AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRB Recruitment: ಸರ್ಕಾರಿ ಕೆಲಸಕ್ಕೆ ಭಾರೀ ಪೈಪೋಟಿ! ರೈಲ್ವೆಯಲ್ಲಿ 32,438 ಹುದ್ದೆಗಳಿಗೆ 1.08 ಕೋಟಿ ಅರ್ಜಿ ಸಲ್ಲಿಕೆ

ರೈಲ್ವೆ ನೇಮಕಾತಿ ಮಂಡಳಿ (RRB) ಗ್ರೂಪ್ ಡಿ ಹುದ್ದೆಗಳ 32,438 ನೇಮಕಾತಿಗಳಿಗೆ 1.08 ಕೋಟಿಗೂ ಹೆಚ್ಚು ಅರ್ಜಿಗಳು ಬಂದಿವೆ. ಮುಂಬೈ ವಲಯದಿಂದ ಅತಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಈ ನೇಮಕಾತಿಯು ಟ್ರ್ಯಾಕ್ ಮೇಂಟೇನರ್, ಅಸಿಸ್ಟೆಂಟ್ ಪಾಯಿಂಟ್ಸ್‌ಮನ್, ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಒಳಗೊಂಡಿದೆ. ಭಾರೀ ಸ್ಪರ್ಧೆಯನ್ನು ಸೂಚಿಸುವ ಈ ಸಂಖ್ಯೆಗಳು ಯುವಕರಲ್ಲಿ ಸರ್ಕಾರಿ ಉದ್ಯೋಗಗಳ ಬೇಡಿಕೆಯನ್ನು ಎತ್ತಿ ತೋರಿಸುತ್ತವೆ.

RRB Recruitment: ಸರ್ಕಾರಿ ಕೆಲಸಕ್ಕೆ ಭಾರೀ ಪೈಪೋಟಿ! ರೈಲ್ವೆಯಲ್ಲಿ 32,438 ಹುದ್ದೆಗಳಿಗೆ 1.08 ಕೋಟಿ ಅರ್ಜಿ ಸಲ್ಲಿಕೆ
Rrb Group D Recruitment
ಅಕ್ಷತಾ ವರ್ಕಾಡಿ
|

Updated on: Apr 27, 2025 | 11:38 AM

Share

ರೈಲ್ವೆ ನೇಮಕಾತಿ ಮಂಡಳಿ (RRB) ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಒಟ್ಟು 32,438 ನೇಮಕಾತಿಗಳನ್ನು ಮಾಡಲಾಗುತ್ತಿದೆ. ಅಚ್ಚರಿಯ ವಿಷಯವೆಂದರೆ ದೇಶಾದ್ಯಂತ 1.08 ಕೋಟಿಗೂ ಹೆಚ್ಚು ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚಿನ ಅರ್ಜಿಗಳು ಮುಂಬೈ ವಲಯದಿಂದ ಬಂದಿವೆ. ಮುಂಬೈನಿಂದ ಒಟ್ಟು 15,59,100 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರೈಲ್ವೆಯ ವಿವಿಧ ಇಲಾಖೆಗಳಲ್ಲಿ ಲೆವೆಲ್-1 ಹುದ್ದೆಗಳಿಗೆ ಈ ನೇಮಕಾತಿ ಡ್ರೈವ್ ನಡೆಸಲಾಗುತ್ತಿದೆ. ಇದರಲ್ಲಿ ಟ್ರ್ಯಾಕ್ ಮೇಂಟೇನರ್ ಗ್ರೇಡ್-IV, ಅಸಿಸ್ಟೆಂಟ್ ಪಾಯಿಂಟ್ಸ್‌ಮನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳು ಸೇರಿವೆ. ಈ ಹುದ್ದೆಗಳು ವಿದ್ಯುತ್, ಯಾಂತ್ರಿಕ ಮತ್ತು ಸಿಗ್ನಲ್ ಮತ್ತು ದೂರಸಂಪರ್ಕ ವಿಭಾಗಗಳಲ್ಲಿವೆ.

ದೇಶಾದ್ಯಂತ 1.08 ಕೋಟಿ ಅರ್ಜಿಗಳು:

ರೈಲ್ವೆ ವಲಯದ ಪ್ರಕಾರ , ಚಂಡೀಗಢದಿಂದ 11.60 ಲಕ್ಷ, ಚೆನ್ನೈನಿಂದ 11.12 ಲಕ್ಷ, ಸಿಕಂದರಾಬಾದ್‌ನಿಂದ 9.60 ಲಕ್ಷ, ಪ್ರಯಾಗ್‌ರಾಜ್‌ನಿಂದ 8.61 ಲಕ್ಷ ಮತ್ತು ಕೋಲ್ಕತ್ತಾದಿಂದ 7.93 ಲಕ್ಷ ಅರ್ಜಿಗಳು ಬಂದಿವೆ. ಒಟ್ಟು 1,08,22,423 ಅರ್ಜಿಗಳು ಸಲ್ಲಿಕೆಯಾಗಿವೆ. ಇಷ್ಟೊಂದು ಅರ್ಜಿಗಳು ಬಂದ ನಂತರ, ಯುವಕರಲ್ಲಿ ಸರ್ಕಾರಿ ಉದ್ಯೋಗಗಳಿಗೆ ಬೇಡಿಕೆ ಹೆಚ್ಚುತ್ತಿರುವುದು ಸ್ಪಷ್ಟವಾಗಿವೆ.

ರಾಷ್ಟ್ರೀಯ ಅಂಕಿಅಂಶ ಕಚೇರಿಯ (NSO) ಇತ್ತೀಚಿನ ವರದಿಯ ಪ್ರಕಾರ, ಜುಲೈ-ಸೆಪ್ಟೆಂಬರ್ 2024 ರ ತ್ರೈಮಾಸಿಕದಲ್ಲಿ ನಗರ ನಿರುದ್ಯೋಗ ದರವು ಶೇ. 6.4 ಕ್ಕೆ ಇಳಿದಿದೆ, ಇದು ಸಕಾರಾತ್ಮಕ ಸಂಕೇತವಾಗಿದೆ. ಮತ್ತೊಂದೆಡೆ, ಭಾರತ ಉದ್ಯೋಗ ವರದಿ 2024 ಸಹ ಉದ್ಯೋಗದ ಗುಣಮಟ್ಟ ಮತ್ತು ಸ್ಥಿರತೆಯು ಇನ್ನೂ ಕಳವಳಕಾರಿ ವಿಷಯವಾಗಿದೆ. ವಿಶೇಷವಾಗಿ ಯುವಕರಿಗೆ ಉತ್ತಮ ಉದ್ಯೋಗಾವಕಾಶಗಳ ಕೊರತೆಯಿದೆ.

ಇದನ್ನೂ ಓದಿ: ಹೆರಿಗೆಯಾಗಿ 2 ವಾರವಾಗಿದೆಯಷ್ಟೇ, UPSC ಪರೀಕ್ಷೆ ಬರೆದು 45ನೇ ರ‍್ಯಾಂಕ್ ಪಡೆದ ಮಹಿಳೆ

ಸರ್ಕಾರ ಈಗ ಉದ್ಯೋಗ ಸಂಬಂಧಿತ ಡೇಟಾವನ್ನು ಹೆಚ್ಚು ಪಾರದರ್ಶಕಗೊಳಿಸುವತ್ತ ಕ್ರಮಗಳನ್ನು ತೆಗೆದುಕೊಂಡಿದೆ. ಮೇ 15 ರಿಂದ, ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ಪ್ರತಿ ತಿಂಗಳು ನಿರುದ್ಯೋಗ ಡೇಟಾವನ್ನು ಬಿಡುಗಡೆ ಮಾಡುತ್ತದೆ. ಇವುಗಳನ್ನು ಮೊದಲು ಪ್ರತಿ ತ್ರೈಮಾಸಿಕದಲ್ಲಿ ಬಿಡುಗಡೆ ಮಾಡಲಾಗುತ್ತಿತ್ತು. ಇದು ನೀತಿಗಳನ್ನು ರೂಪಿಸುವಲ್ಲಿ ಮತ್ತಷ್ಟು ಸಹಾಯ ಮಾಡುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ