AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rozgar Mela: ದೀಪಾವಳಿಗೆ ಮೋದಿ ಸರ್ಕಾರದ ಗಿಫ್ಟ್ – ರಾಜ್ಯದಲ್ಲಿ ಯುವಕರಿಗೆ ಉದ್ಯೋಗದ ನೇಮಕಾತಿ ಪತ್ರ ವಿತರಿಸಿದ ಪ್ರಲ್ಹಾದ್ ಜೋಶಿ

Pralhad Joshi: ದೇಶಾದ್ಯಂತ 75 ಸಾವಿರ ಯುವಕರಿಗೆ ಉದ್ಯೋಗದ ನೇಮಕಾತಿ ಪತ್ರ ನೀಡುವ ಈ ಮಹತ್ವದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಬೆಂಗಳೂರಿನಿಂದ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಚಿವರಾದ ಅಶ್ವತ್ಥ್ ನಾರಾಯಣ್, ಸಂಸದ ಪಿ.ಸಿ ಮೋಹನ್, ಹಾಗೂ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

Rozgar Mela: ದೀಪಾವಳಿಗೆ ಮೋದಿ ಸರ್ಕಾರದ ಗಿಫ್ಟ್ - ರಾಜ್ಯದಲ್ಲಿ ಯುವಕರಿಗೆ ಉದ್ಯೋಗದ ನೇಮಕಾತಿ ಪತ್ರ ವಿತರಿಸಿದ ಪ್ರಲ್ಹಾದ್ ಜೋಶಿ
ರಾಜ್ಯದಲ್ಲಿ ಯುವಕರಿಗೆ ಉದ್ಯೋಗದ ನೇಮಕಾತಿ ಪತ್ರ ವಿತರಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: |

Updated on:Oct 22, 2022 | 7:04 PM

Share

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ದೇಶದ ಯುವಕರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಬಂಪರ್ ಕೊಡುಗೆ ನೀಡಿದ್ದಾರೆ. ವರ್ಚುವಲ್ ಮೂಲಕ ಇಂದು 75 ಸಾವಿರ ಯುವಕರಿಗೆ ಉದ್ಯೋಗದ ನೇಮಕಾತಿ ಪತ್ರ ವಿತರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನಲ್ಲೂ ಇಂದು ಶನಿವಾರ ರೋಜ್ ಗಾರ್ ಮೇಳ (Rozgar Mela) ನಡೆಯಿತು. ಸರ್ಕಾರದ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಯುವಕರಿಗೆ ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Rozgar Mela) ನೇಮಕಾತಿ ಪತ್ರವನ್ನು ವಿತರಿಸಿದರು.

ನೇಮಕಗೊಂಡ ಯುವಕರಿಗೆ ಶುಭ ಕೋರಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ನುಡಿದಂತೆ ನಡೆದಿಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. 10 ಲಕ್ಷ ಆಕಾಂಕ್ಷಿಗಳಿಗೆ ಉದ್ಯೋಗದ ಭರವಸೆಯನ್ನು ನೀಡಿರುವ ಪ್ರಧಾನಿ ಮೋದಿಯವರು, ಅದನ್ನು ಶೀಘ್ರದಲ್ಲಿಯೇ ನೆರವೇರಿಸಲಿದ್ದಾರೆ. ಇದರ ಮೊದಲ ಹಂತವಾಗಿ ಇಂದು 75,000 ಯುವಕರಿಗೆ ನೇಮಕಾತಿ ಪತ್ರವನ್ನು ಪ್ರಧಾನಿ ಮೋದಿ ಅವರು ಖುದ್ದಾಗಿ ವರ್ಚುವಲ್ ವೇದಿಕೆಯ ಮೂಲಕ ಹಸ್ತಾಂತರಿಸಿದ್ದಾರೆ ಎಂದರು.

ಕೊಟ್ಟ ಮಾತಿನಂತೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಹೊಸ ಉದ್ಯೋಗಗಳನ್ನು ಸೃಷ್ಟಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ಅಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ನೇಮಕಾತಿಗಳನ್ನು ಮಾಡುವತ್ತ ಮಹತ್ತರ ಹೆಜ್ಜೆಗಳನ್ನು ಇಟ್ಟಿದ್ದಾರೆ.‌ ಒಬ್ಬ ದೂರ ದೃಷ್ಟಿಯುಳ್ಳ ನಾಯಕ ದೇಶದ ಅಭಿವೃದ್ಧಿಗಾಗಿ ಯಾವ ರೀತಿ ಬದಲಾವಣೆಗಳನ್ನು ತರಬಹುದು ಎಂಬುದಕ್ಕೆ ಇದೇ ಉದಾಹರಣೆ ಎಂದು ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದರು.

ದೇಶಾದ್ಯಂತ 75 ಸಾವಿರ ಯುವಕರಿಗೆ ಉದ್ಯೋಗದ ನೇಮಕಾತಿ ಪತ್ರ ನೀಡುವ ಈ ಮಹತ್ವದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಬೆಂಗಳೂರಿನಿಂದ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಚಿವರಾದ ಅಶ್ವತ್ಥ್ ನಾರಾಯಣ್, ಸಂಸದ ಪಿ.ಸಿ ಮೋಹನ್, ಹಾಗೂ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

Published On - 4:37 pm, Sat, 22 October 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ