AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SECR Recruitment 2025: ರೈಲ್ವೆಯಲ್ಲಿ 1000 ಕ್ಕೂ ಹೆಚ್ಚು ಹುದ್ದೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ

ಆಗ್ನೇಯ ಮಧ್ಯ ರೈಲ್ವೆ (SECR) 1007 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಏಪ್ರಿಲ್ 5 ರಿಂದ ಮೇ 4 ರವರೆಗೆ ಅಧಿಕೃತ ವೆಬ್​​ಸೈಟ್​​ಗೆ ಭೇಟಿ ನೀಡುವ ಮೂಕಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕನಿಷ್ಠ ಶೇ. 50 ಅಂಕಗಳೊಂದಿಗೆ ಮೆಟ್ರಿಕ್ಯುಲೇಷನ್ ಮತ್ತು ಸಂಬಂಧಿತ ಐಟಿಐ ಅಗತ್ಯ. ವಯೋಮಿತಿ 15-24 ವರ್ಷಗಳು (ಮೀಸಲಾತಿ ವರ್ಗಗಳಿಗೆ ಸಡಿಲಿಕೆ ಇದೆ). ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

SECR Recruitment 2025: ರೈಲ್ವೆಯಲ್ಲಿ 1000 ಕ್ಕೂ ಹೆಚ್ಚು ಹುದ್ದೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ
Secr Recruitment 2025
ಅಕ್ಷತಾ ವರ್ಕಾಡಿ
|

Updated on: Apr 06, 2025 | 11:19 AM

Share

ಆಗ್ನೇಯ ಮಧ್ಯ ರೈಲ್ವೆ (SECR) ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿಯನ್ನು ಪ್ರಕಟಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು Apprentice India ಅಧಿಕೃತ ವೆಬ್‌ಸೈಟ್ apprenticeshipindia.gov.in ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಏಪ್ರಿಲ್ 5 ರಂದು ಪ್ರಾರಂಭವಾಗಿದ್ದು ಮೇ 4 ರವರೆಗೆ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ, ರೈಲ್ವೆಯಲ್ಲಿ ಒಟ್ಟು 1007 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ರೈಲ್ವೆ ಅಪ್ರೆಂಟಿಸ್ ನೇಮಕಾತಿ ಅರ್ಹತಾ ಮಾನದಂಡಗಳು:

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಠ ಶೇಕಡಾ 50 ಅಂಕಗಳೊಂದಿಗೆ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದಲ್ಲದೆ, ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯಸ್ಸಿನ ಮಿತಿ:

ಅಭ್ಯರ್ಥಿಗಳ ವಯಸ್ಸಿನ ಮಿತಿ 15 ರಿಂದ 24 ವರ್ಷಗಳ ನಡುವೆ ಇರಬೇಕು. ಆದಾಗ್ಯೂ, ಸರ್ಕಾರಿ ನಿಯಮಗಳ ಪ್ರಕಾರ, ಮೀಸಲಾತಿ ವರ್ಗದ (ಒಬಿಸಿ, ಎಸ್‌ಸಿ, ಎಸ್‌ಟಿ, ದಿವ್ಯಾಂಗ, ಮಾಜಿ ಸೈನಿಕರು) ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಇದನ್ನೂ ಓದಿ: ಕೃಷಿ ಎಂಜಿನಿಯರಿಂಗ್‌ನಲ್ಲಿ ಹಲವು ಉದ್ಯೋಗವಕಾಶ; ತಿಂಗಳಿಗೆ ಲಕ್ಷ ಲಕ್ಷ ಸಂಬಳ!

ರೈಲ್ವೆ ಅಪ್ರೆಂಟಿಸ್ ನೇಮಕಾತಿ ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯು ಮೆರಿಟ್ ಪಟ್ಟಿಯನ್ನು ಆಧರಿಸಿರುತ್ತದೆ. ಅಪ್ರೆಂಟಿಸ್‌ಶಿಪ್ ಮಾಡಬೇಕಾದ ಟ್ರೇಡ್‌ನಲ್ಲಿ ಮೆಟ್ರಿಕ್ಯುಲೇಷನ್ ಮತ್ತು ಐಟಿಐ ಅಂಕಗಳ ಶೇಕಡಾವಾರು ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಇದಲ್ಲದೆ, ಅಭ್ಯರ್ಥಿಗಳ ದಾಖಲೆ ಪರಿಶೀಲನೆಯೂ ನಡೆಯಲಿದ್ದು, ಇದರಲ್ಲಿ ವೈದ್ಯಕೀಯ ಫಿಟ್‌ನೆಸ್ ಪ್ರಮಾಣಪತ್ರವನ್ನು ಸಹ ಕೇಳಲಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ