AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2964 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಮೇ 9 ರಿಂದ ಮೇ 29 ರವರೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರು ಈ ನೇಮಕಾತಿಗೆ ಅರ್ಹರಾಗಿರುತ್ತಾರೆ. ವಯಸ್ಸು 21-30 ವರ್ಷಗಳಾಗಿರಬೇಕು. ಸಾಮಾನ್ಯ, OBC, ಮತ್ತು EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕವಿದೆ. ಆಯ್ಕೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ. sbi.co.in ನಲ್ಲಿ ಅರ್ಜಿ ಸಲ್ಲಿಸಿ.

SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ
Sbi Recruitment 2025
ಅಕ್ಷತಾ ವರ್ಕಾಡಿ
|

Updated on:May 09, 2025 | 5:19 PM

Share

ಪದವಿ ಮುಗಿದ ನಂತರ ಸರ್ಕಾರಿ ಉದ್ಯೋಗ ಅಥವಾ ಬ್ಯಾಂಕ್ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಗುಡ್​​ ನ್ಯೂಸ್​​ ಇಲ್ಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದು, ಮೇ 9 ರಿಂದ ಪ್ರಾರಂಭವಾಗಿದೆ. ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಮೇ 29 ರವರೆಗೆ ಅರ್ಜಿ ಸಲ್ಲಿಸಬಹುದು. ಒಟ್ಟು 2964 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನಿಗದಿಪಡಿಸಿದ ಕೊನೆಯ ದಿನಾಂಕದವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಎಸ್‌ಬಿಐ ಹೊರಡಿಸಿದ ಖಾಲಿ ಹುದ್ದೆಯ ಅಧಿಸೂಚನೆಯನ್ನು ಓದಿ.

SBI CBO ನೇಮಕಾತಿ ಅರ್ಹತಾ ಮಾನದಂಡಗಳು:

ಎಸ್‌ಬಿಐ ಸಿಬಿಒ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಸ್ಟ್ರೀಮ್‌ನಲ್ಲಿ ಪದವಿ ಪಡೆದಿರಬೇಕು. ವೈದ್ಯಕೀಯ, ಎಂಜಿನಿಯರಿಂಗ್, ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್ ಮುಂತಾದ ಪದವಿಗಳನ್ನು ಹೊಂದಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ವಯಸ್ಸು 21 ರಿಂದ 30 ವರ್ಷಗಳ ನಡುವೆ ಇರಬೇಕು. ವಯಸ್ಸನ್ನು ಏಪ್ರಿಲ್ 30, 2025 ರಿಂದ ಲೆಕ್ಕಹಾಕಲಾಗುತ್ತದೆ.

ಇದನ್ನೂ ಓದಿ
Image
ಕೃಷಿ ಎಂಜಿನಿಯರಿಂಗ್‌ನಲ್ಲಿ ಹಲವು ಉದ್ಯೋಗವಕಾಶ; ತಿಂಗಳಿಗೆ ಲಕ್ಷ ಲಕ್ಷ ಸಂಬಳ!
Image
ಪಿಯುಸಿ ಪಾಸ್ ಆದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗಾವಕಾಶ
Image
ಇಸ್ರೋದಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ನೇಮಕಾತಿ
Image
ನಾಸಾದಲ್ಲಿಯೂ ಇಂಟರ್ನ್‌ಶಿಪ್ ಅವಕಾಶವಿದೆಯೇ?

ಅರ್ಜಿ ಶುಲ್ಕ ಎಷ್ಟು?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ ಎಸ್‌ಸಿ, ಎಸ್‌ಟಿ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

SBI CBO ನೇಮಕಾತಿ ಅರ್ಜಿ ಸಲ್ಲಿಸುವುದು ಹೇಗೆ?

  • ಬ್ಯಾಂಕಿನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಿರುವ ವೃತ್ತಿ ವಿಭಾಗಕ್ಕೆ ಹೋಗಿ.
  • SBI CBO ನೇಮಕಾತಿ 2025 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
  • ಫಾರ್ಮ್ ಅನ್ನು ಭರ್ತಿ ಮಾಡಿದ ಬಳಿಕ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಶುಲ್ಕವನ್ನು ಪಾವತಿಸಿ ಮತ್ತು ಸಲ್ಲಿಸಿ.

ಇದನ್ನೂ ಓದಿ: ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಭಾರತೀಯ ಸೇನೆ ಸೇರಲು ಇಲ್ಲಿದೆ ಸುವರ್ಣವಕಾಶ; ಅರ್ಜಿ ಸಲ್ಲಿಸುವುದು ಹೇಗೆ

ಆಯ್ಕೆ ಹೇಗೆ ಮಾಡಲಾಗುತ್ತದೆ?

ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿದಾರರ ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಇತ್ಯಾದಿಗಳ ಮೂಲಕ ಮಾಡಲಾಗುತ್ತದೆ. ಪರೀಕ್ಷೆಯನ್ನು CBT ಮೋಡ್‌ನಲ್ಲಿ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಇಂಗ್ಲಿಷ್ ಭಾಷೆ, ಬ್ಯಾಂಕಿಂಗ್ ಜ್ಞಾನ, ಸಾಮಾನ್ಯ ಅರಿವು ಮತ್ತು ಕಂಪ್ಯೂಟರ್ ಯೋಗ್ಯತೆಯಂತಹ ವಿಷಯಗಳಿಂದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಹೊರಡಿಸಿದ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Fri, 9 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ