AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸಿಂಗ್ ಅಧಿಕಾರಿಯಾಗಲು ಉತ್ತಮ ಅವಕಾಶ! ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಯಂ ಹುದ್ದೆಗಳಿಗೆ UPSC ಅಧಿಸೂಚನೆ ಬಿಡುಗಡೆ

UPSC ESI Recruitment 2024: ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಯಂ ಆಧಾರದ ಮೇಲೆ ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಲೋಕಸೇವಾ ಆಯೋಗವು (UPSC) ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 1930 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಮಾರ್ಚ್ 7 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಯ ಸಂಪೂರ್ಣ ವಿವರ ಇಲ್ಲಿದೆ.

ನರ್ಸಿಂಗ್ ಅಧಿಕಾರಿಯಾಗಲು ಉತ್ತಮ ಅವಕಾಶ! ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಯಂ ಹುದ್ದೆಗಳಿಗೆ UPSC ಅಧಿಸೂಚನೆ ಬಿಡುಗಡೆ
ನರ್ಸಿಂಗ್ ಅಧಿಕಾರಿಯಾಗಲು ಉತ್ತಮ ಅವಕಾಶ!
Follow us
ಸಾಧು ಶ್ರೀನಾಥ್​
|

Updated on: Mar 07, 2024 | 10:43 PM

ನರ್ಸಿಂಗ್ ಅಭ್ಯರ್ಥಿಗಳಿಗೆ ಅಲರ್ಟ್​​ ಸಂದೇಶ… 1,930 ನರ್ಸಿಂಗ್ ಅಧಿಕಾರಿ ಹುದ್ದೆಗಳ ಭರ್ತಿಗಾಗಿ UPSC ಅಧಿಸೂಚನೆ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ (Employees State Insurance Corporation) ಖಾಯಂ ಆಧಾರದ ಮೇಲೆ ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಲೋಕಸೇವಾ ಆಯೋಗವು (Union Public Service Commission -UPSC) ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 1,930 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 7 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವರ್ಗವಾರು ಪೋಸ್ಟ್ ವಿವರಗಳು.. ಒಟ್ಟು ನರ್ಸಿಂಗ್ ಅಧಿಕಾರಿ ಹುದ್ದೆಗಳು: 1,930

UR ವರ್ಗದಲ್ಲಿ ಪೋಸ್ಟ್‌ಗಳ ವಿವರಗಳು: 892 EWS ವರ್ಗದಲ್ಲಿ ಪೋಸ್ಟ್‌ಗಳ ವಿವರಗಳು: 193 OBC ವರ್ಗದಲ್ಲಿ ಪೋಸ್ಟ್‌ಗಳ ವಿವರಗಳು: 446 SC ವರ್ಗದಲ್ಲಿ ಪೋಸ್ಟ್‌ಗಳ ವಿವರಗಳು: 235 ST ವರ್ಗದಲ್ಲಿ ಪೋಸ್ಟ್‌ಗಳ ವಿವರಗಳು: 164 ಅಂಗವಿಕಲ ವರ್ಗದಲ್ಲಿನ ಪೋಸ್ಟ್‌ಗಳ ವಿವರಗಳು: 168

ಆಸಕ್ತ ಅಭ್ಯರ್ಥಿಗಳು B.Sc (Hons) ನರ್ಸಿಂಗ್/ B.Sc ನರ್ಸಿಂಗ್/ ಪೋಸ್ಟ್ ಬೇಸಿಕ್ B.Sc ನರ್ಸಿಂಗ್ ಉತ್ತೀರ್ಣರಾಗಿರಬೇಕು. ಅಲ್ಲದೆ ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನರ್ಸ್ ಅಥವಾ ನರ್ಸ್ ಸೂಲಗಿತ್ತಿಯಾಗಿ ನೋಂದಾಯಿಸಿಕೊಳ್ಳಬೇಕು. ಅಥವಾ ಜನರಲ್ ನರ್ಸಿಂಗ್ ಮಿಡ್ ವೈಫರಿಯಲ್ಲಿ ಡಿಪ್ಲೊಮಾ ಕೋರ್ಸ್. ಅಲ್ಲದೆ 50 ಹಾಸಿಗೆಗಳ ಆಸ್ಪತ್ರೆಯಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಮಾರ್ಚ್ 27, 2024 ರಂತೆ ಸಾಮಾನ್ಯ ಮತ್ತು EWS ಅಭ್ಯರ್ಥಿಗಳಿಗೆ ಅಭ್ಯರ್ಥಿಗಳ ವಯಸ್ಸು 30 ವರ್ಷಗಳನ್ನು ಮೀರಬಾರದು. OBC 33 ವರ್ಷ, SC/ST 35 ವರ್ಷ, ಅಂಗವಿಕಲರಿಗೆ 40 ವರ್ಷ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕದಡಿ ರೂ.25 ಪಾವತಿಸಬೇಕು. ಮಹಿಳೆಯರು, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಅಂತಿಮ ಆಯ್ಕೆಯು ಲಿಖಿತ ಪರೀಕ್ಷೆ, ಪ್ರಮಾಣಪತ್ರ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಇತ್ಯಾದಿಗಳನ್ನು ಆಧರಿಸಿರುತ್ತದೆ.

ಪ್ರಮುಖ ದಿನಾಂಕಗಳ ವಿವರಗಳು..

ಆನ್‌ಲೈನ್ ಅಪ್ಲಿಕೇಶನ್‌ಗಳ ಪ್ರಾರಂಭ ದಿನಾಂಕ: ಮಾರ್ಚ್ 7, 2024. ಆನ್‌ಲೈನ್ ಅಪ್ಲಿಕೇಶನ್‌ಗೆ ಕೊನೆಯ ದಿನಾಂಕ: ಮಾರ್ಚ್ 27, 2024. ಅಪ್ಲಿಕೇಶನ್ ಪರಿಷ್ಕರಣೆ ದಿನಾಂಕಗಳು: ಮಾರ್ಚ್ 28 ರಿಂದ ಏಪ್ರಿಲ್ 03, 2024. ಲಿಖಿತ ಪರೀಕ್ಷೆಯ ದಿನಾಂಕ: ಜುಲೈ 07, 2024. ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸಂಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ