AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಮೋಹನ್ ಬಾಬು ಮನೆಯಲ್ಲಿ ಕಳ್ಳತನ, ಆರೋಪಿ ಬಂಧನದ ಬಳಿಕ ಮೂಡಿದೆ ಅನುಮಾನ

Manchu Mohan Babu: ತೆಲುಗು ಚಿತ್ರರಂಗದ ಹಿರಿಯ ನಟ ಮಂಚು ಮೋಹನ್ ಬಾಬು ಮನೆಯಲ್ಲಿ ದೊಡ್ಡ ಮೊತ್ತದ ಹಣ ಕಳ್ಳತನವಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರಾದರೂ ಹಣದ ಬಗ್ಗೆ ಅನುಮಾನಗಳು ಮೂಡಿವೆ.

ನಟ ಮೋಹನ್ ಬಾಬು ಮನೆಯಲ್ಲಿ ಕಳ್ಳತನ, ಆರೋಪಿ ಬಂಧನದ ಬಳಿಕ ಮೂಡಿದೆ ಅನುಮಾನ
ಮಂಜುನಾಥ ಸಿ.
|

Updated on: Sep 26, 2024 | 3:12 PM

Share

ತೆಲುಗು ಚಿತ್ರರಂಗದ ಹಿರಿಯ ನಟ ಮೋಹನ್ ಬಾಬು ಮನೆಯಲ್ಲಿ ದೊಡ್ಡ ಮೊತ್ತದ ಹಣ ಕಳ್ಳತನವಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೋಹನ್ ಬಾಬು ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹತ್ತು ಲಕ್ಷ ರೂಪಾಯಿ ಹಣವನ್ನು ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಕಳ್ಳತನ ಮಾಡಿದ್ದು, ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಕಳ್ಳನ ಬಂಧನದ ಬಳಿಕ ಹಣದ ಮೂಲದ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾಗಿವೆ.

ಮೋಹನ್ ಬಾಬು ಅವರಿಗೆ ಸೇರಿದ ಜಲಪಳ್ಳಿಯಲ್ಲಿ ನಿರ್ಮಿಸಲಾಗಿರುವ ಕೆಲಸಗಾರರ ಮನೆಯಲ್ಲಿ ಇಡಲಾಗಿದ್ದ 10 ಲಕ್ಷ ರೂಪಾಯಿ ಹಣ ಕಾಣೆಯಾಗಿತ್ತು. ಹಣ ಕಾಣೆಯಾದ ಬಳಿಕ ಮೋಹನ್ ಬಾಬು ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಗಣೇಶ್ ನಾಯಕ್ ಸಹ ನಾಪತ್ತೆಯಾಗಿದ್ದ. ಹಾಗಾಗಿ ಪೊಲೀಸರು ಗಣೇಶ್ ನಾಯಕ್ ಹಿಂದೆ ಬಿದ್ದಿದ್ದರು.

ಗಣೇಶ್ ನಾಯಕ್, ಸರ್ವೆಂಟ್ ಮನೆಯಲ್ಲಿ ಇಡಲಾಗಿದ್ದ ಹತ್ತು ಲಕ್ಷ ರೂಪಾಯಿ ಹಣವನ್ನು ಎತ್ತಿಕೊಂಡು ತಿರುಪತಿಗೆ ಪರಾರಿಯಾಗಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ತಿರುಪತಿಗೆ ತೆರಳಿ ಆರೋಪಿಯನ್ನು ಬಂಧಿಸಿ, ಹಣವನ್ನೂ ಸಹ ರಿಕವರಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಮೋಹನ್ ಬಾಬು ಪುತ್ರಿ

ಆದರೆ ಪೊಲೀಸರು ಹಣದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಹತ್ತು ಲಕ್ಷ ರೂಪಾಯಿ ನಗದು ಹಣವನ್ನು ಕೆಲಸಗಾರರಿಗೆ ಎಂದು ಕಟ್ಟಿಸಲಾಗಿದ್ದ ಮನೆಯಲ್ಲಿ ಇಡಲು ಕಾರಣವೇನು ಎಂಬ ಪ್ರಶ್ನೆ ಎದ್ದಿದೆ. ಮೋಹನ್ ಬಾಬು ಹೇಳಿರುವಂತೆ, ಆ ಹಣವನ್ನು ಉದ್ಯಮಕ್ಕೆ ಸಂಬಂಧಿಸಿದಂತೆ ಯಾರಿಗೋ ನೀಡಲು ಅಲ್ಲಿ ಇರಿಸಿದ್ದರಂತೆ. ಆದರೆ ಪೊಲೀಸರು ಐದು ಲಕ್ಷಕ್ಕಿಂತಲೂ ಹೆಚ್ಚಿನ ಹಣ ವಶಪಡಿಸಿಕೊಂಡರೆ ಅದರ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕಿರುತ್ತದೆ. ಅಂತೆಯೇ ಮೋಹನ್ ಬಾಬು ಪ್ರಕರಣದಲ್ಲಿಯೂ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಒಂದೊಮ್ಮೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದಲ್ಲಿ ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಮೋಹನ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಲಿದೆ.

ಮೋಹನ್ ಬಾಬು ತೆಲುಗು ಚಿತ್ರರಂಗದ ಹಿರಿಯ ನಟ. ಚಿರಂಜೀವಿ ಹಾಗೂ ಮೋಹನ್ ಬಾಬು ಬಹುತೇಕ ಒಂದೇ ಸಮಯದಲ್ಲಿ ಚಿತ್ರರಂಗಕ್ಕೆ ಬಂದವರು. ‘ಪೆದರಾಯುಡು’ ಸೇರಿದಂತೆ ಕೆಲ ಹಿಟ್ ಸಿನಿಮಾಗಳಲ್ಲಿ ಮೋಹನ್ ಬಾಬು ನಟಿಸಿದ್ದಾರೆ. ಆದರೆ ಚಿರಂಜೀವಿ, ಬಾಲಕೃಷ್ಣ ರೀತಿ ಮಾಸ್ ಹೀರೋ ಎನಿಸಿಕೊಳ್ಳಲು ಸಾಧ್ಯವಾಗಿಲ್ಲ. ಮೋಹನ್ ಬಾಬು ಅವರ ಮಕ್ಕಳಾದ ಮಂಚು ವಿಷ್ಣು, ಮಂಚು ಮನೋಜ್ ಇಬ್ಬರೂ ಸಹ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಪುತ್ರಿ ಮಂಚು ಲಕ್ಷ್ಮಿ ಸಹ ಕೆಲವು ಸಿನಿಮಾಗಳಲ್ಲಿ ನಟಿಸಿದ್ದು, ಇದೀಗ ಬಾಲಿವುಡ್​ಗೆ ಹಾರಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ