AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆಯೊಬ್ಬರು ರಿಸೈನ್​​ ಕೊಟ್ಟಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ತಾನು ಕೆಲಸಕ್ಕೆ ಸೇರಿದ ಖಾಸಗಿ ಆಸ್ಪತ್ರೆಯಲ್ಲಿ ಆದ ಕರಾಳ ಘಟನೆಯ ಬಗ್ಗೆ ವೈದ್ಯೆ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ. "ವೈದ್ಯಕೀಯ ಕ್ಷೇತ್ರಕ್ಕೆ ಇಂತಹ ಪ್ರಾಮಾಣಿಕ ವೈದ್ಯರ ಅಗತ್ಯವಿದೆ" ಎಂದು ಸಾವಿರಾರು ಜನರು ಕಮೆಂಟ್ ಮಾಡುತ್ತಿದ್ದಾರೆ.

Video Viral: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!
ಡಾ. ಪ್ರಭ್ಲೀನ್ ಕೌರ್
ಅಕ್ಷತಾ ವರ್ಕಾಡಿ
|

Updated on: Apr 08, 2026 | 12:19 PM

Share

ಚಂಡೀಗಢ: ವೈದ್ಯಕೀಯ ವೃತ್ತಿ ಎಂದರೆ ಅದೊಂದು ಪವಿತ್ರ ಸೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ರೋಗಿಗಳನ್ನು ಕೇವಲ ‘ಹಣ ಮಾಡುವ ಯಂತ್ರ’ಗಳಂತೆ ನೋಡುತ್ತಿವೆ ಎಂಬ ಕಹಿಸತ್ಯವೊಂದನ್ನು ಯುವ ವೈದ್ಯೆಯೊಬ್ಬರು ಧೈರ್ಯವಾಗಿ ಬಯಲಿಗೆಳೆದಿದ್ದಾರೆ. ಚಂಡೀಗಢದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದ ಈ ಘಟನೆ ಈಗ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಏನಿದು ಘಟನೆ?

ಯುವ ವೈದ್ಯೆ ಡಾ. ಪ್ರಭ್ಲೀನ್ ಕೌರ್ ಅವರು ಚಂಡೀಗಢದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದಕ್ಕೆ ವೈದ್ಯೆಯಾಗಿ ಕೆಲಸಕ್ಕೆ ಸೇರಿದ್ದರು. ಆದರೆ, ಕೆಲಸಕ್ಕೆ ಸೇರಿದ ಮೊದಲ ದಿನವೇ ಆಸ್ಪತ್ರೆಯ ಆಡಳಿತ ಮಂಡಳಿಯ ಅಮಾನವೀಯ ಧೋರಣೆಯನ್ನು ಕಂಡು ಬೆಚ್ಚಿಬಿದ್ದ ಅವರು, ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಹೊರಬಂದಿದ್ದಾರೆ.

ಆಸ್ಪತ್ರೆಯ ವಿರುದ್ಧ ಡಾ. ಪ್ರಭ್ಲೀನ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಆಸ್ಪತ್ರೆಯ ‘ಕಲೆಕ್ಷನ್’ ದಂಧೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಆಸ್ಪತ್ರೆಗೆ ಬರುವ ಸಾಮಾನ್ಯ ರೋಗಿಗಳಿಗೂ ಪ್ರಾಥಮಿಕ ಚಿಕಿತ್ಸೆ ನೀಡುವ ಬದಲು, ಹಣ ಸುಲಿಗೆ ಉದ್ದೇಶದಿಂದ ನೇರವಾಗಿ ಐಸಿಯು (ICU) ಗೆ ದಾಖಲಿಸಲಾಗುತ್ತಿದೆ. ಆಸ್ಪತ್ರೆಯ ಆದಾಯವನ್ನು ಹೆಚ್ಚಿಸಲು ವೈದ್ಯರ ಮೇಲೆ ಒತ್ತಡ ಹೇರಲಾಗುತ್ತಿದೆ. ರೋಗಿಗಳಿಗೆ ಅಗತ್ಯವಿಲ್ಲದಿದ್ದರೂ ದುಬಾರಿ ಪರೀಕ್ಷೆ ಮತ್ತು ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಈ ಸಂಪೂರ್ಣ ದಂಧೆಯು ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರ ನೇರ ನಿಯಂತ್ರಣದಲ್ಲಿ ನಡೆಯುತ್ತಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ನನಗೆ ವೃತ್ತಿ ನೈತಿಕತೆಯೇ ಮುಖ್ಯ:

ವಿಡಿಯೋದಲ್ಲಿ ಭಾವುಕರಾಗಿಯೇ ಮಾತನಾಡಿದ ಡಾ. ಪ್ರಭ್ಲೀನ್, “ನನಗೆ ಸಂಬಳ ಅಥವಾ ದೊಡ್ಡ ಹುದ್ದೆಗಿಂತ ರೋಗಿಗಳ ಸುರಕ್ಷತೆ ಮತ್ತು ವೈದ್ಯಕೀಯ ವೃತ್ತಿಯ ನೈತಿಕತೆಯೇ ಮುಖ್ಯ. ರೋಗಿಗಳನ್ನು ಲೂಟಿ ಮಾಡುವ ಇಂತಹ ವ್ಯವಸ್ಥೆಯಲ್ಲಿ ನಾನು ಭಾಗಿಯಾಗಲಾರೆ,” ಎಂದು ಹೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್:

ಡಾ. ಪ್ರಭ್ಲೀನ್ ಕೌರ್ ಅವರ ಈ ಧೈರ್ಯದ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ನೆಟ್ಟಿಗರು ಆಸ್ಪತ್ರೆಯ ಹೆಸರನ್ನು ಬಹಿರಂಗಪಡಿಸಿ ಅದರ ಪರವಾನಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. “ವೈದ್ಯಕೀಯ ಕ್ಷೇತ್ರಕ್ಕೆ ಇಂತಹ ಪ್ರಾಮಾಣಿಕ ವೈದ್ಯರ ಅಗತ್ಯವಿದೆ” ಎಂದು ಸಾವಿರಾರು ಜನರು ಕಮೆಂಟ್ ಮಾಡುತ್ತಿದ್ದಾರೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ