ಯುಪಿಎಸ್‌ಸಿ ಪರೀಕ್ಷೆಗಳಲ್ಲಿ ಬಯೋಮೆಟ್ರಿಕ್ ಗುರುತಿಸುವಿಕೆ ಕಡ್ಡಾಯ; ಈ ವರ್ಷದಿಂದ ಹೊಸ ವ್ಯವಸ್ಥೆ ಜಾರಿ

ಯುಪಿಎಸ್ಸಿ 2025ರ ಜೂನ್‌ನಿಂದ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆ ಮತ್ತು ಕೃತಕ ಬುದ್ಧಿಮತ್ತೆ (AI)ಯನ್ನು ಕಡ್ಡಾಯಗೊಳಿಸುತ್ತಿದೆ. ಪೂಜಾ ಖೇಡ್ಕರ್ ಪ್ರಕರಣದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಂಚನೆ ತಡೆಯಲು ಬೆರಳಚ್ಚು ದೃಢೀಕರಣ, ಮುಖ ಗುರುತಿಸುವಿಕೆ, QR ಕೋಡ್ ಸ್ಕ್ಯಾನಿಂಗ್ ಮತ್ತು AI-ಆಧಾರಿತ ಸಿಸಿಟಿವಿ ಬಳಕೆ ಮಾಡಲಾಗುವುದು. ಆದರೆ ಪೂರ್ವಭಾವಿ ಪರೀಕ್ಷೆಗೆ ಈ ನಿಯಮ ಅನ್ವಯಿಸುವುದಿಲ್ಲ.

ಯುಪಿಎಸ್‌ಸಿ ಪರೀಕ್ಷೆಗಳಲ್ಲಿ ಬಯೋಮೆಟ್ರಿಕ್ ಗುರುತಿಸುವಿಕೆ ಕಡ್ಡಾಯ; ಈ ವರ್ಷದಿಂದ ಹೊಸ ವ್ಯವಸ್ಥೆ ಜಾರಿ
Upsc Mandates Biometric Security

Updated on: May 25, 2025 | 1:12 PM

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಈಗ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಿದೆ. ಇದರೊಂದಿಗೆ, ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ಅನ್ನು ಸಹ ಬಳಸುತ್ತದೆ. ನಾಗರಿಕ ಸೇವಾ ಪರೀಕ್ಷೆಗಳಲ್ಲಿ ವಂಚನೆ ಮತ್ತು ಇತರ ಅಕ್ರಮಗಳನ್ನು ತಡೆಗಟ್ಟಲು ಯುಪಿಎಸ್‌ಸಿ ಈ ಹೊಸ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದ್ದು, ಈ ವರ್ಷದಿಂದ ಇದು ಜಾರಿಗೆ ಬರಲಿದೆ.

ನಿರ್ಧಾರ ಏಕೆ ತೆಗೆದುಕೊಳ್ಳಲಾಯಿತು?

ಪೂಜಾ ಖೇಡ್ಕರ್ ಪ್ರಕರಣ ಬೆಳಕಿಗೆ ಬಂದ ನಂತರ ಯುಪಿಎಸ್‌ಸಿ ಈ ನಿರ್ಧಾರ ತೆಗೆದುಕೊಂಡಿದೆ. ಪೂಜಾ ಖೇಡ್ಕರ್ ಅವರು ಮಾಜಿ ಐಎಎಸ್ ಪ್ರೊಬೆಷನರ್ ಆಗಿದ್ದು, ಕಳೆದ ವರ್ಷ ನಕಲಿ ದಾಖಲೆ ಮತ್ತು ದುರ್ನಡತೆಯ ಆರೋಪದ ಮೇಲೆ ಅವರನ್ನು ಸೇವೆಯಿಂದ ವಜಾಗೊಳಿಸಲಾಯಿತು.

2025ರ ಜೂನ್‌ನಿಂದ ಹೊಸ ವ್ಯವಸ್ಥೆ ಜಾರಿ:

ಈ ವರ್ಷದ ಜೂನ್‌ನಿಂದ ಯುಪಿಎಸ್‌ಸಿ ನಡೆಸುವ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಬಯೋಮೆಟ್ರಿಕ್ ಆಧಾರಿತ ಗುರುತಿಸುವಿಕೆ ಮತ್ತು AI ಬಳಕೆಯನ್ನು ಜಾರಿಗೆ ತರಲಾಗುವುದು. ಆದಾಗ್ಯೂ, ಈ ವ್ಯವಸ್ಥೆಯು 2025 ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಅನ್ವಯಿಸುವುದಿಲ್ಲ. ಪೂರ್ವಭಾವಿ ಪರೀಕ್ಷೆಯನ್ನು ಮೇ 25 ರಂದು ನಡೆಸಲು ನಿರ್ಧರಿಸಲಾಗಿದೆ.

ವಾಸ್ತವವಾಗಿ ಯುಪಿಎಸ್‌ಸಿ ಕೇಂದ್ರ ಸರ್ಕಾರದಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇಮಕಾತಿಗಾಗಿ 14 ಪ್ರಮುಖ ಪರೀಕ್ಷೆಗಳ ಜೊತೆಗೆ ನೇಮಕಾತಿ ಪರೀಕ್ಷೆಗಳು ಮತ್ತು ಸಂದರ್ಶನಗಳನ್ನು ನಡೆಸುತ್ತದೆ. ಇದರಲ್ಲಿ NDA, ಅರಣ್ಯ ಅಧಿಕಾರಿ ಸೇರಿದಂತೆ ಹಲವು ಪ್ರಮುಖ ಪರೀಕ್ಷೆಗಳು ಸೇರಿವೆ.

ಇದನ್ನೂ ಓದಿ: ಪದವೀಧರರಿಗೆ ಸರ್ಕಾರಿ ಬ್ಯಾಂಕಿನಲ್ಲಿ ಉದ್ಯೋಗವಕಾಶ, 2600 ಹುದ್ದೆಗಳು ಖಾಲಿ

ಹೊಸ ವ್ಯವಸ್ಥೆ ಹೇಗಿರಲಿದೆ?

ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಬಯೋಮೆಟ್ರಿಕ್ ಆಧಾರಿತ ಗುರುತಿನ ವ್ಯವಸ್ಥೆಯನ್ನು ಯುಪಿಎಸ್‌ಸಿ ಜಾರಿಗೆ ತರಲಿದೆ. ಈ ಹೊಸ ವ್ಯವಸ್ಥೆಯಡಿಯಲ್ಲಿ, ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳ ಬೆರಳಚ್ಚುಗಳನ್ನು ದೃಢೀಕರಿಸಲಾಗುತ್ತದೆ. ಇದರೊಂದಿಗೆ, ಪರೀಕ್ಷೆಯ ಸಮಯದಲ್ಲಿ ವಂಚನೆಯನ್ನು ತಡೆಗಟ್ಟಲು ಮುಖ ಗುರುತಿಸುವಿಕೆ ಮತ್ತು QR ಕೋಡ್‌ನೊಂದಿಗೆ ಇ-ಪ್ರವೇಶ ಕಾರ್ಡ್‌ನ ಸ್ಕ್ಯಾನಿಂಗ್ ಮತ್ತು AI ಆಧಾರಿತ ಸಿಸಿಟಿವಿ ಕಣ್ಗಾವಲು ಇರಲಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us