Sign In

By signing in or creating an account, you agree with Associated Broadcasting Company's Terms & Conditions and Privacy Policy.

South Western Railway Recruitment 2024 : ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವವರಿಗೆ ಇದೀಗ ಸಿಹಿ ಸುದ್ದಿ ಯೊಂದು ಹೊರಬಿದ್ದಿದೆ. ಹುಬ್ಬಳ್ಳಿಯ ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಫ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದಕ್ಕೆ ಸಂಬಂಧಪಟ್ಟಂತೆ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಸೇರಿದಂತೆ ಇನ್ನಿತ್ತರ ಮಾಹಿತಿಗಳು ಇಲ್ಲಿದೆ.

South Western Railway Recruitment 2024 : ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 28, 2024 | 2:34 PM

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪಾಸಾದವರು ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದರೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶಗಳು ಖಾಲಿಯಿದೆ. ಈಗಾಗಲೇ ಹುಬ್ಬಳ್ಳಿಯ ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಫ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿಕೊಂಡು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

* ಇಲಾಖೆ ಹೆಸರು : ನೈಋತ್ಯ ರೈಲ್ವೆ, ಹುಬ್ಬಳ್ಳಿ.

* ಹುದ್ದೆಗಳ ಸಂಖ್ಯೆ : 46.

* ಉದ್ಯೋಗ ಸ್ಥಳ : ಹುಬ್ಬಳ್ಳಿ/ಬೆಂಗಳೂರು/ಮೈಸೂರು (ಕರ್ನಾಟಕ).

* ವೇತನ ಶ್ರೇಣಿ : ತಿಂಗಳಿಗೆ 5,200- 20,200/- ರೂ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು

* ಅಭ್ಯರ್ಥಿಯು 01 ಜನವರಿ 2025 ಕ್ಕೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ಮೀರಿರಬಾರದು.

* ಅಭ್ಯರ್ಥಿಯು 10ನೇ, 12ನೇ, B.Sc ಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಅಕ್ಟೋಬರ್‌ 19, 2024.

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 19, 2024.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

• ಕ್ರೀಡಾ ಪ್ರಯೋಗಗಳು

• ಶಿಕ್ಷಣ ಅರ್ಹತೆ

• ದೈಹಿಕ ಸಾಮರ್ಥ್ಯ ಪರೀಕ್ಷೆ

• ಡಾಕ್ಯುಮೆಂಟ್ ಪರಿಶೀಲನೆ

• ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವುದು ಹೇಗೆ?

* ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

* swr.indianrailways.gov.in ಈ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಿಕೊಳ್ಳಿ.

* ಅರ್ಜಿಯೊಂದಿಗೆ ಐಡಿ ಪುರಾವೆ, ಶೈಕ್ಷಣಿಕ ಅಂಕ ಪಟ್ಟಿ, ಇತ್ತೀಚಿನ ಭಾವಚಿತ್ರ, ರೆಸ್ಯೂಮ್, ಯಾವುದೇ ಕೆಲಸ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಕಳುಹಿಸಬೇಕು.

* ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ 19 ನವೆಂಬರ್-2024 ರಂದು ಅಥವಾ ಅದಕ್ಕೂ ಮೊದಲೇ ಈ ಕೆಳಗೆ ನಮೂದಿಸಿದ ವಿಳಾಸಗಳಿಗೆ ಕಳುಹಿಸಬೇಕು.

ಇದನ್ನೂ ಓದಿ: ಬಾಗಲಕೋಟೆ ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಅರ್ಜಿ ಸಲ್ಲಿಸುವ ವಿಳಾಸ

* ವಲಯ ರೈಲ್ವೇ/ಹೆಡ್ ಕ್ವಾರ್ಟರ್ಸ್ ಕೋಟಾ ವಿರುದ್ಧ ಕ್ರೀಡಾ ಕೋಟಾ : ಸಹಾಯಕ ಸಿಬ್ಬಂದಿ ಅಧಿಕಾರಿ/ಹೆಚ್ಕ್ಯು., ನೈಋತ್ಯ ರೈಲ್ವೆ ಹೆಚ್ಕ್ಯು ಕಚೇರಿ, ಸಿಬ್ಬಂದಿ ಇಲಾಖೆ, ರೈಲು ಸೌಧ, ಗದಗ ರಸ್ತೆ, ಹುಬ್ಬಳ್ಳಿ-580020.

* ಬೆಂಗಳೂರು ವಿಭಾಗದ ಕೋಟಾ ವಿರುದ್ಧ ಕ್ರೀಡಾ ಕೋಟಾ : ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ, DRM ಕಚೇರಿ ಸಂಕೀರ್ಣ, ನೈಋತ್ಯ ರೈಲ್ವೆ, ಬೆಂಗಳೂರು-560023.

* ಹುಬ್ಬಳ್ಳಿ ವಿಭಾಗದ ಕೋಟಾ ವಿರುದ್ಧ ಕ್ರೀಡಾ ಕೋಟಾ : ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ, DRM ಕಚೇರಿ ಕಾಂಪೌಂಡ್, ನೈಋತ್ಯ ರೈಲ್ವೆ, ಹುಬ್ಬಳ್ಳಿ-560020.

* ಮೈಸೂರು ವಿಭಾಗದ ಕೋಟಾ ವಿರುದ್ಧ ಕ್ರೀಡಾ ಕೋಟಾ : ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ, ನೈಋತ್ಯ ರೈಲ್ವೆ, ಇರ್ವಿನ್ ರಸ್ತೆ, ಮೈಸೂರು-570001.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್