AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17ನೇ ಬೆಂಗಳೂರು ಚಲನಚಿತ್ರೋತ್ಸವ ಮುಕ್ತಾಯ; ಹಂಸಲೇಖಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ

2026ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತೆರೆಬಿದ್ದಿದೆ. ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಲಾಗಿದೆ. ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಎಲ್ಲ ಸಿನಿಮಾಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಹೇಳಿದರು.

17ನೇ ಬೆಂಗಳೂರು ಚಲನಚಿತ್ರೋತ್ಸವ ಮುಕ್ತಾಯ; ಹಂಸಲೇಖಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ
Bengaluru International Film Festival
ಮದನ್​ ಕುಮಾರ್​
|

Updated on: Feb 06, 2026 | 9:10 PM

Share

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) 17ನೇ ಆವೃತ್ತಿಗೆ ಶುಕ್ರವಾರ (ಫೆಬ್ರವರಿ 6) ರಾತ್ರಿ ನಗರದ ಲುಲು ಮಾಲ್‌ನಲ್ಲಿ ತೆರೆ ಬಿದ್ದಿದೆ. ಜಪಾನ್‌ ದೇಶದ ‘ಲಾಸ್ಟ್‌ ಲ್ಯಾಂಡ್‌’, ಮರಾಠಿಯ ‘ಸಬರ್‌ ಬೊಂಡಾ’ ಮತ್ತು ಕನ್ನಡದ ‘ವನ್ಯಾ’ ಸಿನಿಮಾಗಳು ಅನುಕ್ರಮವಾಗಿ ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ಸ್ಪರ್ಧಾ ವಿಭಾಗಗಳಲ್ಲಿ ‘ಅತ್ಯುತ್ತಮ ಸಿನಿಮಾ’ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡವು. ಹಿರಿಯ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಿದ್ದರು. ಚಿತ್ರೋತ್ಸವದ ರಾಯಭಾರಿ ಪ್ರಕಾಶ್‌ ರಾಜ್‌, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ. ಸಾಧು ಕೋಕಿಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲ ಮುಂತಾದವರು ಈ ಸಮಾರಂಭದಲ್ಲಿ ಹಾಜರಿದ್ದರು.

ವೇದಿಕೆಯಲ್ಲಿ ಹಂಸಲೇಖ ಅವರು ಮಾತನಾಡಿದರು. ‘ಕಲೆಗೆ ಸಂಬಂಧಿಸಿದ ಸಮಾರಂಭಕ್ಕೆ ಸಮಾರೋಪ ಇರುವುದಿಲ್ಲ. ಅದು ಆರಂಭ. ಸೃಷ್ಟಿ ಕಾರ್ಯ ನಿರಂತರ. ಅದು ಯಾವತ್ತೂ ನಿಲ್ಲುವುದಿಲ್ಲ. ಕೃಷಿಕರು, ಕಾರ್ಮಿಕರು, ಸಿನಿಮಾದವರಿಗೆ ಯಾವುದೇ ವ್ಯತ್ಯಾಸ ಇಲ್ಲ. ಒಬ್ಬನಿಂದ ಸಿನಿಮಾ ಆಗುವುದಿಲ್ಲ. ಅದೊಂದು ಸಾಮೂಹಿಕ ಕೃಷಿ’ ಎಂದು ಅವರು ಹೇಳಿದರು.

‘ಈ ಚಿತ್ರೋತ್ಸವಕ್ಕೆ ರಾಜ್ಯ ಸರ್ಕಾರ ತುಂಬು ಸಹಾಕಾರ‌ ನೀಡಿದೆ. ಜೀವಮಾನ ಪ್ರಶಸ್ತಿ ಸಿಕ್ಕಿದ್ದು ಖುಷಿಯ ವಿಷಯ. ನಾವು ಕನ್ನಡ ನಾಡಿಗೆ ಋಣಿಯಾಗಿರಬೇಕು. ಕನ್ನಡದಲ್ಲಿ ಬದುಕಿದ್ದೇವೆ. ಕಲೆ ಎನ್ನುವುದು ಆತ್ಮದ ಮೇವು. ಕಲೆಯ ಮೇವನ್ನು ಆರು ದಶಕಗಳ ಕಾಲ‌ ಮೇದಿರುವೆ. ಇಲ್ಲಿನ ವೈಚಾರಿಕತೆ, ಆಧ್ಯಾತ್ಮಿಕತೆ ನನ್ನನ್ನು ಬೆಳೆಸಿದೆ. ಪ್ರಜಾಪ್ರಭುತ್ವದ ಬೀಜ ಬಿತ್ತಿದ ಬಸವ ನಾಡಿನಲ್ಲಿ ಪ್ರಜಾಪ್ರಭುತ್ವ ರಕ್ಷಿಸುವ ಸಿನಿಮಾ ‌ಮಾಡಬೇಕಿದೆ’ ಎಂದು ಹಂಸಲೇಖ ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ‘ಚಿತ್ರೋತವಗಳಿಂದ ಬೇರೆ ಭಾಷೆಯ ಸಿನಿಮಾ ನೋಡಬಹುದಾಗಿದೆ. ಇದು ಕಲೆಯನ್ನು ಉತ್ಕೃಷ್ಟ ಮಟ್ಟಕ್ಕೆ ಒಯ್ಯುವ ಉದ್ದೇಶದಿಂದ ಮಾಡುವ ಚಿತ್ರೋತ್ಸವ. ಪ್ರಜಾಪ್ರಭುತ್ವ ಉಳಿಸುವ ಜವಾಬ್ದಾರಿ ಕಲೆ ಮೇಲಿದೆ ಎಂಬುವ ಮಾತು ಒಪ್ಪುವೆ. ಎಲ್ಲ ರೀತಿಯ ಸಿನಿಮಾಗಳು ಬರಬೇಕು. ಕಮರ್ಷಿಯಲ್, ಕಲಾತ್ಮಕ ಸೇರಿ ಎಲ್ಲಾ ರೀತಿಯಲ್ಲಿ ಬರಬೇಕು. ಕಲೆಯಲ್ಲಿ ಭಯ, ಭೀತಿ ಇರಬಾರದು. ಅಭಿವ್ಯಕ್ತಿ ಇರಬೇಕು’ ಎಂದು ಹೇಳಿದರು.

ಇದನ್ನೂ ಓದಿ: ಮತ್ತೆ ಕೈ ಜೋಡಿಸಿದ ಹಂಸಲೇಖ, ಎಸ್. ಮಹೇಂದರ್: ಹೊಸ ಸಿನಿಮಾ ಅನೌನ್ಸ್

ಚಿತ್ರೋತ್ಸವದ ರಾಯಭಾರಿ ಪ್ರಕಾಶ್‌ ರಾಜ್‌ ಮಾತನಾಡಿ, ‘ಭಾಷೆ ಹಲವಾದರೂ, ಭಾವನೆ ಒಂದೇ. ಬೇರೆಬೇರೆ ವ್ಯಾಕರಣ ಇದ್ದರೂ, ಅದರ ಗರ್ಭದಲ್ಲಿ ಗ್ರಹಿಕೆ ಒಂದೇ. ಮನುಷ್ಯ ವಿಕಾಸದಲ್ಲಿ ಸಿನಿಮಾ ಹೊಸ ಭಾಷೆ. ಅದು ಅವನ ಸಂಸ್ಕೃತಿ, ನೋವು, ಅಳಲು ದಾಖಲಿಸುತ್ತದೆ. ಚಿತ್ರೋತ್ಸವ ಎನ್ನುವುದು ಪ್ರಪಂಚದ ಬೇರೆಬೇರೆ ಮಾನವೀಯ ಗ್ರಹಿಕೆಗಳನ್ನು ಹಂಚಿಕೊಳ್ಳುವ ವೇದಿಕೆ. ದೇಶಕ್ಕೆ, ಸಮಾಜಕ್ಕೆ ಆದ ನೋವು ದೊಡ್ಡ ನೋವು. ಅಂತಹ ನೋವುಗಳನ್ನು ಸಿನಿಮಾಗಳು ದಾಖಲಿಸಬೇಕು. ಈ‌ ನಿಟ್ಟಿನಲ್ಲಿ‌ ಚಿತ್ರೋತ್ಸವ ಉತ್ಸವವಾಗಿದೆ. ಹಂಸಲೇಖ ಅವರನ್ನು ಸನ್ಮಾನಿಸಿ ಉತ್ಸವದ ಅರ್ಥವನ್ನು ಹೆಚ್ಚಿಸಿದೆ’ ಎಂದರು.

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ. ಸಾಧು ಕೋಕಿಲ ಮಾತನಾಡಿ, ‘ಭಾರತದ ಅತೀ ದೊಡ್ಡ ಚಿತ್ರೋತ್ಸವ ನಮ್ಮದಾಗಿದೆ. ಇದಕ್ಕೆ ಶ್ರಮಿಸಿದ ಸರ್ಕಾರ ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸುವೆ’ ಎಂದರು. ಈ ಸಮಾರಂಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್‌ ವಿನೋದ್‌ ಚಂದ್ರ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ಮುರಳಿ ಮುಂತಾದವರು ಭಾಗಿಯಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ
ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ