆಧಾರಿತ ಹುದ್ದೆಗಳ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂ.22ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

Jobs: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿನ 130 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕಾರ್ಮಿಕ ಮತ್ತ ಉದ್ಯೋಗ ಸಚಿವಾಲಯ
TV9 Web
| Updated By: Rakesh Nayak Manchi|

Updated on:Jun 12, 2022 | 9:45 AM

Share

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ (Ministry of Labour and Employment)ದಲ್ಲಿ ಖಾಲಿ ಇರುವ 100ಕ್ಕೂ ಹೆಚ್ಚು ಖಾಲಿ ಇರುವ ಸಂಶೋಧನಾ ಆಧಾರಿತ ಹುದ್ದೆಗಳ ನೇಮಕಾತಿಗೆ (Recruitment) ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯುವ ವೃತ್ತಿಪರರ 130 ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 22 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಯು www.ncs.gov.in ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. Google ಫಾರ್ಮ್ ಲಿಂಕ್ (https://forms.gle/4f3NvwsF3Bswp7ty5) ಅನ್ನು ಭರ್ತಿ ಮಾಡುವುದು ಕಡ್ಡಾಯವಾಗಿದೆ. ಇದನ್ನೂ ಓದಿ: UPSC Recruitment 2022: ಒಟ್ಟು 24 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲಾಖೆ: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು

ಹುದ್ದೆಯ ಹೆಸರು: ಯುವ ವೃತ್ತಿಪರ

ಹುದ್ದೆಗಳ ಸಂಖ್ಯೆ: 130

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಕನಿಷ್ಠ 4 ವರ್ಷಗಳ ಅನುಭವ ಅಥವಾ ಸ್ನಾತಕೋತ್ತರ ಪದವಿ (ಎಂಬಿಎ/ ಅರ್ಥಶಾಸ್ತ್ರ/ ಮನೋವಿಜ್ಞಾನ/ ಸಮಾಜಶಾಸ್ತ್ರ/ ಕಾರ್ಯಾಚರಣೆಗಳಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಸ್ನಾತಕೋತ್ತರ ಪದವಿ (B.A/B.E/ B.Tech/B.Ed) ಹೊಂದಿರಬೇಕು. ಸಂಶೋಧನೆ/ ಅಂಕಿಅಂಶಗಳು/ ಸಮಾಜ ಕಾರ್ಯ/ ನಿರ್ವಹಣೆ/ ಹಣಕಾಸು/ ವಾಣಿಜ್ಯ/ ಕಂಪ್ಯೂಟರ್ ಅಪ್ಲಿಕೇಶನ್‌ಗಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲೆ ತಿಳಿಸಿದ ಎಲ್ಲಾ ಪದವಿಗಳು ಯುಜಿಸಿ, ಎಐಸಿಟಿಇ ಇತ್ಯಾದಿ ಮಾನ್ಯತೆ ಪಡೆದಿರಬೇಕು. ಅಭ್ಯರ್ಥಿಯು ಎಸ್​ಎಸ್​ಎಲ್​ಸಿ, ಪಿಯುಸಿ ಮತ್ತು ಪದವಿಯಲ್ಲಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ಪಡೆದಿರಬೇಕು.

ಇದನ್ನೂ ಓದಿ: Assam Rifles Recruitment 2022: 10ನೇ ಮತ್ತು ಪಿಯುಸಿ ಪಾಸಾದವರಿಂದ ಅರ್ಜಿ ಆಹ್ವಾನ

ಇತರೆ ಅರ್ಹತೆಗಳು:

ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿದ ಅಭ್ಯರ್ಥಿಯು ಕನಿಷ್ಟ 1 ಇತರ ಭಾಷೆಗಳಲ್ಲಿ (ಹಿಂದಿ/ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಓದುವುದು, ಬರೆಯುವುದು ಮತ್ತು ಮಾತನಾಡುವುದು) ಪ್ರಾವೀಣ್ಯತೆ ಹೊಂದಿರಬೇಕು. ಎಚ್‌ಆರ್, ಮ್ಯಾನೇಜ್‌ಮೆಂಟ್, ಅನಾಲಿಟಿಕ್ಸ್ ಮತ್ತು ಸೈಕಾಲಜಿ ಇತ್ಯಾದಿ ಕ್ಷೇತ್ರಗಳಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಸಂವಹನ, ಪರಸ್ಪರ ಮತ್ತು ಸಾಂಸ್ಥಿಕ ಕೌಶಲ್ಯಗಳನ್ನು ಹೊಂದಿರಬೇಕು.

ಕೌಶಲ್ಯಗಳು:

ಅಭ್ಯರ್ಥಿಯು ಕೆಲಸಗಳನ್ನು ಮಾಡಲು ಉಪಕ್ರಮವನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿರಬೇಕು. ಸರ್ಕಾರಿ ವ್ಯವಸ್ಥೆಯ ಸವಾಲಿನ ವಾತಾವರಣದ ಮೂಲಕ ಕೆಲಸ ಮಾಡಲು ಮತ್ತು ನ್ಯಾವಿಗೇಟ್ ಮಾಡಲು ಕೌಶಲ್ಯದಿಂದ ಅಥವಾ ಚಾತುರ್ಯದಿಂದ ಇರಬೇಕು. ಇತರರಿಗೆ ಸಹಾಯ ಮಾಡುವ ಉತ್ಸಾಹವು ಹೊಂದಿರಬೇಕು. ಉದ್ಯೋಗಾಕಾಂಕ್ಷಿಗಳಲ್ಲಿ ಆತ್ಮವಿಶ್ವಾಸವನ್ನು ಪ್ರೇರೇಪಿಸುವ ಸಾಮರ್ಥ್ಯ ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ಅಗತ್ಯತೆಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ಸಾಮರ್ಥ್ಯ ಹೊಂದಿರಬೇಕು. ಪ್ರಮಾಣಿತ ಅಭ್ಯಾಸಗಳು ಅಥವಾ ವಿಧಾನಗಳನ್ನು ಬಳಸಿಕೊಂಡು ಸೀಮಿತ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡಲು ಸಾಮರ್ಥ್ಯ ಇರಬೇಕು.

ಇದನ್ನೂ ಓದಿ: BSF Recruitment 2022: ಗಡಿ ಭದ್ರತಾ ಪಡೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 1 ಲಕ್ಷ ರೂ.

ವಯೋಮಿತಿ ಮತ್ತು ಇತರೆ:

ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕದಂದು ಅಭ್ಯರ್ಥಿಯು 24 ರಿಂದ 40 ವರ್ಷಗಳ ನಡುವಿನ ವಯಸ್ಸಿನವರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳನ್ನು ದೇಶದೊಳಗೆ ಎಲ್ಲಿ ಬೇಕಾದರೂ ಕೆಲಸ ಮಾಡಬೇಕಾಗುತ್ತದೆ. NICS, DGE ಅಭ್ಯರ್ಥಿಯು ಸೂಚಿಸಿದ ಸ್ಥಳ ಪ್ರಾಶಸ್ತ್ಯವನ್ನು ಗಣನೆಗೆ ತೆಗೆದುಕೊಳ್ಳುತ್ತದೆ. ಆದಾಗ್ಯೂ ಸ್ಥಳ ಹಂಚಿಕೆಗೆ ಸಂಬಂಧಿಸಿದ ಅಂತಿಮ ನಿರ್ಧಾರವು NICS, DGE ಯೊಂದಿಗೆ ಇರುತ್ತದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:45 am, Sun, 12 June 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ