AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UCO Bank LBO Recruitment 2025: 250 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ನಾಳೆ ಮುಕ್ತಾಯ

ಯುಕೋ ಬ್ಯಾಂಕ್ 250 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 5. ಯಾವುದೇ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ವಯಸ್ಸು 20-30 ವರ್ಷ. ಅರ್ಜಿ ಶುಲ್ಕ SC/ST/PwBD ಗೆ 175 ರೂ. ಮತ್ತು ಇತರರಿಗೆ 850 ರೂ. ಅಧಿಕೃತ ವೆಬ್​ಸೈಟ್​​​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

UCO Bank LBO Recruitment 2025: 250 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ನಾಳೆ ಮುಕ್ತಾಯ
Uco Bank Recruitment
ಅಕ್ಷತಾ ವರ್ಕಾಡಿ
|

Updated on: Feb 04, 2025 | 3:29 PM

Share

ಯುಕೋ ಬ್ಯಾಂಕ್ 250 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಜನವರಿ 16ರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಾಳೆ ಅಂದರೆ ಫೆಬ್ರವರಿ 5 ರಂದು ನಿಗದಿಪಡಿಸಲಾಗಿದೆ. ಇನ್ನೂ ಅರ್ಜಿ ನಮೂನೆಗಳನ್ನು ಸಲ್ಲಿಸದ ಅರ್ಹ ಅಭ್ಯರ್ಥಿಗಳು ಯುಕೋ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ucobank.com ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಏನು?

ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು. ಅಭ್ಯರ್ಥಿಗಳು ಹುದ್ದೆಗೆ ನೋಂದಾಯಿಸುವಾಗ ಮಾನ್ಯವಾದ ಅಂಕಪಟ್ಟಿ / ಪದವಿ ಪ್ರಮಾಣಪತ್ರವನ್ನು ಹೊಂದಿರಬೇಕು ಮತ್ತು ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ನಮೂದಿಸಬೇಕು. ಇದಲ್ಲದೇ ಅಭ್ಯರ್ಥಿಯು 20 ವರ್ಷದಿಂದ 30 ವರ್ಷ ವಯಸ್ಸಿನವರಾಗಿರಬೇಕು.

ಇದಲ್ಲದೆ, ಅರ್ಜಿ ಸಲ್ಲಿಸುವಾಗ, ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಶುಲ್ಕವನ್ನು ಸಹ ಪಾವತಿಸಬೇಕಾಗುತ್ತದೆ. ಅರ್ಜಿ ಶುಲ್ಕ ಅಥವಾ ಮಾಹಿತಿ ಶುಲ್ಕಗಳು SC/ST/PwBD ಅಭ್ಯರ್ಥಿಗಳಿಗೆ 175 ರೂ. ಮತ್ತು ಇತರರಿಗೆ 850 ರೂ. ನಿಗದಿಪಡಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಗೆ ಬ್ಯಾಂಕ್ ವಹಿವಾಟು ಶುಲ್ಕಗಳು/ ಮಾಹಿತಿ ಶುಲ್ಕಗಳನ್ನು ಅಭ್ಯರ್ಥಿಯೇ ಭರಿಸಬೇಕಾಗುತ್ತದೆ. ಒಮ್ಮೆ ಪಾವತಿಸಿದ ಶುಲ್ಕ/ ಮಾಹಿತಿ ಶುಲ್ಕಗಳನ್ನು ಯಾವುದೇ ಖಾತೆಯಲ್ಲಿ ಮರುಪಾವತಿಸಲಾಗುವುದಿಲ್ಲ ಅಥವಾ ಯಾವುದೇ ಇತರ ಪರೀಕ್ಷೆ ಅಥವಾ ಆಯ್ಕೆಗೆ ಅದನ್ನು ಕಾಯ್ದಿರಿಸಲಾಗುವುದಿಲ್ಲ.

ಇದನ್ನೂ ಓದಿ: ಬ್ಯಾಂಕ್‌ಗಳಿಂದ ಹಿಡಿದು ನ್ಯಾಯಾಲಯದವರೆಗೆ, ಫೆಬ್ರವರಿಯಲ್ಲಿ ಲಭ್ಯವಿರುವ ಸರ್ಕಾರಿ ಉದ್ಯೋಗಗಳ ಮಾಹಿತಿ ಇಲ್ಲಿದೆ

ಖಾಲಿ ಹುದ್ದೆಗಳ ವಿವರಗಳು ಈ ಕೆಳಗಿನಂತಿವೆ:

  • ಕರ್ನಾಟಕ: 35 ಹುದ್ದೆಗಳು
  • ಗುಜರಾತ್: 57 ಹುದ್ದೆಗಳು
  • ಮಹಾರಾಷ್ಟ್ರ: 70 ಹುದ್ದೆಗಳು
  • ಅಸ್ಸಾಂ: 30 ಹುದ್ದೆಗಳು
  • ತ್ರಿಪುರ: 13 ಹುದ್ದೆಗಳು
  • ಸಿಕ್ಕಿಂ: 6 ಹುದ್ದೆಗಳು
  • ನಾಗಾಲ್ಯಾಂಡ್: 5 ಹುದ್ದೆಗಳು
  • ಮೇಘಾಲಯ: 4 ಹುದ್ದೆಗಳು
  • ಕೇರಳ: 15 ಹುದ್ದೆಗಳು
  • ತೆಲಂಗಾಣ ಮತ್ತು ಆಂಧ್ರಪ್ರದೇಶ: 10 ಹುದ್ದೆಗಳು
  • ಜಮ್ಮು ಮತ್ತು ಕಾಶ್ಮೀರ: 5 ಹುದ್ದೆಗಳು

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್