AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರುಂಧತಿ’ ಚಿತ್ರಕ್ಕೆ 13 ವರ್ಷ; ಬಿಗ್​ ಹಿಟ್​ ಸಿಗಲು ಕಾರಣರಾದ ಎಲ್ಲರನ್ನೂ ನೆನಪಿಸಿಕೊಂಡ ಅನುಷ್ಕಾ ಶೆಟ್ಟಿ

‘ಅರುಂಧತಿ’ ಸಿನಿಮಾ ಬಿಡುಗಡೆಯಾಗಿ 13 ವರ್ಷ ಕಳೆದಿದೆ.  ಈ ಸಂದರ್ಭದಲ್ಲಿ ನಟಿ ಅನುಷ್ಕಾ ಶೆಟ್ಟಿ ಅವರು ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

‘ಅರುಂಧತಿ’ ಚಿತ್ರಕ್ಕೆ 13 ವರ್ಷ; ಬಿಗ್​ ಹಿಟ್​ ಸಿಗಲು ಕಾರಣರಾದ ಎಲ್ಲರನ್ನೂ ನೆನಪಿಸಿಕೊಂಡ ಅನುಷ್ಕಾ ಶೆಟ್ಟಿ
ಅರುಂಧತಿ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ
TV9 Web
| Edited By: |

Updated on:Jan 17, 2022 | 10:00 AM

Share

ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಕನ್ನಡದ ಹುಡುಗಿಯಾದರೂ ಜನಪ್ರಿಯತೆ ಗಳಿಸಿದ್ದು ಪರಭಾಷೆಯ ಚಿತ್ರರಂಗದಲ್ಲಿ. ತೆಲುಗು ಮತ್ತು ತಮಿಳಿನಲ್ಲಿ ಅವರು ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು (Anushka Shetty Movies) ನೀಡಿದ್ದಾರೆ. ಅವರ ಅಭಿನಯಕ್ಕೆ ಭಾರತೀಯ ಚಿತ್ರರಂಗ ತಲೆದೂಗಿದೆ. ಯಾವ ಪಾತ್ರ ಕೊಟ್ಟರೂ ಅತ್ಯುತ್ತಮವಾಗಿ ನಿರ್ವಹಿಸಬಲ್ಲ ಕಲೆ ಅನುಷ್ಕಾ ಶೆಟ್ಟಿ ಅವರಿಗೆ ಇದೆ. ಅವರ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್​ ನೀಡಿದ ಸಿನಿಮಾ ‘ಅರುಂಧತಿ’. ಸೂಪರ್​  ನ್ಯಾಚುರಲ್​ ಕಥಾಹಂದರ ಹೊಂದಿದ್ದ ಆ ಚಿತ್ರ ತೆರೆಕಂಡು 13 ವರ್ಷ ಕಳೆದಿದೆ. ಆ ಸಿನಿಮಾದಲ್ಲಿ ಅರುಂಧತಿ ಮತ್ತು ಜೇಜಮ್ಮ ಎಂಬ ಎರಡು ಪಾತ್ರಗಳನ್ನು ಅನುಷ್ಕಾ ಶೆಟ್ಟಿ ನಿಭಾಯಿಸಿದ್ದರು. ಗಲ್ಲಾಪೆಟ್ಟಿಗೆಯಲ್ಲಿ ‘ಅರುಧಂತಿ’ (Arundhati Movie) ಸಿನಿಮಾ ಮೋಡಿ ಮಾಡಿತ್ತು. ಖ್ಯಾತ ಡೈರೆಕ್ಟರ್​ ಕೋಡಿ ರಾಮಕೃಷ್ಣ ಅವರ ನಿರ್ದೇಶನದಲ್ಲಿ ಮೂಡಿಬಂದ ಆ ಸಿನಿಮಾ ಇಂದಿಗೂ ಸಿನಿಪ್ರಿಯರ ಫೇವರಿಟ್​ ಚಿತ್ರವಾಗಿ ಉಳಿದುಕೊಂಡಿದೆ. ‘ಅರುಂಧತಿ’ ಸಿನಿಮಾ ಬಿಡುಗಡೆಯಾಗಿ 13 ವರ್ಷ ಕಳೆದಿದೆ.  ಈ ಸಂದರ್ಭದಲ್ಲಿ ಅನುಷ್ಕಾ ಶೆಟ್ಟಿ ಅವರು ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ತಮ್ಮ ಗೆಲುವಿಗೆ ಕಾರಣರಾದ ಎಲ್ಲರನ್ನೂ ಅವರು ನೆನಪು ಮಾಡಿಕೊಂಡಿದ್ದಾರೆ.

2009ರ ಜ.16ರಂದು ‘ಅರುಂಧತಿ’ ತೆರೆಕಂಡಿತ್ತು. ಆಂಧ್ರಪ್ರದೇಶ ಮಾತ್ರವಲ್ಲದೇ ಕರ್ನಾಟಕ ಮತ್ತು ತಮಿಳುನಾಡಿನಲ್ಲೂ ಈ ಸಿನಿಮಾ ಧೂಳೆಬ್ಬಿಸಿತ್ತು. ಚಿತ್ರರಂಗದಲ್ಲಿ ಅನುಷ್ಕಾ ಶೆಟ್ಟಿ ಅವರಿಗೆ ಹೊಸ ಇಮೇಜ್​ ನೀಡುವಲ್ಲಿ ‘ಅರುಂಧತಿ’ ಚಿತ್ರದ ಕೊಡುಗೆ ದೊಡ್ಡದು. ಆ ಕಾರಣಕ್ಕಾಗಿ ಅವರಿಗೆ ಈ ಸಿನಿಮಾ ಯಾವಾಗಲೂ ಸ್ಪೆಷಲ್​ ಆಗಿರಲಿದೆ.

‘ಯಾವುದೇ ನಟಿಗೆ ಜೀವನದಲ್ಲಿ ಒಮ್ಮೆ ಮಾತ್ರ ಸಿಗಬಹುದಾದ ಪಾತ್ರ ಜೇಜಮ್ಮ. ಅಂಥ ಅವಕಾಶ ಪಡೆದಿದ್ದಕ್ಕೆ ನಾನು ಧನ್ಯಳು. ಕೋಡಿ ರಾಮಕೃಷ್ಣ ಮತ್ತು ನಿರ್ಮಾಪಕ ಶ್ಯಾಮ್​ ಪ್ರಸಾದ್ ಹಾಗೂ ಇಡೀ ತಂಡಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಪ್ರೇಕ್ಷಕರ ಬೆಂಬಲಕ್ಕೆ ದೊಡ್ಡ ಧನ್ಯವಾದ. ಈ ಸಿನಿಮಾ ಯಾವಾಗಲೂ ನನ್ನ ಮನಸ್ಸಿಗೆ ಹತ್ತಿರವಾಗಿರಲಿದೆ’ ಎಂದು ಅನುಷ್ಕಾ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಈ ಸಿನಿಮಾದಲ್ಲಿ ಸೋನು ಸೂದ್ ಮುಖ್ಯ ವಿಲನ್​ ಆಗಿ ನಟಿಸಿದ್ದರು. ಸಯ್ಯಾಜಿ ಶಿಂದೆ, ಮನೋರಮಾ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದರು. ‘ಅರುಂಧತಿ’ ಚಿತ್ರದ ಬಳಿಕ ಅನುಷ್ಕಾ ಶೆಟ್ಟಿ ಅವರ ಡಿಮ್ಯಾಂಡ್​ ಹೆಚ್ಚಿತು.

ಇದನ್ನೂ ಓದಿ:

ಅನುಷ್ಕಾ ಶೆಟ್ಟಿ-ವಿಜಯ್​ ಸೇತುಪತಿ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ; ನಿರ್ದೇಶನ ಯಾರದ್ದು?

ಅನುಷ್ಕಾ ಶೆಟ್ಟಿ ಪಾಲಿಗೆ ಮತ್ತೆ ನಾಗವಲ್ಲಿ ಪಾತ್ರ? ಫ್ಯಾನ್ಸ್ ಕಿವಿ ಚುರುಕಾಗಿಸಿದೆ ಈ ಸುದ್ದಿ

Published On - 9:56 am, Mon, 17 January 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ