AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: UPSC ಉದ್ಯೋಗ ಆಕಾಂಕ್ಷಿಗಳಿಗೆ ದೊಡ್ಡ ಸುದ್ದಿ.. ಮಹತ್ವದ ವಿಧಾನ-ನಿರ್ಧಾರ ಕೈಗೊಂಡ ಕೇಂದ್ರ ಲೋಕ ಸೇವಾ ಆಯೋಗ, ಏನದು?

ಯಾವುದೇ UPSC ಪರೀಕ್ಷೆಗಳಿಗೆ ಇನ್ನು ಮುಂದೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ, ಒಂದು ಬಾರಿ ನೋಂದಣಿಯನ್ನು ಪೂರ್ಣಗೊಳಿಸಿದರೆ ಸಾಕು. ಹಾಗಾದರೆ ಈ ಹಿಂದೆ ವ್ಯವಸ್ಥೆ ಏನಿತ್ತು?

Big News: UPSC ಉದ್ಯೋಗ ಆಕಾಂಕ್ಷಿಗಳಿಗೆ ದೊಡ್ಡ ಸುದ್ದಿ.. ಮಹತ್ವದ ವಿಧಾನ-ನಿರ್ಧಾರ ಕೈಗೊಂಡ ಕೇಂದ್ರ ಲೋಕ ಸೇವಾ ಆಯೋಗ, ಏನದು?
UPSC ಉದ್ಯೋಗ ಆಕಾಂಕ್ಷಿಗಳಿಗೆ ಒಳ್ಳೆಯ ಸುದ್ದಿ.. ಮಹತ್ವದ ವಿಧಾನ-ನಿರ್ಧಾರ ಕೈಗೊಂಡ ಆಯೋಗ, ಏನದು?
TV9 Web
| Edited By: |

Updated on: Aug 24, 2022 | 5:52 PM

Share

ಇದೇ ನೇಮಕಾತಿ ವರ್ಷಕ್ಕೆ ಅನ್ವಯವಾಗುವಂತೆ UPSC ತನ್ನ ಅಭ್ಯರ್ಥಿಗಳಿಗೆ ಒಂದು ಬಾರಿ ನೋಂದಣಿ ಸೌಲಭ್ಯವನ್ನು ಆರಂಭಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಆಯ್ಕೆಯಾಗ ಬಯಸುವ ಅಭ್ಯರ್ಥಿಗಳು ಒಮ್ಮೆ ಮಾತ್ರ ನೋಂದಾಯಿಸಿಕೊಂಡರೆ ಸಾಕು. ಅದರಕಿಂದಲೇ ಮುಂದೆ ಎಲ್ಲ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯ ನೋಂದಣಿ ಪೂರ್ಣಗೊಂಡ ನಂತರ, ಆಯೋಗದ ಸರ್ವರ್‌ಗಳಲ್ಲಿ ಮಾಹಿತಿಯು ಸುರಕ್ಷಿತವಾಗಿರುತ್ತದೆ ಎಂದು ಯುಪಿಎಸ್‌ಸಿ ಹೇಳಿದೆ. UPSC ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವೈಯಕ್ತಿಕ ವಿವರಗಳನ್ನು ಭರ್ತಿ ಮಾಡುವ ಮೂಲಕ ಒಂದು ಬಾರಿ ನೋಂದಣಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಈ ಹಿಂದೆ ಪ್ರತಿ ಬಾರಿ ಅರ್ಜಿ ಸಲ್ಲಿಸಿದಾಗ ವೈಯಕ್ತಿಕ ವಿವರಗಳನ್ನು ಪದೇ ಪದೇ ಭರ್ತಿ ಮಾಡಬೇಕಿತ್ತು. ಹೊಸ ವಿಧಾನವು ಪದೇ ಪದೇ ಮಾಹಿತಿಯನ್ನು ನಮೂದಿಸುವ ಮೂಲಕ ಸಮಯವನ್ನು ವ್ಯರ್ಥ ಮಾಡುವುದನ್ನು ತಪ್ಪಿಸಲು ಸಹಾಯ ಮಾಡುತ್ತದೆ.

ಒಂದು ಬಾರಿ ನೋಂದಣಿ ಪೂರ್ಣಗೊಂಡ ನಂತರ, ಪ್ರತಿ ಪರೀಕ್ಷೆಗೆ ನಿಮ್ಮ ಅರ್ಜಿಯನ್ನು ಸಲ್ಲಿಸುವಾಗ ನೀವು ಇನ್ನು ಮುಂದೆ ವೈಯಕ್ತಿಕ ಮಾಹಿತಿಯನ್ನು ಒದಗಿಸುವ ಅಗತ್ಯವಿಲ್ಲ. ಹೊಸ ವಿಧಾನವು ಸಮಯವನ್ನು ಸಹ ಉಳಿಸುತ್ತದೆ. ಮಾಹಿತಿಯನ್ನು ತ್ವರಿತವಾಗಿ ಭರ್ತಿ ಮಾಡುವಾಗ ಆಗುವ ತಪ್ಪುಗಳನ್ನು ತಪ್ಪಿಸುತ್ತದೆ.

One Time Registration Facility ಒಂದು ಬಾರಿ ನೋಂದಣಿ ಏನು ಹಾಗೆಂದ್ರೆ..

ಇನ್ನು ಮುಂದೆ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸಲು ಒಂದು ಬಾರಿ ನೋಂದಣಿ ಕಡ್ಡಾಯವಾಗಿದೆ. ಒಮ್ಮೆ ನೋಂದಾಯಿಸಿಕೊಂಡರೆ ಸಾಕು.. ಯಾವಾಗ ಬೇಕಾದರೂ ಅರ್ಜಿ ಸಲ್ಲಿಸುವಾಗ ಪ್ರಕ್ರಿಯೆ ಪೂರ್ಣಗೊಳ್ಳುವುದು ಸುಲಭ. ಆದರೆ ಯುಪಿಎಸ್‌ಸಿ ಉದ್ಯೋಗಾಕಾಂಕ್ಷಿಗಳು ಇಲ್ಲಿಯವರೆಗೆ ಈ ಸೌಲಭ್ಯದ ಕೊರತೆಯಿಂದ ಸಾಕಷ್ಟು ತೊಂದರೆಗಳನ್ನು ಎದುರಿಸಿದ್ದಾರೆ. ಈ ಸಮಸ್ಯೆಗಳನ್ನು ಪರಿಗಣಿಸಿ, UPSC ಇತ್ತೀಚೆಗೆ OTR ಅನ್ನು ಪ್ರಾರಂಭಿಸಿದೆ. ಅವರ ಸಮಯವನ್ನು ಉಳಿಸಲು ಮತ್ತು ಅಪ್ಲಿಕೇಶನ್ ಪ್ರಕ್ರಿಯೆಯನ್ನು ಹೆಚ್ಚು ಸುಲಭಗೊಳಿಸಲು OTR ವೇದಿಕೆಯನ್ನು ಪರಿಚಯಿಸಲಾಗಿದೆ. ಇನ್ನು ಮುಂದೆ UPSC ಯಲ್ಲಿ ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವಾಗ ಪ್ರತಿ ಬಾರಿಯೂ ಮೂಲಭೂತ, ವೈಯಕ್ತಿಕ ವಿವರಗಳನ್ನು ಭರ್ತಿ ಮಾಡುವ ಅಗತ್ಯವಿಲ್ಲ.

ಆದರೆ… ಮೊದಲ ಬಾರಿಗೆ ನೋಂದಾಯಿಸುವಾಗ ಜಾಗರೂಕರಾಗಿರಿ!

ನೀವು ಒದಗಿಸುವ ಮೂಲ ಮಾಹಿತಿಯನ್ನು ಸರ್ವರ್‌ಗಳಲ್ಲಿ ಸುರಕ್ಷಿತವಾಗಿ ಸಂಗ್ರಹಿಸಲಾಗುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ಒಂದು ಬಾರಿ ನೋಂದಣಿ ಪ್ರಕ್ರಿಯೆಯು ತುಂಬಾ ಉಪಯುಕ್ತವಾಗಿದೆ. ತಪ್ಪಾಗಿಯೂ ತಪ್ಪು ಮಾಹಿತಿ ನಮೂದಿಸಲು ಅವಕಾಶವಿಲ್ಲ. ಅಪ್ಲಿಕೇಶನ್ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ, ನಾವು ಅಧಿಕೃತ ವೆಬ್‌ಸೈಟ್‌ನಲ್ಲಿ ಒಂದು ಬಾರಿ ನೋಂದಣಿ ವೇದಿಕೆಯನ್ನು ಪ್ರಾರಂಭಿಸಿದ್ದೇವೆ. OTR ಸೂಚನೆಗಳನ್ನು ಪರಿಶೀಲಿಸಲು ಮತ್ತು ಭವಿಷ್ಯದ ಯಾವುದೇ ಸಮಸ್ಯೆಗಳನ್ನು ತಪ್ಪಿಸಲು ಮೊದಲ ಬಾರಿಗೆ ನೋಂದಾಯಿಸುವಾಗ ಕಾಳಜಿಯನ್ನು ತೆಗೆದುಕೊಳ್ಳಬೇಕು ಎಂದೂ UPSC ತನ್ನ ಅಭ್ಯರ್ಥಿಗಳಿಗೆ ಎಚ್ಚರಿಸಿದೆ.

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ